ವರುಣದಲ್ಲಿ ಸಿದ್ದರಾಮಯ್ಯ ಸೋಲೋದು ಕಟ್ಟಿಟ್ಟಬುತ್ತಿ. ಇನ್ಮುಂದೆ ವರುಣದಲ್ಲಿ ಸಿದ್ದರಾಮಯ್ಯ ಆಟ ನಡೆಯಲ್ಲ ಅಂತ ಮಾಜಿ ಸಚಿವ ಈಶ್ವರಪ್ಪ ಹೇಳಿದ್ರು. ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡ್ತಿರೋ ಹಿನ್ನೆಲೆಯಲ್ಲಿ ಮೈಸೂರಿಗೆ ಈಶ್ವರಪ್ಪ ಆಗಮಿಸಿದ್ರುಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತಾಡಿದ್ರು. ಬಾಯಿಗೆ ಬಂದಂತೆ ಮಾತನಾಡುವುದು ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲೇ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಚಾಮುಂಡೇಶ್ವರಿಯಲ್ಲಿ ಸೋತು ಈಗ ಆ ಕಡೆ ಮುಖ ಹಾಕಲು ಹೆದರುತ್ತಿದ್ದಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲೂ ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಿದ್ದಾರೆ.ಅವರು ಮುಂದಿನ ಬಾರಿಯೂ ಚುನಾವಣೆಗೆ ನಿಲ್ಲುತ್ತಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದರು.
ಈಶ್ವರಪ್ಪನವರಿಗೆ ಟಿಕೆಟ್ ನೀಡದೇ ಒಳ್ಳೆಯ ಕೆಲಸ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಟಾಂಗ್ ಕೊಟ್ರು. ನಾನು ಒಂದು ಮಾತು ತಪ್ಪು ಮಾತಾಡಿದ್ದರೆ ತೋರಿಸಲಿ. ನಾನ್ಯಾವಾಗ ಬಾಯಿಗೆ ಬಂದಂತೆ ಮಾತಾಡಿದ್ದೀನಿ ತೋರಿಸಲಿ. ಸಿದ್ಧರಾಮಯ್ಯ ಕುರುಬರೆಲ್ಲ ನನ್ನೊಂದಿಗೆ ಬನ್ನಿ ಅಂತಾರೆ.ಡಿ ಕೆ ಶಿವಕುಮಾರ್ ಒಕ್ಕಲಿಗರೆಲ್ಲ ನನ್ನ ಹಿಂದೆ ಬನ್ನಿ ಎನ್ನುತ್ತಾರೆ. ಸಿದ್ಧರಾಮಯ್ಯ ಜಾತಿವಾದಿ. ನಾನು ರಾಷ್ಟ್ರೀಯ ವಾದಿ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾದಾಗ ಮಾತನಾಡುವುದು ತಪ್ಪಾ ಎಂದು ಪ್ರಶ್ನಿಸಿದರು.
ಪಕ್ಷದ ಶಿಸ್ತಿನ ಸಿಪಾಯಿ
ನಾನು ಭಾರತೀಯ ಜನತಾ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನನಗೆ ಟಿಕೆಟ್ ನೀಡದಿದ್ದರೂ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ರು . ನಾನು ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧನಾಗಿದ್ಧೇನೆ. ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದವರು ಮುಂದಿನ ದಿನಗಳಲ್ಲಿ ಅನುಭವಿಸಲಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವವನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ಧರ್ಮವಿರೋಧಿಗಳು ಹೆಚ್ಚಾಗಿರುವ ತಮಿಳುನಾಡಿನಲ್ಲೇ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದೆ.ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲವಾಗಲಿದೆ.ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಪ್ರಧಾನಿ ಮೋದಿಯವರು ನಡೆಸಲಿರುವ ರೋಡ್ ಶೋ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ . ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು
ಮೋದಿಗೆ ಗಿಫ್ಟ್
ಅರಮನೆ ನಗರಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮೈಸೂರಿಗೆ ಬರಲಿರುವ ಪ್ರಧಾನಿ ಮೋದಿಗೆ ನೀಡಲು ಸ್ಪೆಷಲ್ ಗಿಫ್ಟ್ ರೆಡಿ ಆಗಿದೆ. ಮೈಸೂರಿನ ವೀಳ್ಯದೆಲೆ, ಮೈಸೂರು ಪಾಕ್, ಮೈಸೂರು ಪೇಟ, ಮೈಸೂರ್ ಸಿಲ್ಕ್, ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಅರಮನೆಯ ಕಲಾಕೃತಿ, ರೇಷ್ಮೆ ಪಂಚೆ, ವಲ್ಲಿ, ಶ್ರೀಗಂಧ ಸೇರಿದಂತೆ 18 ಪದಾರ್ಥಗಳನ್ನ ನೀಡಿ ಪ್ರಧಾನಿ ಮೋದಿಗೆ ಸ್ವಾಗತ ಕೋರಲಾಗುವುದು.