ಬೆಂಗಳೂರು : ರಾಜಕೀಯ ಜಂಜಾಟಗಳ ಮಧ್ಯೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ(Siddaramaiah) ಅವರು ತಾವೊಬ್ಬ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಹಗ್ಗಜಗ್ಗಾಟ ಮುಗಿದರೂ ಸಹ ಸಚಿವ ಸಂಪುಟ ರಚನೆ ಸೇರಿದಂತೆ ಹಲವು ರಾಜಕೀಯ ಒತ್ತಡಗಳ ಮಧ್ಯೆ ನಿನ್ನೆ ಹೈದ್ರಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಆದರೆ ಈ ಎಲ್ಲಾ ರಾಜಕೀಯ ಟೆನ್ಷನ್ಗಳ ನಡುವೆ ಸಿದ್ದರಾಮಯ್ಯ ಅವರು ಆರ್ಸಿಬಿ ಮ್ಯಾಚ್ ವೀಕ್ಷಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.