ಹಾಸನ: ರಾಜ್ಯ ಕಾಂಗ್ರೆಸ್ನಲ್ಲಿ ಮೂವರು ಡಿಸಿಎಂಗಳ ನೇಮಕ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ʻಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂʼ ಎನ್ನುವ ಮೂಲಕ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇನ್ನೂ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತನಾಡಿರುವ ಅವರು, ಚುನಾವಣೆಗೂ ಮೊದಲು ಐದು ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬೋ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯೋದಾಗಿ ಸಾಬೀತು ಮಾಡಿದಾರೆ ಎಂದು ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಬಡವರಿಗಾಗಿ ಶೋಷತರಿಗೆ ಕೆಲಸ ಮಾಡೋ ಹಂಬಲ ಕಾಂಗ್ರೆಸ್ಗಿದೆ, ಹಾಗಾಗಿ ನೀವೆಲ್ಲಾ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು, ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆಧ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದಿದ್ದಾರೆ.
ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ, ಇಷ್ಟೊಂದು ಹಣ ಖರ್ಚು ಮಾಡುತ್ತಿ ರುವಾಗ ಜನರ ಬೆಂಬಲ ಬೇಕು. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ.ಇದನ್ನ ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು. ಆಗ ಸಿದ್ದರಾಮಯ್ಯ ನವರ ಬಲ ಹಚ್ಚಿ ಮುಂದಿನ ಐದು ವರ್ಷ ಗ್ಯಾರಂಟಿ ಯೋಜನೆ ಮುಂದುವರೆಸುತ್ತಾರೆ. ಅವರು ಮುಖ್ಯಮಂತ್ರಿ ಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾದ್ಯವಾಗುತ್ತೆ, ಹಾಗಾಗಿ ನಿಮ್ಮಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದ ಯತೀಂದ್ರ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.