ಬೆಂಗಳೂರು : ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಬ್ಯುಸಿಯಾಗಿರುವ ಸಿಎಂ ಸಿದ್ದರಾಮಯ್ಯ ಭಾನುವಾರ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದ ಬಹುನಿರೀಕ್ಷಿತ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ಚಾಲನೆ ನೀಡುವ ಸಲುವಾಗಿ ಸಿದ್ದರಾಮಯ್ಯ ಕಂಡಕ್ಟರ್ ಕೆಲಸ ಮಾಡಲಿದ್ದಾರೆ. ಜೂನ್ 11 ರಂದು ಮೆಜೆಸ್ಟಿಕ್ನಿಂದ ಹೊರಡುವ ಮಾರ್ಗಸಂಖ್ಯೆ 43ರ ಬಿಎಂಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡುವ ಮೂಲಕ ಮೊಟ್ಟ ಮೊದಲ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಭಾನುವಾರದಂದು ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ ತೆರಳಲಿರುವ ರೂಟ್ ಸಂಖ್ಯೆ 43ರ ಬಸ್ನಲ್ಲಿ ಸಿದ್ದರಾಮಯ್ಯ ಕಂಡಕ್ಟರ್ ಕೆಲಸ ಮಾಡಲಿದ್ದಾರೆ. ಇದಾದ ಬಳಿಕ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ.
ಶಕ್ತಿ ಯೋಜನೆಗಳಂತೆಯೇ ಇನ್ನುಳಿದ ನಾಲ್ಕು ಯೋಜನೆಗಳನ್ನೂ ಅತ್ಯಂತ ವಿಭಿನ್ನವಾಗಿ ಲೋಕಾರ್ಪಣೆಗೊಳಿಸಲು ಪ್ಲಾನ್ ನಡೆದಿದೆ ಎನ್ನಲಾಗಿದೆ. ಅಲ್ಲದೇ ಒಂದೊಂದು ಗ್ಯಾರಂಟಿ ಯೋಜನೆಯು ಬೇರೆ ಬೇರೆ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ.ಗೃಹಜ್ಯೋತಿ ಯೋಜನೆ ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಗೆ ಮೈಸೂರಿನಲ್ಲಿ, ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಹಾಗೂ ಯುವ ನಿಧಿ ಯೋಜನೆಯನ್ನು ಮಂಗಳೂರಿನಲ್ಲಿ ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.