• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?

ಪ್ರತಿಧ್ವನಿ by ಪ್ರತಿಧ್ವನಿ
March 18, 2023
in ಕರ್ನಾಟಕ, ರಾಜಕೀಯ
0
ಕೋಲಾರದಿಂದ ಹಿಂದೆ ಸರಿದ ಸಿದ್ದರಾಮಯ್ಯ? ರಾಹುಲ್‌ ಸಲಹೆಯೇನು?
Share on WhatsAppShare on FacebookShare on Telegram

2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಚುರುಕು ಮುಟ್ಟಿದೆ. ಈಗಾಗಲೇ ರಾಜಕೀಯ ಪಕ್ಷಗಳು ಟಿಕೆಟ್‌ ಹಂಚಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭಿನ್ನಮತ ಸ್ಪೋಟಗೊಳ್ಳದಂತೆ ಎಲ್ಲಾ ಪ್ರಯತ್ನ ನಡೆಯುತ್ತಿದೆ.

ADVERTISEMENT

ಈ ನಡುವೆ ಕಾಂಗ್ರೆಸ್‌ ರಾಜ್ಯ ನಾಯಕರು ದಿಲ್ಲಿಯಲ್ಲಿ ಬೀಡು ಬಿಟ್ಟಿದ್ದು, ಟಿಕೆಟ್‌ ಹಂಚಿಕೆ ವಿಚಾರವಾಗಿ ಚರ್ಚಿಸುತ್ತಿದ್ದಾರೆ. ಈಗಾಗಲೇ ಹಾಲಿ ಏಳು ಶಾಸಕರಿಗೆ ಟಿಕೆಟ್‌ ಸಿಗುವುದು ಅನುಮಾನವಾಗಿದ್ದು, ಈ ನಡುವೆ ಕೋಲಾರದಿಂದಲೇ ಸ್ಪರ್ಧಿಸುತ್ತಾರೆ ಎಂದು ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲೂ ಮಹತ್ವದ ಬದಲಾವಣೆ ಆಗುವ ಸಾಧ್ಯತೆ ಇದೆ.

ಕೋಲಾರದಲ್ಲಿ ಸಿದ್ದರಾಮಯ್ಯ ವಿರೋಧಿ ಅಲೆ ಇದ್ದು, ವರ್ತೂರು ಪ್ರಕಾಶ್‌ ಪರವಾಗಿ ಅಲೆ ಇದೆ, ಹಾಗಾಗಿ, ಕೋಲಾರದಲ್ಲಿ ಸ್ಪರ್ಧೆಗೆ ನಿಲ್ಲುವುದರ ಬಗ್ಗೆ ಮತ್ತೊಂದು ಬಾರಿ ಯೋಚಿಸಿ ನಿರ್ಧರಿಸಿ ಎಂದು ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಹೇಳಿದ್ದಾರೆಂದು ವರದಿಯಾಗಿದೆ. ಅದಾಗ್ಯೂ, ಕಾಂಗ್ರೆಸ್‌ ಅಧಿಕೃತ ಮೂಲಗಳು ಈ ಸುದ್ದಿಯನ್ನು ಖಚಿತ ಪಡಿಸಿಲ್ಲ.

ಚಾಮುಂಡೇಶ್ವರಿ ಕ್ಷೇತ್ರದಿಂದ ಜಿಟಿ ದೇವೇಗೌಡರ ಎದುರು ಸೋತು, ಬಾದಾಮಿಯಲ್ಲಿ ರಾಮುಲು ಎದುರು ಕಡಿಮೆ ಅಂತರದಲ್ಲಿ ಗೆದ್ದಿದ್ದ ಸಿದ್ದರಾಮಯ್ಯ ಈ ಬಾರಿ ಮತ್ತೆ ಬಾದಾಮಿಯಿಂದ ಕಣಕ್ಕೆ ಇಳಿಯುವುದು ಸಂದೇಹವಿದೆ. ನೇರವಾಗಿ ಆರ್‌ಎಸ್‌ಎಸ್‌ ಜೊತೆಗೆ ಸೈದ್ಧಾಂತಿಕವಾಗಿ ತಿಣುಕಾಡುವ ಸಿದ್ದರಾಮಯ್ಯರನ್ನು ಹೇಗಾದರೂ ಸೋಲಿಸಲು ಸಂಘಪರಿವಾರವೇ ಮುತುವರ್ಜಿ ವಹಿಸಿರುವುದರಿಂದ ಸಿದ್ದುಗೆ ಎಲ್ಲಿ ಸ್ಪರ್ಧಿಸಿದರೂ ಚುನಾವಣೆ ಕಠಿಣವಾಗುವ ಸಾಧ್ಯತೆ ಇದೆ.   

ಸದ್ಯ, ವರುಣಾ ಕ್ಷೇತ್ರದ ಕಡೆಗೆ ಸಿದ್ದರಾಮಯ್ಯ ದೃಷ್ಟಿ ನೆಡಲಿದ್ದಾರ ಎನ್ನುವ ಚರ್ಚೆ ಆರಂಭವಾಗಿದೆ. ಈಗಾಗಲೇ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆಗಾಗಿ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿರುವುದರಿಂದ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗೆಳಯಲು ಸಾಧ್ಯವಿಲ್ಲ.

ಅಲ್ಲದೆ, ಪ್ರಿಯಾಂಕಾ ಗಾಂಧಿ ಛೇಂಬರಿನಲ್ಲಿ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿರುವ ರಾಹುಲ್‌ ಗಾಂಧಿ ಸಿದ್ದರಾಮಯ್ಯ ಅವರಿಗೆ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಬಳಿಕ ಮಾತನಾಡಿರುವ ಸಿದ್ದರಾಮಯ್ಯ, “ಹೈಕಮಾಂಡ್‌ ಸೂಚನೆಯಂತೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ.

Previous Post

ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

Next Post

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯೋದು ಫಿಕ್ಸ್‌..! ಕಾರಣ ಗೊತ್ತಾ..? Siddaramaiah Withdrawing From Kolar Constituency..?

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯೋದು ಫಿಕ್ಸ್‌..! ಕಾರಣ ಗೊತ್ತಾ..? Siddaramaiah Withdrawing From Kolar Constituency..?

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯೋದು ಫಿಕ್ಸ್‌..! ಕಾರಣ ಗೊತ್ತಾ..? Siddaramaiah Withdrawing From Kolar Constituency..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada