• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೆರೆ ಹಾನಿ: ಸಂತ್ರಸ್ತರಿಗೆ ಪರಿಹಾರ ಬಿಡಗಡೆ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
August 17, 2021
in ಕರ್ನಾಟಕ
0
ನೆರೆ ಹಾನಿ: ಸಂತ್ರಸ್ತರಿಗೆ ಪರಿಹಾರ ಬಿಡಗಡೆ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ
Share on WhatsAppShare on FacebookShare on Telegram

ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಎಲ್ಲಾ ಸಂತ್ರಸ್ಥರಿಗೆ, ಮನೆ-ಬೆಳೆ-ಜಾನವಾರು ಕಳೆದುಕೊಂಡವರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಜುಲೈ 22 ರಿಂದ 26 ರ ವರೆಗೆ ಬಿದ್ದ ಭಾರಿ ಪ್ರಮಾಣದ ಮಳೆ ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳನ್ನು ಸೃಷ್ಟಿಸಿದೆ. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ–ಜಾನವಾರುಗಳು, ಮನೆಗಳು ಹಾನಿಗೊಳಗಾಗಿವೆ. ಮನೆಯೊಳಗಿದ್ದ ಪಾತ್ರೆ-ಪಗಡೆ ಕೊಚ್ಚಿಕೊಂಡು ಹೋಗಿವೆ. ಒಟ್ಟಾರೆ ಪರಿಸ್ಥಿತಿಯಲ್ಲಿ ಉಣ್ಣಲು ಅನ್ನ ಇಲ್ಲ, ಉಡಲು ಬಟ್ಟೆ ಇಲ್ಲ, ಉಳಿಯಲು ಸೂರಿಲ್ಲ, ಕುಡಿಯಲು ನೀರಿಲ್ಲ ಎನ್ನುವ ಪರಿಸ್ಥಿತಿ ಇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ʼಮನೆಯೊಳಗಿದ್ದ ಪಾತ್ರೆ ಪಗಡೆ, ಬಟ್ಟೆಗಳು, ಮಕ್ಕಳ ಶಾಲಾ ಬ್ಯಾಗು, ಪುಸ್ತಕಗಳು, ದವಸ ಧಾನ್ಯಗಳು, ಟಿವಿ, ಫ್ರಿಡ್ಜ್, ಮಿಕ್ಸರ್, ಗ್ಯಾಸ್ ಸಿಲಿಂಡರ್‌ಗಳ ಸಮೇತ ನಿತ್ಯ ಬಳಕೆಯ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಮನೆಯೊಳಗೆ ನುಗ್ಗಿದ ನೀರು ನೂರಾರು ಮನೆಗಳನ್ನು ಹಾನಿ ಮಾಡಿದೆ. ಪ್ರವಾಹದಿಂದ ಕೊಚ್ಚಿ ಬಂದ ಮಣ್ಣು, ಕೆಸರು ತುಂಬಿಕೊಂಡು ಸಾವಿರಾರು ಮನೆಗಳನ್ನು ಮುಚ್ಚಿ ಹಾಕಿದೆ. ಮಕ್ಕಳು ಮರಿಗಳಾದಿಯಾಗಿ ಎಲ್ಲರ ಆರೋಗ್ಯದ ಬಗ್ಗೆಯೂ ತುರ್ತು ಗಮನ ಹರಿಸಬೇಕಾದ, ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ.ʼ

ʼಭತ್ತದ ಗದ್ದೆಗಳು, ತೋಟದ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿವೆ, ನೀರಲ್ಲಿ ಮುಳುಗಿ ಕೊಳೆತು ಹೋಗಿವೆ. ದನದ ಕೊಟ್ಟಿಗೆಗಳು ಜಲಾವೃತ ಆಗಿರುವುದರಿಂದ ಸಂಗ್ರಹಿಸಿದ್ದ ಮೇವು ನೀರಿನಲ್ಲಿ ಕೊಚ್ಚಿ ಹೋಗಿ ಮೇವಿಗೂ ತತ್ವಾರ ಬಂದಿದೆ. 2019 ರಿಂದ 2021 ರ ವರೆಗೆ ಸತತವಾಗಿ ಈ ಜಿಲ್ಲೆಗಳು ಮೂರು ವರ್ಷದಿಂದ ನೆರೆಹಾವಳಿ ತುತ್ತಾಗುತ್ತಿವೆ.ʼ

ʼ2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.ʼ

ʼ 2019 ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ʼ

ʼಸಂಪೂರ್ಣ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ರೂಪಾಯಿ, ಭಾಗಶಃ ಮನೆ ಹಾನಿಯಾದವರಿಗೆ ಮೂರು ಲಕ್ಷ ರೂಪಾಯಿ, ಸ್ವಲ್ಪ ಹಾನಿಯಾದರೆ ಐವತ್ತು ಸಾವಿರದಿಂದ ಒಂದು ಲಕ್ಷ ಕೊಡುವುದಾಗಿ ಹೇಳಿದ್ದರು. ಆದರೆ ಮನೆ ಕಳೆದುಕೊಂಡ ಯಾರೊಬ್ಬರಿಗೂ ಈ ವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ.ʼ

ʼಅಧಿಕಾರಿಗಳು ಸತ್ಯ ಹೇಳುತ್ತಿಲ್ಲ ಎಂದು ಪ್ರವಾಹ ಪೀಡಿತ ಪ್ರದೇಶಗಳ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು ಈ ಬಗ್ಗೆಯೂ ಸರ್ಕಾರ ಗಂಭೀರವಾಗಿ ತುರ್ತು ಕ್ರಮಕ್ಕೆ ಮುಂದಾಗಬೇಕಿದೆ.ʼ

ʼಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ತೂಗು ಸೇತುವೆಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇಲ್ಲಿಯವರೆಗೂ ನಿರ್ಮಾಣ ಕಾರ್ಯ ಆಗಿಲ್ಲ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿ, ನೂರಾರು ಹೆಕ್ಟೇರ್ ತೋಟಗಳು ಕೊಚ್ಚಿ ಹೋಗಿವೆ, ಹಾಳಾಗಿವೆ. ಹಲವಾರು ಕಡೆ ತೀವ್ರ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆ, ಸೇತುವೆ, ಸರ್ಕಾರಿ ಶಾಲೆ, ಪಶು ಆಸ್ಪತ್ರೆ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಸಂಪರ್ಕ ಎಲ್ಲವೂ ಹಾಳಾಗಿರುವುದನ್ನು ನೆರೆಪೀಡಿತ ಪ್ರದೇಶಗಳ ಜನರ ಜತೆಗೇ ತೆರಳಿ ವೀಕ್ಷಿಸಿದ್ದೇನೆ. ʼ

ಸುಮಾರು ಮಂದಿ ನೆರೆಯಿಂದ ತಮಗಾದ ನಷ್ಟ ಮತ್ತು ಪಡುತ್ತಿರುವ ಸಂಕಷ್ಟಗಳನ್ನು ಕಣ್ಣೀರಿನ ಜತೆಗೆ ನನ್ನ ಜತೆ ಹಂಚಿಕೊಂಡಿದ್ದಾರೆ. ಕಾಳಿ ಯೋಜನೆಯ ಕದ್ರಾ ಅಣೆಕಟ್ಟೆನಿಂದ ಪೂರ್ವ ಸೂಚನೆ ಇಲ್ಲದೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಹಠಾತ್ ನೆರೆಗೆ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್-19 ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

2019-2020 ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಿಂದಿನ ಅವಧಿಗಳಲ್ಲಿ ಸರ್ಕಾರ ಕೊಟ್ಟ ಪರಿಹಾರ “ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ” ಎನ್ನುವಂತಾಗಿದೆ. ಹೀಗಾಗಿ,  ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ/ ಪುನರ್‌ನಿರ್ಮಿಸಬೇಕು. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags: BJPCongress Partyಬಸವರಾಜ ಬೊಮ್ಮಾಯಿಬಿಜೆಪಿಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Previous Post

ಅಫ್ಘನ್ ಬಿಕ್ಕಟ್ಟು: ವೀಸಾ ಅವಧಿ ವಿಸ್ತರಿಸುವಂತೆ ಕೇಳಿಕೊಳ್ಳುತ್ತಿರುವ ಅಫ್ಘನ್ ಮೂಲದ JNU ವಿದ್ಯಾರ್ಥಿಗಳು!

Next Post

ಹಣ ತುಂಬಿದ ಚಾಪರ್, ಕಾರುಗಳೊಂದಿಗೆ ಅಫ್ಘಾನ್ ಅಧ್ಯಕ್ಷ ಘನಿ ಪರಾರಿ: ರಷ್ಯಾ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post

ಹಣ ತುಂಬಿದ ಚಾಪರ್, ಕಾರುಗಳೊಂದಿಗೆ ಅಫ್ಘಾನ್ ಅಧ್ಯಕ್ಷ ಘನಿ ಪರಾರಿ: ರಷ್ಯಾ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada