ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಇಂದು(ಮಂಗಳವಾರ) ಬೆಳಗ್ಗೆ 11:20ಕ್ಕೆ ಪಿರಿಯಾಪಟ್ಟಣದ ಸೆಂಟ್ರಲ್ ಸ್ಕೂಲ್ ಆಫ್ ಟಿಬೇಟಿಯನ್ ಮೈದಾನಕ್ಕೆ ಹೆಲಿಕಾಫ್ಟರ್ ಮೂಲಕ ಆಗಮಿಸಲಿರುವ ಅವರು
![](https://pratidhvani.com/wp-content/uploads/2024/01/siddaramaiah-1200-1-1024x569.webp)
ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳೆಸೋಗೆ ಗ್ರಾಮದ ಸಮೀಪ ಆಯೋಜಿಸಿರುವ ಕಾವೇರಿ ನದಿಯಿಂದ 79 ಗ್ರಾಮಗಳ 150 ಕೆರೆಗಳಿಗೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಿದ್ದು, ಇದಾದ ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 1ಕ್ಕೆ ಕೊಪ್ಪ ಗ್ರಾಮಕ್ಕೆ ಭೇಟಿ ನೀಡಲಿರುವ ಅವರು, ಸಂಜೆ 4ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ, ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಜ.25ರಂದು ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವಿರಾಜಪೇಟೆಗೆ ತೆರಳಲಿರುವ ಸಿಎಂ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.