• Home
  • About Us
  • ಕರ್ನಾಟಕ
Sunday, November 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ

ನಚಿಕೇತು by ನಚಿಕೇತು
September 11, 2021
in ಕರ್ನಾಟಕ
0
ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಸವರಾಜ್ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಭಾರಿಗೆ ವಿಧಾನಮಂಡಲ ಅಧಿವೇಶನ ಶುರುವಾಗುತ್ತಿದೆ. ಸೆಪ್ಟೆಂಬರ್ 13ರಿಂದ ಶುರುವಾಗಲಿರುವ ಈ ವಿಧಾನಮಂಡಲ ಅಧಿವೇಶನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಹಣಿಯಲು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮುಂದಾಗಿವೆ. ಎರಡು ಪಕ್ಷಗಳು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಳ್ಳಲು ಸಾಕಷ್ಟು ಅಸ್ತ್ರಗಳನ್ನು ರೆಡಿ ಮಾಡಿಕೊಂಡಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಅಂತೂ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾಗಿದ್ದಾರೆ.

ADVERTISEMENT

ಇತ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಅಸ್ತ್ರಗಳಿಗೆ ಪ್ರತ್ಯುತ್ತರ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸವಾಲು ಎದುರಿಸುವ ಸಲುವಾಗಿಯೇ ಬೊಮ್ಮಾಯಿ ಸೋಮವಾರ ಬೆಳಿಗ್ಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ. ಇಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ.

ಮಾರಕ ಕೊರೋನಾ ವೈರಸ್ನಿಂದ ಇಡೀ ರಾಜ್ಯ ತತ್ತರಿಸಿ ಹೋಗಿತ್ತು. ಇದು ವಿಧಾನಮಂಡಲ ಅಧಿವೇಶನ ವಿಳಂಬಕ್ಕೆ ಕಾರಣವಾಗಿತ್ತು. ಈಗ ಸೆಪ್ಟೆಂಬರ್ 13ರಿಂದ ಆರಂಭವಾಗಲಿರುವ ಈ ವಿಧಾನಮಂಡಲ ಅಧಿವೇಶನ ಒಟ್ಟು ಹತ್ತು ದಿನಗಳ ಕಾಲ ನಡೆಯಲಿದೆ. ಇಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನೇ ಟಾರ್ಗೆಟ್ ಮಾಡಲಿದ್ದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರದ ನೆರವಿಗೆ ಬರಲಿದ್ದಾರೆ.

ಒಂದೆಡೆ ಬಸವರಾಜ್ ಬೊಮ್ಮಾಯಿ ಮೊದಲ ಅಧಿವೇಶನದಲ್ಲಿ ಪ್ರಮುಖ ವಿಧೇಯಕಗಳು ಮಂಡನೆ ಮಾಡಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ತಯಾರಿ ನಡೆಸಿಕೊಂಡಿದ್ದಾರೆ. ಇನ್ನೊಂದೆಡೆ ಸರ್ಕಾವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಪಕ್ಷದ ಆಂತರಿಕ ವಿರೋಧದ ನಡುವೆಯೂ ಸಿದ್ದರಾಮಯ್ಯ ಜಾತಿಗಣತಿ ಚರ್ಚೆಗೆ ರೆಡಿ ಆಗಿದ್ದಾರೆ.

ಅಧಿವೇಶನದಲ್ಲಿ ಜಾತಿ ಗಣತಿ ಹೋರಾಟ ನಡೆಸಲು ಪ್ಲಾನ್ ಮಾಡಿರುವ ಸಿದ್ದರಾಮಯ್ಯ, ಇದರ ಜಾರಿಗಾಗಿ ಪಟ್ಟು ಹಿಡಿಯಲಿದ್ದಾರೆ. ಹೇಗಾದರೂ ಸರಿ ಈ ವಿಚಾರ ಚರ್ಚೆಗೆ ತರಬೇಕು. ಇದನ್ನು ಬಿಜೆಪಿ ಸರ್ಕಾರದಿಂದಲೇ ಜಾರಿಗೊಳಿಸುವ ಮೂಲಕ ತನ್ನ ದಶಕದ ಹೋರಾಟಕ್ಕೆ ಒಂದು ಸಾರ್ಥಕ ಅಂತ್ಯ ಕಾಣಿಸಬೇಕು ಎಂಬುದು ಸಿದ್ದರಾಮಯ್ಯ ಉದ್ದೇಶ
2005ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅಂದೇ ಜಾತಿಗಣತಿ ಘೋಷಣೆ ಮಾಡಿದ್ದರು. ಅದಕ್ಕಾಗಿ 19 ಕೋಟಿ ರೂಪಾಯಿ ಮೀಸಲಿರಿಸಿದ್ದರು. ಅನಿವಾರ್ಯ ಕಾರಣಾಂತರಗಳಿಂದ ಡಿಸಿಎಂ ಪೋಸ್ಟ್ನಿಂದ ವಜಾಗೊಂಡ ಸಿದ್ದರಾಮಯ್ಯ ವರದಿ ಅನುಷ್ಠಾನ ಆಗಲಿಲ್ಲ.

ಇದಾದ ಬಳಿಕ ಕಾಂಗ್ರೆಸ್ ಬಹುಮತದಿಂದ ಗೆದ್ದು ಬಂದ ಮೇಲೆ ಸಿದ್ದರಾಮಯ್ಯ ಅವರೇ ಸಿಎಂ ಆದರು. ಆಗ ₹170 ಕೋಟಿ ರೂಪಾಯಿ ವೆಚ್ಚ ಮಾಡಿ ಜಾತಿಗಣತಿ ನಡೆಸಿದರು. ಜಾತಿಗಣತಿ ವರದಿ ವಿಶ್ಲೇಷಣೆ ಹೊಣೆಯನ್ನ ಬಿಇಎಲ್ ಸಂಸ್ಥೆಗೆ ನೀಡಲಾಗಿತ್ತು.

ಇನ್ನು, ಬಿಜೆಪಿ ಸರ್ಕಾರಕ್ಕೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿರುವ ಸಿದ್ದರಾಮಯ್ಯ, ತನ್ನ ಅವಧಿಯಲ್ಲಿ ಯಾಕೆ ಮಾಡಲಿಲ್ಲ ಎಂಬುದು ಗೊತ್ತಿರುವ ವಿಚಾರ. ಹಾಗಾಗಿಯೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅನುಷ್ಠಾನ ಮಾಡಲಿಲ್ಲವೇಕೆ ಎಂಬ ಪ್ರಶ್ನೆ ಬಿಜೆಪಿ-ಜೆಡಿಎಸ್ ಕೇಳುತ್ತಿವೆ. ಇದಕ್ಕೆ ಅಧಿವೇಶನದಲ್ಲೇ ಉತ್ತರ ಕೊಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ.

ಜಾತಿ ಗಣತಿ ಅನುಷ್ಠಾನಕ್ಕೆ ಒತ್ತಾಯಿಸಿ ಸದನದಲ್ಲಿ ಹೋರಾಟ ಮಾಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಬಿ.ಕೆ ಹರಿಪ್ರಸಾದ್, ಶಾಮನೂರು ಶಿವಶಂಕರಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಹಲವು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯ ಈ ಹೋರಾಟಕ್ಕೆ ಮುಂದಾಗಿದ್ದಾರೆ ಎಂಬುದು ಗಮನಾರ್ಹ.

ಜಾತಿಗಣತಿ ಒಂದಡೆ, ಸಚಿವ ಸಂಪುಟ ರಚನೆಯಿಂದಾಗಿ ಉಂಟಾದ ಗೊಂದಲ ಮತ್ತೊಂದೆಡೆ. ಸಚಿವರ ಅಧಿಕಾರ ಸ್ವೀಕರಿಸಲು ವಿಳಂಬ ನೀತಿ, ಶಶಿಕಲಾ ಜೊಲ್ಲೆ ಪ್ರಕರಣ, ಕೊರೋನಾ ನಿಯಂತ್ರಣ, ಮೈಸೂರು ಗ್ಯಾಂಗ್ರೇಪ್, ಗೃಹ ಸಚಿವರ ಹೇಳಿಕೆ ಸೇರಿ ಹಲವಾರು ಅಸ್ತ್ರಗಳು ಸದನದಲ್ಲಿ ಸದ್ದಾಗುವ ಸಾಧ್ಯತೆಗಳಿವೆ.

Tags: Basavaraj BommaiBJPCongress Partyಬಿಜೆಪಿಸಿದ್ದರಾಮಯ್ಯ
Previous Post

ಕಾರ್ಪೋರೇಟ್-ಹಿಂದುತ್ವ ಕಾರ್ಯಸೂಚಿಗೆ ಪರ್ಯಾಯ ಬೇಕಿದೆ

Next Post

13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

November 2, 2025
Next Post
13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

Please login to join discussion

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada