• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ

ನಚಿಕೇತು by ನಚಿಕೇತು
September 11, 2021
in ಕರ್ನಾಟಕ
0
ಸಿಎಂ ಬಸವರಾಜ್ ಬೊಮ್ಮಾಯಿ ಟಾರ್ಗೆಟ್; ಅಧಿವೇಶನದಲ್ಲಿ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾದ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಸವರಾಜ್ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಭಾರಿಗೆ ವಿಧಾನಮಂಡಲ ಅಧಿವೇಶನ ಶುರುವಾಗುತ್ತಿದೆ. ಸೆಪ್ಟೆಂಬರ್ 13ರಿಂದ ಶುರುವಾಗಲಿರುವ ಈ ವಿಧಾನಮಂಡಲ ಅಧಿವೇಶನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಹಣಿಯಲು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮುಂದಾಗಿವೆ. ಎರಡು ಪಕ್ಷಗಳು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಳ್ಳಲು ಸಾಕಷ್ಟು ಅಸ್ತ್ರಗಳನ್ನು ರೆಡಿ ಮಾಡಿಕೊಂಡಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಅಂತೂ ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಜಾತಿಗಣತಿ ಗುರಾಣಿ ಪ್ರಯೋಗಕ್ಕೆ ಮುಂದಾಗಿದ್ದಾರೆ.

ADVERTISEMENT

ಇತ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಅಸ್ತ್ರಗಳಿಗೆ ಪ್ರತ್ಯುತ್ತರ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸವಾಲು ಎದುರಿಸುವ ಸಲುವಾಗಿಯೇ ಬೊಮ್ಮಾಯಿ ಸೋಮವಾರ ಬೆಳಿಗ್ಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ. ಇಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ.

ಮಾರಕ ಕೊರೋನಾ ವೈರಸ್ನಿಂದ ಇಡೀ ರಾಜ್ಯ ತತ್ತರಿಸಿ ಹೋಗಿತ್ತು. ಇದು ವಿಧಾನಮಂಡಲ ಅಧಿವೇಶನ ವಿಳಂಬಕ್ಕೆ ಕಾರಣವಾಗಿತ್ತು. ಈಗ ಸೆಪ್ಟೆಂಬರ್ 13ರಿಂದ ಆರಂಭವಾಗಲಿರುವ ಈ ವಿಧಾನಮಂಡಲ ಅಧಿವೇಶನ ಒಟ್ಟು ಹತ್ತು ದಿನಗಳ ಕಾಲ ನಡೆಯಲಿದೆ. ಇಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನೇ ಟಾರ್ಗೆಟ್ ಮಾಡಲಿದ್ದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರದ ನೆರವಿಗೆ ಬರಲಿದ್ದಾರೆ.

ಒಂದೆಡೆ ಬಸವರಾಜ್ ಬೊಮ್ಮಾಯಿ ಮೊದಲ ಅಧಿವೇಶನದಲ್ಲಿ ಪ್ರಮುಖ ವಿಧೇಯಕಗಳು ಮಂಡನೆ ಮಾಡಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ತಯಾರಿ ನಡೆಸಿಕೊಂಡಿದ್ದಾರೆ. ಇನ್ನೊಂದೆಡೆ ಸರ್ಕಾವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಪಕ್ಷದ ಆಂತರಿಕ ವಿರೋಧದ ನಡುವೆಯೂ ಸಿದ್ದರಾಮಯ್ಯ ಜಾತಿಗಣತಿ ಚರ್ಚೆಗೆ ರೆಡಿ ಆಗಿದ್ದಾರೆ.

ಅಧಿವೇಶನದಲ್ಲಿ ಜಾತಿ ಗಣತಿ ಹೋರಾಟ ನಡೆಸಲು ಪ್ಲಾನ್ ಮಾಡಿರುವ ಸಿದ್ದರಾಮಯ್ಯ, ಇದರ ಜಾರಿಗಾಗಿ ಪಟ್ಟು ಹಿಡಿಯಲಿದ್ದಾರೆ. ಹೇಗಾದರೂ ಸರಿ ಈ ವಿಚಾರ ಚರ್ಚೆಗೆ ತರಬೇಕು. ಇದನ್ನು ಬಿಜೆಪಿ ಸರ್ಕಾರದಿಂದಲೇ ಜಾರಿಗೊಳಿಸುವ ಮೂಲಕ ತನ್ನ ದಶಕದ ಹೋರಾಟಕ್ಕೆ ಒಂದು ಸಾರ್ಥಕ ಅಂತ್ಯ ಕಾಣಿಸಬೇಕು ಎಂಬುದು ಸಿದ್ದರಾಮಯ್ಯ ಉದ್ದೇಶ
2005ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅಂದೇ ಜಾತಿಗಣತಿ ಘೋಷಣೆ ಮಾಡಿದ್ದರು. ಅದಕ್ಕಾಗಿ 19 ಕೋಟಿ ರೂಪಾಯಿ ಮೀಸಲಿರಿಸಿದ್ದರು. ಅನಿವಾರ್ಯ ಕಾರಣಾಂತರಗಳಿಂದ ಡಿಸಿಎಂ ಪೋಸ್ಟ್ನಿಂದ ವಜಾಗೊಂಡ ಸಿದ್ದರಾಮಯ್ಯ ವರದಿ ಅನುಷ್ಠಾನ ಆಗಲಿಲ್ಲ.

ಇದಾದ ಬಳಿಕ ಕಾಂಗ್ರೆಸ್ ಬಹುಮತದಿಂದ ಗೆದ್ದು ಬಂದ ಮೇಲೆ ಸಿದ್ದರಾಮಯ್ಯ ಅವರೇ ಸಿಎಂ ಆದರು. ಆಗ ₹170 ಕೋಟಿ ರೂಪಾಯಿ ವೆಚ್ಚ ಮಾಡಿ ಜಾತಿಗಣತಿ ನಡೆಸಿದರು. ಜಾತಿಗಣತಿ ವರದಿ ವಿಶ್ಲೇಷಣೆ ಹೊಣೆಯನ್ನ ಬಿಇಎಲ್ ಸಂಸ್ಥೆಗೆ ನೀಡಲಾಗಿತ್ತು.

ಇನ್ನು, ಬಿಜೆಪಿ ಸರ್ಕಾರಕ್ಕೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿರುವ ಸಿದ್ದರಾಮಯ್ಯ, ತನ್ನ ಅವಧಿಯಲ್ಲಿ ಯಾಕೆ ಮಾಡಲಿಲ್ಲ ಎಂಬುದು ಗೊತ್ತಿರುವ ವಿಚಾರ. ಹಾಗಾಗಿಯೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅನುಷ್ಠಾನ ಮಾಡಲಿಲ್ಲವೇಕೆ ಎಂಬ ಪ್ರಶ್ನೆ ಬಿಜೆಪಿ-ಜೆಡಿಎಸ್ ಕೇಳುತ್ತಿವೆ. ಇದಕ್ಕೆ ಅಧಿವೇಶನದಲ್ಲೇ ಉತ್ತರ ಕೊಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ.

ಜಾತಿ ಗಣತಿ ಅನುಷ್ಠಾನಕ್ಕೆ ಒತ್ತಾಯಿಸಿ ಸದನದಲ್ಲಿ ಹೋರಾಟ ಮಾಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಬಿ.ಕೆ ಹರಿಪ್ರಸಾದ್, ಶಾಮನೂರು ಶಿವಶಂಕರಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಹಲವು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯ ಈ ಹೋರಾಟಕ್ಕೆ ಮುಂದಾಗಿದ್ದಾರೆ ಎಂಬುದು ಗಮನಾರ್ಹ.

ಜಾತಿಗಣತಿ ಒಂದಡೆ, ಸಚಿವ ಸಂಪುಟ ರಚನೆಯಿಂದಾಗಿ ಉಂಟಾದ ಗೊಂದಲ ಮತ್ತೊಂದೆಡೆ. ಸಚಿವರ ಅಧಿಕಾರ ಸ್ವೀಕರಿಸಲು ವಿಳಂಬ ನೀತಿ, ಶಶಿಕಲಾ ಜೊಲ್ಲೆ ಪ್ರಕರಣ, ಕೊರೋನಾ ನಿಯಂತ್ರಣ, ಮೈಸೂರು ಗ್ಯಾಂಗ್ರೇಪ್, ಗೃಹ ಸಚಿವರ ಹೇಳಿಕೆ ಸೇರಿ ಹಲವಾರು ಅಸ್ತ್ರಗಳು ಸದನದಲ್ಲಿ ಸದ್ದಾಗುವ ಸಾಧ್ಯತೆಗಳಿವೆ.

Tags: Basavaraj BommaiBJPCongress Partyಬಿಜೆಪಿಸಿದ್ದರಾಮಯ್ಯ
Previous Post

ಕಾರ್ಪೋರೇಟ್-ಹಿಂದುತ್ವ ಕಾರ್ಯಸೂಚಿಗೆ ಪರ್ಯಾಯ ಬೇಕಿದೆ

Next Post

13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

13ನೇ ಬ್ರಿಕ್ಸ್ ದೇಶಗಳ ಶೃಂಗಸಭೆ; ಅಫ್ಘಾನ್ ಉಗ್ರರ ತಾಣವಾಗದಂತೆ ತಡೆಯಲು ಪಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada