• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರೂ ಒಪ್ಪಲ್ಲ : ಸಿಎಂ ಸಿದ್ದರಾಮಯ್ಯ

Any Mind by Any Mind
November 17, 2023
in ಕರ್ನಾಟಕ
0
ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರೂ ಒಪ್ಪಲ್ಲ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಂಜನಗೂಡು ಕ್ಷೇತ್ರದ ಕಳಲೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಚಾರಿತ್ರಿಕ ಕಡೇಮಾಲಮ್ಮ ದೇವಸ್ಥಾನವನ್ನು ಉದ್ಘಾಟಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಕಡೇಮಾಲಮ್ಮ ದೇವಸ್ಥಾನ ಉದ್ಘಾಟಿಸಲು ಬಹಳ ಖುಷಿ ಆಗಿದೆ. ದೇವಿಯಿಂದ ಇಡಿ ಕಳಲೆ ಗ್ರಾಮಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೀನಿ. ನನಗೆ ಈ ಊರಿನ ಪರಿಚಯ ಚೆನ್ನಾಗಿದೆ. ಈ ಊರಲ್ಲಿ ಎಲ್ಲಾ ಧರ್ಮ ಮತ್ತು ಜಾತಿಯವರು ಸಹಬಾಳ್ವೆಯಿಂದ, ಸೌಹಾರ್ದತೆಯಿಂದ ಬದುಕುತ್ತಿರುವುದು ಮಾದರಿ ಮತ್ತು ಆದರ್ಶವಾಗಿದೆ. ಸಮಾಜದಲ್ಲಿ ಬಡವ ಶ್ರೀಮಂತ, ಮೇಲು-ಕೀಳಿಗೆ ಜಾತಿ ವ್ಯವಸ್ಥೆಯೇ ಕಾರಣ. ಆದರೆ ಕಳಲೆ ಗ್ರಾಮದಲ್ಲಿ ಸರ್ವ ಜಾತಿಗಳ ಸೌಹಾರ್ದದ ಬದುಕು ಆಚರಣೆಯಲ್ಲಿದೆ ಎಂದು ಮೆಚ್ಚುಗೆ ಸೂಚಿಸಿದರು.

ಎಲ್ಲಾ ಜಾತಿ-ಧರ್ಮದ ಬಡವರಿಗೆ ಆರ್ಥಿಕ ಶಕ್ತಿ ಬಾರದ ಹೊರತು ಅಸಮಾನತೆ ಕಡಿಮೆ ಆಗಲು ಸಾಧ್ಯವಿಲ್ಲ. ಈ ಕಾರಣಕ್ಕೇ ನಮ್ಮ ಸರ್ಕಾರ ಆರ್ಥಿಕವಾಗಿ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಪ್ರದಾನಿ ನರೇಂದ್ರ ಮೋದಿಯವರೇ ಈಗ ಗ್ಯಾರಂಟಿಗಳನ್ನು ಕೊಡುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಟ್ಟೆಕಿಚ್ಚು ಬಂದು ಬಿಟ್ಟಿದೆ. ಆದರೆ, ನಾವು ಯಾರಿಗೇ ಹೊಟ್ಟೆಕಿಚ್ಚು ಬಂದರೂ ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಲೇ ಇರುತ್ತೇವೆ ಎಂದರು.

ಯಾವ ಸಮಾಜದಲ್ಲಿ ಒಗ್ಗಟ್ಟು ಇರುವುದಿಲ್ಲವೋ ಆ ಸಮಾಜ ಉಳಿಯಲು ಸಾಧ್ಯವಿಲ್ಲ. ಆದರೆ ಭಾರತದ ಎಲ್ಲಾ ಸಂಸ್ಥಾನಗಳೂ ಒಟ್ಟಾಗಿ ಗಟ್ಟಿಯಾಗಿ ಸೌಹಾರ್ದತೆ ಬೆಳೆಸಿಕೊಂಡಿದೆ. ಐತಿಹಾಸಿಕ ಇತಿಹಾಸ ಹೊಂದಿರುವ ಕಳಲೆ ಗ್ರಾಮ ಕೂಡ ಈ ಸಂಸ್ಕೃತಿಗೆ ಒಗ್ಗಿಕೊಂಡಿದೆ. ಇಲ್ಲಿನ ಲಕ್ಷ್ಮೀಕಾಂತ ದೇವಸ್ಥಾನದ ಜಾತ್ರೆ ಐತಿಹಾಸಿಕವಾಗಿದೆ ಎಂದು ವಿವರಿಸಿದರು.

ಶುದ್ದವಾದ ಮನಸ್ಸು ಇಲ್ಲದೆ ಮಾಡುವ ಪೂಜೆಯನ್ನು ದೇವರು ಸ್ವೀಕರಿಸುವುದಿಲ್ಲ. ಸರ್ವರ ಒಳಿತಿನ ಪೂಜೆ ಮಾತ್ರ ಸ್ವೀಕಾರಗೊಳ್ಳುತ್ತದೆ. ಸ್ವಾರ್ಥರಹಿತ ಪೂಜೆ ಮಾತ್ರ ದೇವರಿಗೆ ಸಲ್ಲುತ್ತದೆ. ಮನುಷ್ಯರಾದವರು ಮನುಷ್ಯರನ್ನು ಮನುಷ್ಯತ್ವದ ಆಧಾರದಲ್ಲಿ ಪ್ರೀತಿಸಬೇಕು. ಜಾತಿ ಆಧಾರದಲ್ಲಿ ಪ್ರೀತಿಸುವುದು ಮನುಷ್ಯ ಪ್ರೀತಿ ಆಗುವುದಿಲ್ಲ ಎಂದರು.

ಶಾಸಕ ದರ್ಶನ್ ದ್ರುವನಾರಾಯಣ್ ಅವರು ಕಳಲೆ ಗ್ರಾಮದ ಅಭಿವೃದ್ಧಿಗಾಗಿ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನೂ ನಾನು ಈಡೇರಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿ, ನಿಮ್ಮ ಆಶೀರ್ವಾದ ಯಾವಾಗಲೂ ದರ್ಶನ್ ದ್ರುವನಾರಾಯಣ್ ಮೇಲೆ ಇರಲಿ ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ರವಿಶಂಕರ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಡಾ.ತಿಮ್ಮಯ್ಯ, ಮಾಜಿ ಶಾಸಕಕರುಗಳಾದ ಯತೀಂದ್ರ ಸಿದ್ದರಾಮಯ್ಯ, ಸೋಮಶೇಖರ್, ಕಳಲೆ ಕೇಶವಮೂರ್ತಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರೈತರ ಪಾಲಿಗೆ ಭಸ್ಮಾಸುರರಾಗಬೇಡಿ, ಅವರ ಹಿತ ಕಾಯುವಂತವರಾಗಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು

Next Post

Breaking News: ವಿಪಕ್ಷ ನಾಯಕರಾಗಿ ಶಾಸಕ ಆರ್.ಅಶೋಕ್ ಆಯ್ಕೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ವಿಪಕ್ಷ ನಾಯಕರಾಗಿ ಶಾಸಕ ಆರ್.ಅಶೋಕ್ ಆಯ್ಕೆ : ಅಧಿಕೃತ ಘೋಷಣೆ ಬಾಕಿ

Breaking News: ವಿಪಕ್ಷ ನಾಯಕರಾಗಿ ಶಾಸಕ ಆರ್.ಅಶೋಕ್ ಆಯ್ಕೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada