ಮೈಸೂರು : ಮೇ.೨೨: ಸಿದ್ದರಾಮಯ್ಯ ಅವರು ಪೂರ್ಣಾವಧಿಯವರೆಗೂ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ ಶ್ರೀಗಳನ್ನ ಭೇಟಿಯಾಗಿ ಆರ್ಶೀರ್ವಾದ ಪಡೆದು ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.


ಸಿದ್ದರಾಮಯ್ಯ ಮುಂದಿನ ಐದು ವರ್ಷದ ವರೆಗೂ ಸಿಎಂ ಆಗಲಿದ್ದಾರೆ ಎಂದು AICC ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ ಐ, ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ. ಇನ್ನು ಗ್ಯಾರೆಂಟಿ ಕಾರ್ಡ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ,ಪಾಟೀಲ್, ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಮೈಸೂರಿನ ಸುತ್ತೂರಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.