• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಸ್ಯಾಂಡಲ್‍ವುಡ್‍ ಸಲಗ’ನಿಂದ ‘ಸಿದ್ಲಿಂಗು 2’ ಹಾಡು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸೋದರಳಿಯನ ಚಿತ್ರದ ಹಾಡು ಬಿಡುಗಡೆ ಮಾಡಿ ಹಾರೈಸಿದ ‘ಭೀಮ. ಭರ್ಜರಿಯಾಗಿ ನಡೆಯಿತು ‘ಸಿದ್ಲಿಂಗು 2’ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍. ಯೋಗಿ ಜೊತೆಗೆ ಸದಾ ನಿಲ್ಲುತ್ತೇನೆ ಎಂದ ‘ದುನಿಯಾ’ ವಿಜಯ. ಮೊದಲ ಬಾರಿಗೆ ವೇದಿಕೆ ಮೇಲೆ ನಿಂತು ಮಾವ ಎಂದು ಕರೆದ ಯೋಗಿ. ಯೋಗಿ-ವಿಜಯಪ್ರಸಾದ್‍ ಸಿನಿಮಾ ಫೆಬ್ರವರು 14ರಂದು ಬಿಡುಗಡೆ.

ADVERTISEMENT

ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್‍ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್‍ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡು ಬಿಡುಗಡೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್‍, ‘ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದರು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಿಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ ‘ಸಿದ್ಲಿಂಗು 3’ ಮಾಡಲಿ ಎಂಬುದು ನನ್ನಾಸೆ’ ಎಂದರು.

ನಾನು ಯೋಗಿಯ ದೊಡ್ಡ ಅಭಿಮಾನಿ ಎಂದ ವಿಜಯ್‍ ಕುಮಾರ್, ‘ಯಾವುದೇ ಪಾತ್ರವಿದ್ದರೂ ನಾನು ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮರ್ಥ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ? ಬರದಿದ್ದರೆ ನಾನು ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ. ನನ್ನ ಕೈಗೆ ಸಿಕ್ಕರೆ ಬೇರೆಯದನ್ನೇ ಮಾಡುತ್ತೇನೆ. ಬೇರೆ ಏನನ್ನೋ ತೋರಿಸುವುದಕ್ಕೆ ಆಸೆ. ಈ ಚಿತ್ರದಲ್ಲಿ ಒಂದು ಒಳ್ಳೆಯ ವೈಬ್‍ ಇದೆ. ಒಳ್ಳೆಯ ಕಲಾವಿದರು ಮತ್ತು ತಂತ್ರಜ್ಞರು ಈ ತಂಡದಲ್ಲಿದ್ದಾರೆ’ ಎಂದರು.

ಚಿತ್ರದ ನಾಯಕ ಯೋಗಿ ಮಾತನಾಡಿ, ‘‘ಸಿದ್ಲಿಂಗು’ ಚಿತ್ರವನ್ನು ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಭಾಗ ಎರಡು ಸಹ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗೆ ಮತ್ತು ಚಿತ್ರತಂಡಕ್ಕಿದೆ. ಆಗ ‘ಸಿದ್ಲಿಂಗು’, ಕನ್ನಡ ಚಿತ್ರರಂಗಕ್ಕೆ ಬೇರೆ ತರಹದ ಸಿನಿಮಾ ಆಯ್ತು. ಇದು ಅದರ ಮುಂದುವರೆದ ಭಾಗ. ವಿಜಯಪ್ರಸಾದ್‍ ಜೊತೆಗೆ ಕೆಲಸ ಮಾಡುವುದು ಖುಷಿಯ ವಿಷಯ. ಪ್ರತಿಯೊಬ್ಬರಿಂದ ಒಳ್ಳೆಯ ಕೆಲಸ ತೆಗೆಯುತ್ತಾರೆ. ನನ್ನನ್ನು ಮತ್ತು ವಿಜಯಪ್ರಸಾದ್‍ ಅವರನ್ನು ಯಾರೂ ನಂಬದಂತಹ ಸಮಯದಲ್ಲಿ ಹರಿ ಮತ್ತು ರಾಜು ಅವರು ನಮ್ಮನ್ನು ನಂಬಿ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬಂದರು. ನಾನು ಬದುಕಿರುವವರೆಗೂ ಅವರಿಗೆ ಚಿರಋಣಿ. ಇವತ್ತು ಟ್ರೇಲರ್‍ ಬಿಡುಗಡೆ ಮಾಡುವುದಕ್ಕೆ ನಮ್ಮ ಮಾವ ಬಂದಿದ್ದಾರೆ. ನಾನು ಚಿಕ್ಕ ವಯಸ್ಸಲ್ಲಿ ವಿಜಯ್‍ ಅವರನ್ನು ಮಾವ ಅಂತ ಕರೆದರೆ, ಹೊಡೆದು ಕುಮಾರ ಅಂತ ಕರೆಯೋ ಎನ್ನುತ್ತಿದ್ದರು. ಇವತ್ತು ಮೊದಲ ಬಾರಿಗೆ ವೇದಿಕೆಯೊಂದರ ಮೇಲೆ ನಿಂತು ಮಾವ ಎಂದು ಕರೆಯುತ್ತಿದ್ದೇನೆ. ಇನ್ನು ಮುಂದೆ ಎಲ್ಲೇ ಸಿಕ್ಕರೂ ಮಾವ ಎಂದು ಕರೆಯುತ್ತೇನೆ. ನಮ್ಮ ಚಿತ್ರತಂಡದವರೆಲ್ಲಾ ಅವರನ್ನು ಕರೆಸಿ ಪ್ರೀ-ರಿಲೀಸ್‍ ಇವೆಂಟ್‍ ಮಾಡಬೇಕು ಎಂದು ಹೇಳುತ್ತಿದ್ದರು. ಅವರೂ ಒಪ್ಪಿ ಇವತ್ತು ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದರು.

ಸಿದ್ಲಿಂಗು ಸಮಾಜಕ್ಕೆ ಸತ್ಪುರುಷ ಅಲ್ಲ ದೇಶಕ್ಕೆ ಸತ್ಪ್ರಜೆ ಎಂದ ನಿರ್ದೇಶಕ ವಿಜಯಪ್ರಸಾದ್‍, ‘ಕಾಯಕ ಎಂದರೆ ಅವನನ್ನು ನೆನಪು ಮಾಡಿಕೊಳ್ಳಬೇಕು, ಆದರ್ಶ ಎಂದರೆ ಮರೆತುಬಿಡಿಬೇಕು. ಅಂಥದ್ದೊಂದು ಜೀವಂತ ಪಾತ್ರ ಈ ಚಿತ್ರದಲ್ಲಿ ಮಾಡಿದ್ದಾರೆ’ ಎಂದರು.

ಈ ಸಂದರ್ಭದಲ್ಲಿ ಯೋಗಿ ತಂದೆ ಮತ್ತು ನಿರ್ಮಾಪಕ ಟಿ.ಪಿ. ಸಿದ್ಧರಾಜು, ನಾಯಕಿ ಸೋನು ಗೌಡ, ನಟ-ನಿರ್ದೇಶಕ ಬಿ. ಸುರೇಶ, ಮಂಜುನಾಥ್ ಹೆಗಡೆ, ಸೀತಾ ಕೋಟೆ, ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍, ಗೀತರಚನೆಕಾರ ಅರಸು ಅಂತಾರೆ, ಆ್ಯಂಥೋನಿ ಕಮಲ್ ಸೇರಿದಂತೆ ಚಿತ್ರತಂಡದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದರು. ವಿಜಯ್‍ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್‍ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್‍ ರಂಗನಾಥ್‍, ಸೀತಾ ಕೋಟೆ, ಮಹಾಂತೇಶ್‍, ಆ್ಯಂಟೋನಿ ಕಮಲ್‍, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ, ಅನೂಪ್‍ ಸೀಳಿನ್‍ ಸಂಗೀತ ಮತ್ತು ಅಕ್ಷಯ್ ಪಿ. ರಾವ್‍ ಅವರ ಸಂಕಲನವಿದೆ.

Tags: Anup silinBHIMADuniya VijayaKannada movieSalagaSidlinguSidlingu-2suman ranganathVijay KumarYogi
Previous Post

ರಾಜ್ಯಪಾಲರಿಂದ ರಾಜ್ಯ ಸರ್ಕಾರಕ್ಕೆ ನಿಲ್ಲದ ಟಾರ್ಚರ್..!

Next Post

ಏರೋ ಇಂಡಿಯಾ ಏರ್ ಶೋಗೆ ಅದ್ಧೂರಿ ಚಾಲನೆ – ಆಗಸದಲ್ಲಿ ಘರ್ಜಿಸಿದ ಫೈಟರ್ ಜೆಟ್ ಗಳು ! 

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಏರೋ ಇಂಡಿಯಾ ಏರ್ ಶೋಗೆ ಅದ್ಧೂರಿ ಚಾಲನೆ – ಆಗಸದಲ್ಲಿ ಘರ್ಜಿಸಿದ ಫೈಟರ್ ಜೆಟ್ ಗಳು ! 

ಏರೋ ಇಂಡಿಯಾ ಏರ್ ಶೋಗೆ ಅದ್ಧೂರಿ ಚಾಲನೆ - ಆಗಸದಲ್ಲಿ ಘರ್ಜಿಸಿದ ಫೈಟರ್ ಜೆಟ್ ಗಳು ! 

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada