• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೀತಾ ಪಯಣ ಸಿನಿಮಾ; ಇದು ಅರ್ಜುನ್‌ ಸರ್ಜಾ ನಿರ್ದೇಶನದ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
March 3, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ(Arjun Sarja), ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ(Sita Payana)ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ADVERTISEMENT

ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ (Niranjan)ನಾಯಕನಾಗಿ ನಟಿಸಿದರೆ, ಅರ್ಜುನ್‌ ಸರ್ಜಾ(Arjun Sarja) ಪುತ್ರಿ ಐಶ್ವರ್ಯಾ(Aishwarya)ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’ ಸಿನಿಮಾಗಳಿಗೆ ನಿರ್ದೇಶನ ಮಾಡಿ, ತಮ್ಮ ಕ್ಯಾಮರಾ ಹಿಂದಿನ ಕೆಲಸ ಹೇಗಿದೆ ಎಂಬುದನ್ನು ಸಾಬೀತುಪಡಿಸಿದ್ದರು ಅರ್ಜುನ್‌ ಸರ್ಜಾ(Aishwarya). ಅದಾದ ಮೇಲೆ ಪ್ರೇಮಬರಹ ಚಿತ್ರಕ್ಕೂ ಆಕ್ಷನ್‌ ಕಟ್‌ ಹೇಳಿದ್ದರು. ಇದೀಗ ಸೀತಾ ಪಯಣ(Sita Payana) ಮೂಲಕ ಮರಳಿದ್ದಾರೆ.

ತಾಂತ್ರಿಕ ಬಳಗ ಹೀಗಿದೆ..
ಶೀರ್ಷಿಕೆ ಸೂಚಿಸುವಂತೆ ‘ಸೀತಾ ಪಯಣ'(Sita Payana), ಪ್ರೀತಿ ಮತ್ತು ಭಾವನಾತ್ಮಕ ಕಥೆಯ ಅಡಿಯಲ್ಲಿ ಸಾಗುವ ಪ್ರಯಾಣ. ಇದೀಗ ಇದೇ ಸಿನಿಮಾದ ತಾಂತ್ರಿಕ ಬಳಗದ ವಿವರವನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಸೀತಾ ಪಯಣ(Sita Payana) ಸಿನಿಮಾಕ್ಕೆ ಬಾಲಮುರುಗನ್‌ ಛಾಯಾಗ್ರಹಣ ಮಾಡಿದ್ದಾರೆ. ದೃಶ್ಯಂ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್‌ ಖಾನ್‌ ಈ ಚಿತ್ರಕ್ಕೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಅನುಪ್‌ ರುಬೆನ್ಸ್‌ ಸೀತಾ ಪಯಣ(Sita Payana) ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಬರವಣಿಗೆ ಜವಾಬ್ದಾರಿ ಸಾಯಿ ಮಾಧವ್‌ ಬುರ್ರಾ ಅವರದ್ದು. ಇನ್ನು ಭರತ್‌ ಜನನಿ ಎಂಬುವವರು ಕನ್ನಡದ ಹಾಡುಗಳಿಗೆ ಅದ್ಭುತವಾದ ಸಾಹಿತ್ಯ ನೀಡಿದ್ದಾರೆ. ನಿರ್ದೇಶನದ ಜತೆಗೆ ಡೈಲಾಗ್ಸ್ ಸಹ ಬರೆದಿದ್ದಾರೆ ಅರ್ಜುನ್ ಸರ್ಜಾ(Arjun Sarja).

ಹೆಸರೇ ಹೇಳುವಂತೆ ಇದೊಂದು ಪಯಣದ ಕುರಿತಾದ ಚಿತ್ರವಾಗಿದ್ದು, ಈ ಪ್ರಯಾಣದಲ್ಲಿ ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವನ್ನು ತೋರಿಸಲಾಗುತ್ತಿದೆ. ನಿರಂಜನ್ ‍ಮತ್ತು ಐಶ್ವರ್ಯ ಅರ್ಜುನ್‌(Aishwarya Arjun)ಜೊತೆಗೆ ಪ್ರಕಾಶ್‍ ರೈ, ಸತ್ಯರಾಜ್‍ ಮುಂತಾದವರು ನಟಿಸಿದ್ದಾರೆ. ಸ್ವತಃ ಅರ್ಜುನ್‌ ಸರ್ಜಾ(Aishwarya Arjun) ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರ ಜತೆಗೆ ಕನ್ನಡದ ಹೆಸರಾಂತ ನಟರೊಬ್ಬರು ಈ ಚಿತ್ರದ ಭಾಗವಾಗಲಿದ್ದಾರೆ. ಈಗಾಗಲೇ ಚಿತ್ರದ ಡಬ್ಬಿಂಗ್‌ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್‌ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆಗಳಿವೆ.

ಮೂರು ಭಾಷೆಗಳಲ್ಲಿ ಬಿಡುಗಡೆ
ಭಾರತೀಯ ಚಿತ್ರೋದ್ಯಮದಲ್ಲಿ ತಮ್ಮ ನಟನೆಯ ಮೂಲಕವೇ ಅಪಾರ ಜನಮನ್ನಣೆ ಗಳಿಸಿದ್ದಾರೆ ಅರ್ಜುನ್‌ ಸರ್ಜಾ(Arjun Sarja). ದಕ್ಷಿಣದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಸೀತಾ ಪಯಣ ಸಿನಿಮಾ ಮೂಲಕ ಪರಿಪೂರ್ಣ ಫ್ಯಾಮಿಲಿ ಡ್ರಾಮಾ ಜತೆಗೆ ಆಗಮಿಸುತ್ತಿದ್ದಾರೆ. ಸೀತಾ ಪಯಣ(Sita Payana) ಸಿನಿಮಾ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿ ಸಿದ್ಧವಾಗಲಿದೆ. ನಟ ಅರ್ಜುನ್ ಸರ್ಜಾ ತಮ್ಮದೇ ಹೋಮ್ ಬ್ಯಾನರ್ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಅಡಿಯಲ್ಲಿ ಸೀತಾ ಪಯಣ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Tags: AishwaryaARJUN SARJANiranjansandalwoodSita Payana
Previous Post

ದಲಿತ-ಆದಿವಾಸಿಗಳ ಮೀಸಲು(SCSP-TSP) ಅನುದಾನ ದುರ್ಬಳಕೆ – ಸರ್ಕಾರದ ವಿರುದ್ಧ ಅಹಿಂಸಾ ಚೇತನ್ ಆಕ್ರೋಶ ! 

Next Post

Budget session ಕರ್ನಾಟಕ ವಿಧಾನಸಭಾ ಬಜೆಟ್ ಅಧಿವೇಶನ ನೇರಪ್ರಸಾರ..!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post

Budget session ಕರ್ನಾಟಕ ವಿಧಾನಸಭಾ ಬಜೆಟ್ ಅಧಿವೇಶನ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada