• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಜ್ಞಾತವಾಸ’ ಹಾಡು ಬಿಡುಗಡೆ ಸಮಾರಂಭದಲ್ಲಿ ಮಫ್ತಿ” ಚಿತ್ರದ ಪ್ರೀಕ್ವೆಲ್ ಕುರಿತು ತಿಳಿಸಿದ ಶಿವರಾಜಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಅಜ್ಞಾತವಾಸ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಯಿತು. ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು, ಮಾತನಾಡಿದರು.

ADVERTISEMENT

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರುತ್ತದೆ ಎಂದು ಮಾತು ಆರಂಭಿಸಿದ ಶಿವರಾಜಕುಮಾರ್, “ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಬಹಳ ಇಷ್ಟ. ನಂತರ ನಿರ್ದೇಶಕ ನರ್ತನ್, “ಭೈರತಿ ರಣಗಲ್” ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು. ನಮ್ಮ ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು.

ಅದ್ದೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಈ ಚಿತ್ರದಲ್ಲಿದ್ದು, ಚಿತ್ರ ಉತ್ತಮವಾಗಿ ಮೂಡಿಬರಲು ಅವರೆಲ್ಲರ ಸಹಕಾರ ಬಹುಮುಖ್ಯ. ಈ ಸಂದರ್ಭದಲ್ಲಿ ನಾನು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ದೀಪಾವಳಿ ಹಾಗೂ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ‘ಅಜ್ಞಾತವಾಸ’ ಹಾಡು ಬಿಡುಗಡೆಯಾಗಿದೆ. ನವೆಂಬರ್ 15 ರಂದು ಚಿತ್ರ ತೆರೆಗೆ ಬರಲಿದೆ.ಮುಂದೆ ಈ ಚಿತ್ರದ ಮುಂದಿನ ಭಾಗ ಸಹ ಬರಲಿದೆ ಎಂದರು.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ಗೀತಾ ಶಿವರಾಜಕುಮಾರ್ ಹಾಗೂ ಶಿವರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಕಥೆಗೆ ಶಿವಣ್ಣ ಸೇರಿದಂತೆ ಎಲ್ಲಾ ಕಲಾವಿದರು ಜೀವ ತುಂಬಿದ್ದಾರೆ. ತಂತ್ರಜ್ಞರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ “ಭೈರತಿ ರಣಗಲ್” ಉತ್ತಮ ಚಿತ್ರವಾಗಿ ನಿಮ್ಮ ಮುಂದೆ ಬರಲಿದೆ. ನವೆಂಬರ್‌ 5 ರಂದು ಟ್ರೇಲರ್ ಬರಲಿದೆ. ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರೂ ನೋಡಿ ಹಾರೈಸಿ ಎಂದು ನಿರ್ದೇಶಕ ನರ್ತನ್ ತಿಳಿಸಿದರು.

ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ನೀವೆಲ್ಲರೂ ಬಂದಿರುವುದು ಬಹಳ ಖುಷಿಯಾಗಿದೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ನವೆಂಬರ್ 15 ಚಿತ್ರ ಬಿಡುಗಡೆಯಾಗುತ್ತಿದೆ. “ಭೈರತಿ ರಣಗಲ್” ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕಿ ಗೀತಾ ಶಿವರಾಜಕುಮಾರ್.

ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರು. ಚಿತ್ರದಲ್ಲಿ ನಟಿಸಿರುವ ದೇವರಾಜ್, ಅವಿನಾಶ್, ರಾಹುಲ್ ಬೋಸ್, ಛಾಯಾಸಿಂಗ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ, ಪ್ರತಾಪ್, ಶಬೀರ್, ಗೋಪಾಲಕೃಷ್ಣ ದೇಶಪಾಂಡೆ ಹಾಗೂ ಛಾಯಾಗ್ರಾಹಕ ನವೀನ್ ಕುಮಾರ್, ಸಂಗೀತ ನಿರ್ದೇಶಕ ರವಿ ಬಸ್ರೂರ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಸಾಹಸ ನಿರ್ದೇಶಕ ಚೇತನ್ ಡಿಸೋಜ, ಕಲಾ ನಿರ್ದೇಶಕ ಗುಣ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ “ಭೈರತಿ ರಣಗಲ್” ಚಿತ್ರದ ಕುರಿತು ಮಾತನಾಡಿದರು.

ನನಗೆ ಚಿತ್ರರಂಗದಲ್ಲಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ತಂದೆ ತಾಯಿ ಸಮಾನರು. ಅವರ ನಿರ್ಮಾಣದ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ನಟ ದುನಿಯಾ ವಿಜಯ್ ಹಾರೈಸಿದರು.

Tags: "Bhairati Rangal"# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Duniya Vijay wished this filmart director Guna.AvinashBabu HirannayaChhayasinghfilm stars DevarajGeetha SivarajkumarGopalkrishna Deshpande and cinematographer Naveen Kumarlyricist Dr. V. NagendraprasadMadhu GuruswamyMufti" movie.music director Ravi BasrurPratapProducer Geeta SivarajkumarRahul BoseShabirstunt director Chetan D'Souza
Previous Post

ನಿಲ್ಲಬೇಡ” ಹಾಡಿನ ಮೂಲಕ ಬಂದರು ಉತ್ತರ ಕರ್ನಾಟಕದ ಪ್ರತಿಭೆ ಸುನಿಧಿ ನೀಲೊಪಂತ್.

Next Post

ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

ಇಂದಿನಿಂದ ಸಿಎಂ - ಡಿಸಿಎಂ ಅಬ್ಬರದ ಪ್ರಚಾರ - ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada