• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. :ಈಶ್ವರ ಖಂಡ್ರೆ…

Any Mind by Any Mind
February 22, 2024
in ಇತರೆ / Others, ಕರ್ನಾಟಕ, ರಾಜಕೀಯ
0
ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. :ಈಶ್ವರ ಖಂಡ್ರೆ…
Share on WhatsAppShare on FacebookShare on Telegram

ಅರಣ್ಯ(Forest)ದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ(lantana) ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ(Eshwar Kandre) ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿ(Banglore)ನ ಲಾಲ್ ಬಾಗ್(Lal Bagh) ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಲಾಂಟನಾದಿಂದ ತಯಾರಿಸಿದ ಪೀಠೋಪಕರಣ, ಅಲಂಕಾರಿಕ ವಸ್ತುಗಳು ಮತ್ತು ವನ್ಯಜೀವಿ ಆಕೃತಿಗಳಿಗೆ ದೇಶದಾದ್ಯಂತ ಅಷ್ಟೇ ಅಲ್ಲ ವಿದೇಶದಲ್ಲಿಯೂ ಬೇಡಿಕೆ ಸೃಷ್ಟಿಸಲು ವ್ಯಾಪಕ ಪ್ರಚಾರ ನೀಡುವ ಮತ್ತು ಆನ್ ಲೈನ್ ಮೂಲಕ ಮಾರಾಟ ಮಾಡಲು ವೇದಿಕೆ ಕಲ್ಪಿಸಲು ಕ್ರಮ ವಹಿಸುವ ಸಾಧ್ಯತೆಗಳ ಕುರಿತಂತೆ ವರದಿ ಸಲ್ಲಿಸಲು ಸ್ಥಳದಲ್ಲಿ ಹಾಜರಿದ್ದ ಹಿರಿಯ ಐ.ಎಫ್.ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರಿಗೆ ಸೂಚನೆ ನೀಡಿದರು.

ಲಾಂಟನಾ ವಿದೇಶದಿಂದ ನಮ್ಮ ದೇಶಕ್ಕೆ ಆಗಮಿಸಿದ ಕಳೆಯಾಗಿದೆ. ಇದು ಕಾಡನ್ನು ರಕ್ತ ಬೀಜಾಸುರನಂತೆ ಆವರಿಸುತ್ತಿದ್ದು ಇದನ್ನು ವೈಜ್ಞಾನಿಕವಾಗಿ ನಿರ್ಮೂಲನೆ ಮಾಡುವ ಅಗತ್ಯವಿದೆ. ಲಾಂಟನಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬುಡಸಮೇತ ತೆಗೆದು ಕಲಾಕೃತಿ ರಚಿಸಲು ಬುಡಕಟ್ಟು ಮತ್ತು ಆದಿವಾಸಿಗಳಿಗೆ ಸೂಕ್ತ ತರಬೇತಿ ನೀಡಿದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಲಾಂಟನಾ ಸಮಸ್ಯೆಯೂ ಪರಿಹಾರವಾಗುತ್ತದೆ ಎಂದು ಹೇಳಿದರು. ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮನುಷ್ಯನಂತೆಯೇ ಬದುಕುವ ಹಕ್ಕಿದೆ. ಕಾಡಿನಂಚಿನಲ್ಲಿದ್ದ ನಮ್ಮ ಪೂರ್ವಿಕರು ಸೂಕ್ಷ್ಮ ಸಂವೇದಿಗಳಾಗಿದ್ದರು. ಅವರು ವನ್ಯಜೀವಿಗಳೊಂದಿಗೆ ಸಹಬಾಳ್ವೆಯಿಂದ ಬದುಕುವುದನ್ನು ಅರಿತಿದ್ದರು. ಇಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

#lantana #handicraft #manufacturers #EswaraKandre #Congress #Minister

Previous Post

ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ: ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Next Post

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

Related Posts

ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌
Top Story

ಮುಖ್ಯಮಂತ್ರಿ ಸಚಿವಾಲಯಕ್ಕೆ ಮೂವರು ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕ‌

by ಪ್ರತಿಧ್ವನಿ
July 8, 2026
0

ಬೆಂಗಳೂರು: ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಮೂವರನ್ನು ಮಾಧ್ಯಮ ಕಾರ್ಯದರ್ಶಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಸಿ.ಎಂ.ಡಿ.ಕೆ.ಶಿವಕುಮಾರ್‌ ಅವರ ಜೊತೆ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಪಿ.ತ್ಯಾಗರಾಜ್‌ ಅವರನ್ನು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-1...

Read moreDetails
PM Modi MSP Price

ವರದಿಯೇ ಇಲ್ಲದ MSP ಸಮಿತಿಯಿಂದ ಲಕ್ಷ ಲಕ್ಷ ವೆಚ್ಚ : ಏನಾಗ್ತಿವೆ ಮೋದಿ ಸರ್ಕಾರ ರೈತರಿಗೆ ನೀಡಿರುವ ಭರವಸೆಗಳು..?

July 8, 2026
TMC ED Raids

ಟಿಎಂಸಿ ಪಕ್ಷಕ್ಕೆ ಇಡಿ ಬಿಗ್‌ ಶಾಕ್‌ : 440 ಕೋಟಿ ಹಣದ ಬ್ಯಾಂಕ್‌ ಅಕೌಂಟ್‌ ಸೀಜ್‌ ; ತನಿಖೆ ಚುರುಕು..!

July 8, 2026
Kangana Ranaut Angry

ರಾಮ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್‌ನಿಂದ ಈಗ ರಾಮನ ಹೆಸರಿನಲ್ಲಿ ರಾಜಕೀಯ : ಕಂಗನಾ ವಾಗ್ದಾಳಿ

July 8, 2026
Badarinath Kedarnath Temple

ರಾಮ ಮಂದಿರದ ಬೆನ್ನಲ್ಲೇ ಇನ್ನೊಂದು ಐತಿಹಾಸಿಕ ತೀರ್ಥ ಕ್ಷೇತ್ರದ ದೇಣಿಗೆಯಲ್ಲಿ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ..!

July 8, 2026
Next Post
ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada