ಚಾಲೆಂಜಿಂಗ್ ಸ್ಟಾರ್ ಡಿ ಬಾಸ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಕ್ರಾಂತಿ ಚಿತ್ರವು ಈಗಾಗಲೇ ಟೈಟಲ್, ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡುತ್ತಿದೆ.
ಇನ್ನು ಡಿಸೆಂಬರ್ 18ರ ಭಾನುವಾರದಂದು ಹೊಸಪೇಟೆಯಲಿ ಚಿತ್ರದ ಬೊಂಬೆ ಹಾಡು ಬಿಡುಗಡೆ ಸಮಾರಂಭವನ್ನ ಚಿತ್ರತಂಡ ಹಮ್ಮಿಕೊಳ್ಳಲಾಗಿತ್ತು ಸಮಾರಂಭದ ವೇಳೆ ಅಪ್ಪು ಅಭಿಮಾನಿಗಳು ದರ್ಶನ್ ವಿರುದ್ದ ಆಕ್ರೋಶವನ್ನ ಹೊರಹಾಕಿದ್ದರು ಈ ವೇಳೆ ಕಿಡಿಗೇಡಿಯೋರ್ವ ದರ್ಶನ್ ಮೇಲೆ ಚಪ್ಪಲಿ ಎಸೆದು ವಿಕೃತಿ ಮೆರೆದಿದ್ದ ಘಟನೆಗೆ ಟ್ವಿಸ್ಟ್ ಸಿಕ್ಕಿದೆ.
ಘಟನೆ ಸಂಬಂಧ ಕಾರ್ಯಕ್ರಮ ಆಯೋಜಕರು ಹಾಗೂ ಸಂಘಟಕರು ಈ ಸಂಬಂಧ ದೂರು ದಾಖಲಿಸಿದ್ದರು ಇದಕ್ಕೆ ಪ್ರತಿಯಾಗಿ ಮೂರು ವಿಶೇಷ ತಂಡಗಳನ್ನ ರಚಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂವರು Aರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಆರೋಪಿಗಳನ್ನ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
