ಕೋಲಾರ : ಈ ಬಾರಿ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿಯನ್ನು ಸೋಲಿಸಿ ಮನೆಗೆ ಕಳುಹಿಸುತ್ತೇವೆ ಎಂದು ಬಂಗಾರಪೇಟೆಯಲ್ಲಿ ಸಂಸದ ಮುನಿಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಇಂದು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಎಂ.ನಾರಾಯಣಸ್ವಾಮಿ ಅವರು ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎಸ್.ಎನ್. ನಾರಾಯಣಸ್ವಾಮಿ ಅವರು ಸರ್ಕಾರಿ ಜಮೀನನ್ನು ಗುಳುಂ ಮಾಡಿದ್ದಾರೆ. ಗೋಮಾಳ ಜಮೀನನ್ನು ಅವರ ತಾಯಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ .ಡಿಕೆ ರವಿ ಕೊಲೆಯಲ್ಲಿ ಎಸ್ಎನ್ ನಾರಾಯಣಸ್ವಾಮಿ ಪಾತ್ರ ಇದೆ ಹಲವು ಅಧಿಕಾರಿಗಳು ಸಾವಿಗೆ ಶಾಸಕರೇ ಕಾರಣರಾಗಿದ್ದಾರೆ.ಡಿಕೆ ರವಿ ಆತ್ಮಕ್ಕೆ ಶಾಂತಿ ಸಿಗಬೇಕಂದ್ರೆ ಕಾಂಗ್ರೆಸ್, ಜೆಡಿಎಸ್ ಅವರಿಗೆ ಮತ ನೀಡಬಾರದು .ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರೆ ನೀಡಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ .ರಸ್ತೆ, ರೈಲ್ವೇ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳು ಆಗಿವೆ .ಬಂಗಾರಪೇಟೆ ಜನ ಶಾಂತಿಯಿಂದ ಇರಬೇಕಂದರೆ ಬಿಜೆಪಿಗೆ ಮತ ನೀಡಬೇಕು.ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.