• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಸಾಮಾಜಿಕ ಹೋರಾಟಗಳಲ್ಲಿ ಜನರಿಗೆ ಆಸರೆಯಾಗಿದ್ದ ರಂಗಭೂಮಿ ಕಲಾವಿದರು ಈಗ ಒಂಟಿ!

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 3, 2022
in ವಿಶೇಷ
0
ಸಾಮಾಜಿಕ ಹೋರಾಟಗಳಲ್ಲಿ ಜನರಿಗೆ ಆಸರೆಯಾಗಿದ್ದ ರಂಗಭೂಮಿ ಕಲಾವಿದರು ಈಗ ಒಂಟಿ!
Share on WhatsAppShare on FacebookShare on Telegram

ಟಿವಿ, ರೇಡಿಯೋ ಮಾಧ್ಯಮಗಳಿಲ್ಲದ ಸಮಯದಲ್ಲಿ ಜನರಿಗೆ ರಂಗಭೂಮಿ ಮನರಂಜನೆ ಒದಗಿಸುತ್ತಿತ್ತು. ಕಾಲಾಂತರದಲ್ಲಿ ಗ್ರಾಮೀಣ ಭಾಗದಲ್ಲಿ ರಂಗಭೂಮಿ ಕಲಾವಿದರು ಸಾಮಾಜಿಕ ಬದಲಾವಣೆಗಳಲ್ಲಿ, ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದರು. ದಿನ ಕಳೆದಂತೆ ಧಾರ್ಮಿಕವಾಗಿ, ಪೌರಾಣಿಕ ನಾಟಕ ಮಾಡುತ್ತಾ ಜನರಿಗೆ ಧರ್ಮದ ಬಗ್ಗೆ ಅರಿವೂ ಮೂಡಿಸುವ ಕೆಲಸ ಈ ರಂಗಭೂಮಿ ಕಲಾವಿದರು ಮಾಡಿಕೊಂಡು ಬಂದರು. ಕಾಲ ಕ್ರಮೇಣ ವೃತ್ತಿ ರಂಗಭೂಮಿ, ಹವ್ಯಾಸಿ ರಂಗಭೂಮಿ ಎಂದು ಭಿನ್ನವಾಗುತ್ತಾ ಸಾಗಿ ಇದೀಗ ಜೀವನೋಪಾಯಕ್ಕಾಗಿ ನಾಟಕ ಕಂಪನಿಗಳಾಗಿ ಬದಲಾಗುತ್ತಾ ಬಂದಿವೆ.

ADVERTISEMENT

ಕರ್ನಾಟಕದಲ್ಲಿ ನಾಟಕ ಕಂಪನಿಗಳು ಉಚ್ರಾಯ ಸ್ಥಿತಿಯಲ್ಲಿದ್ದಾಗ ಅನೇಕ ಮೇರು ನಟರು ಬೆಳಕಿಗೆ ಬಂದರು. ಅನೇಕರು ಚಲನಚಿತ್ರಗಳಲ್ಲಿ ಉತ್ತಮ ಹೆಸರುಗಳಿಸಿದರು. ರಂಗಭೂಮಿಯಿಂದ ಬಂದ ಕಲಾವಿದರು ಪ್ರಶಸ್ತಿ, ಹಣ, ಅಧಿಕಾರ ಎಲ್ಲವನ್ನು ಪಡೆದರು. ಆದರೆ ಇದೀಗ ಕಾಲ ಬದಲಾಗುತ್ತದೆ. ಒಂದು ಕಾಲದಲ್ಲಿ ಸಾಮಾಜಿಕ ಹೋರಾಟಗಳಲ್ಲಿ ಜನರಿಗೆ ಆಸರೆಯಾಗಿದ್ದ ರಂಗಭೂಮಿ ಕಲಾವಿದರಿಗೆ ಯಾರಾದರೂ ಆಸರೆಯಾಗಿ ನಿಲ್ಲಬೇಕಾದ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಕೋವಿಡ್!

ಹೌದು. ರಾಜ್ಯದಲ್ಲಿ ಒಂದು ಕಾಲದಲ್ಲಿ ಸಣ್ಣ ಹಾಗೂ ದೊಡ್ಡ ಕಂಪನಿ ಸೇರಿದಂತೆ 70ಕ್ಕೂ ಅಧಿಕ ನಾಟಕ ಕಂಪನಿಗಳಿದ್ದವು. ಕ್ರಮೇಣ ಅವುಗಳ ಸಂಖ್ಯೆ ಇಳಿಯುತ್ತಾ ಕಳೆದ ಕೆಲ ವರ್ಷಗಳಲ್ಲಿ ಅವುಗಳ ಸಂಖ್ಯೆ 40 ರಿಂದ 50 ಬಂದಿದೆ. ಆದರೆ ಕೋವಿಡ್ ಭಾರತಕ್ಕೆ ಕಾಲಿಟ್ಟಿದ್ದೆ ತಡ ಕಂಪನಿ ನಾಟಕಗಳು ಒಂದೊಂದಾಗೆ ಬಾಗಿಲು ಮುಚ್ಚಿದವು. ಸದ್ಯ ರಾಜ್ಯದಲ್ಲಿ 26 ನಾಟಕ ಕಂಪನಿಗಳು ಅಧಿಕೃತವಾಗಿ ನಾಟಕ ಪ್ರದರ್ಶನ ಮಾಡುತ್ತಿವೆ.

ಎ.ಬಿ.ಸಿ ಎಂದು ನಾಟಕ ಕಂಪನಿಗಳನ್ನು ವಿಂಗಡಣೆ ಮಾಡಲಾಗಿದ್ದು, ಅವುಗಳಿಗೆ ಸರ್ಕಾರ ವರ್ಷಕ್ಕೆ ಅನುಧಾನ ನೀಡುತ್ತದೆ. ಆದರೆ ಅದು ಭಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ. ಗ್ರೇಡ್ ಆಧಾರದ ಮೇಲೆ ಸರ್ಕಾರ ಅನುಧಾನ ನೀಡುತ್ತದೆ. 25 ವರ್ಷ ಮೇಲ್ಪಟ್ಟ ಕಂಪನಿಗಳನ್ನು A ಗ್ರೇಡ್ ಕಂಪನಿಯಾಗಿದ್ದು, ಸರ್ಕಾರ ಅವುಗಳಿಗೆ ವರ್ಷಕ್ಕೆ 9 ರಿಂದ 10 ಲಕ್ಷದ ವರೆಗೆ ಅನುದಾನ ನೀಡುತ್ತದೆ. 15 ವರ್ಷ ಮೇಲ್ಪಟ್ಟ ಕಂಪನಿಗಳಿಗೆ 6 ಲಕ್ಷ ಅನುದಾನ ನೀಡುತ್ತದೆ. ಆದರೆ ಸರ್ಕಾರದ ಈ ಅನುದಾನ ಕೋವಿಡ್ ಬಂದಾಗಿನಿಂದ ಸರಿಯಾದ ಸಮಯಕ್ಕೆ ಸಿಗದೆ ಕಲಾವಿದರ ಬದುಕು ಅತಂತ್ರವಾಗಿದೆ.

ಕೋವಿಡ್ ಹೊಡೆತಕ್ಕೆ ರಂಗಭೂಮಿ ಕಲಾವಿದರು ಅಕ್ಷರಶಃ ನಲುಗಿ ಹೋಗಿದ್ದಾರೆ. ಕೊರೋನಾ ಕಾರಣದಿಂದಾಗಿ ಎರಡು ವರ್ಷಗಳಿಂದ ಬಂದ್ ಆಗಿದ್ದ ನಾಟಕ ಕಂಪನಿಗಳು ಕೆಲವು ತಿಂಗಳಿಂದ ಆರಂಭವಾಗಿದ್ದವು. ಆದರೆ ಇದೀಗ ಮತ್ತೆ ಕೋವಿಡ್, ಓಮಿಕ್ರಾನ್ ಆತಂಕ ಇಡೀ ರಂಗಭೂಮಿ ಕಲಾವಿದರನ್ನು ಕಣ್ಣಿರಲ್ಲಿ ಕೈ ತೊಳೆಯುವಂತೆ ಮಾಡಿದೆ.

ಸಾಮಾನ್ಯವಾಗಿ ರಾತ್ರಿ ವೇಳೆ ಪ್ರೇಕ್ಷಕರು ನಾಟಕ ನೋಡಲು ಬರುವುದು ಹೆಚ್ಚು. ಈ ಕಾರಣಕ್ಕಾಗಿ ಹೆಚ್ಚಿನ ನಾಟಕಗಳು ಸಂಜೆ ಹಾಗೂ ರಾತ್ರಿ ವೇಳೆ ಆಯೋಜನೆ ಮಾಡಲಾಗುತ್ತದೆ. ಆದರೆ ಇದೀಗ ನೈಟ್ ಕರ್ಫೂ ರಂಗಭೂಮಿ ಕಲಾವಿದರ ಬಾಳಲ್ಲಿ ಕತ್ತಲೆ ಮೂಡಿಸಿದೆ. ವಿಜಯಪುರ ನಗರದ ಹೊರಭಾಗದಲ್ಲಿ ಹಲವು ನಾಟಕ ಕಂಪನಿಗಳು ಟೆಂಟ್ ಹಾಕಿ ನಾಟಕ ಪ್ರದರ್ಶನ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ವಿವಿಧ ಜಿಲ್ಲೆಯ ನಾಟಕ ಕಂಪನಿಗಳು ನಗರಕ್ಕೆ ಆಗಮಿಸಿ ಟೆಂಟ್ ಹಾಕಿವೆ. ಹೊಸ ವರ್ಷಾಚರಣೆ ಹಾಗೂ ವಿಜಯಪುರ ಸುಪ್ರಸಿದ್ಧ ಸಿದ್ದೇಶ್ವರ ಜಾತ್ರೆ ವೇಳೆ ಉತ್ತಮ ಆದಾಯ ಪಡೆಯಬಹುದು ಎಂದು ಆಶಾಭಾವನೆ ಹೊಂದಿದ್ದರು. ಆದರೆ ಕೋವಿಡ್ ಮೂರನೇ ಅಲೆ ಆತಂಕ ಕಲಾವಿದನ್ನು ನಡು ನೀರಲ್ಲಿ ನೀಲ್ಲಿಸಿದೆ. ನೈಟ್ ಕರ್ಫೂ ಕಾರಣದಿಂದ ರಾತ್ರಿ ಪ್ರದರ್ಶನ ಬಂದ್ ಮಾಡಿದ್ದಾರೆ. ದಿನಕ್ಕೆ ಕೇವಲ ಎರಡು ಆಟಗಳು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಜೊತೆಗೆ ಸಿದ್ದೇಶ್ವರ ಜಾತ್ರೆ ರದ್ದು ಮಾಡಿದ ಕಾರಣ ಪ್ರೇಕ್ಷಕರ ಆಗಮಿಸೋದು ಅನುಮಾನವಾಗಿರುವ ಕಾರಣ ಕಲಾವಿದರು ಸಂಕಷ್ಟ ಅನುಭವಿಸುವಂತಾಗಿದೆ.

ಸಾಮಾನ್ಯವಾಗಿ ಒಂದು ನಾಟಕ ಕಂಪನಿಗಳು 25 ರಿಂದ 30 ಜನ ಕಲಾವಿದರು, 10 ಜನ ಸಹಾಯಕರು ಸೇರಿದಂತೆ 40 ಜನ ಕೆಲಸ ಮಾಡುತ್ತಾರೆ. ಕೆಲಸ ಮಾಡುವ ಪ್ರತಿಯೊಬ್ಬರಿಗೂ ಪ್ರತಿದಿನ ಸಂಬಳ ನೀಡುವುದು ಕಡ್ಡಾಯವಾಗಿರುತ್ತದೆ.

ಇದರಲ್ಲಿ ಮಹಿಳಾ ಕಲಾವಿದರಿಗೆ ಹೆಚ್ಚಿನ ಸಂಭಾವನೆ ನೀಡಬೇಕಾಗುತ್ತದೆ. ಮಹಿಳಾ ಕಲಾವಿದರಿಗೆ ದಿನಕ್ಕೆ ಒಂದು ಸಾವಿರ, ಪುರುಷ ಕಲಾವಿದರಿಗೆ 600 ರಿಂದ 800 ಸಂಬಳ ನೀಡಲಾಗುತ್ತೆ. ಇದರ ಜೊತೆಗೆ ಜಾಗದ ಬಾಡಿಕೆ, ಕರೆಂಟ್ ಬಿಲ್ ಸೇರಿದಂತೆ ಉಳಿದ ಖರ್ಚು ಸೇರಿ ಪ್ರತಿದಿನ 15 ರಿಂದ 16 ಸಾವಿರ ಖರ್ಚಾಗುತ್ತದೆ. ಆದರೆ ಪ್ರೇಕ್ಷಕರ ಕೊರತೆಯಿಂದಾಗಿ ದಿನಕ್ಕೆ 5000 ಗಳಿಸೋದು ಕೂಡಾ ಕಂಪನಿಗಳಿಗೆ ಸಂಕಷ್ಟವಾಗುತ್ತಿದ್ದು, ಹೀಗಾದ್ರೆ ರಂಗಭೂಮಿ ಉಳಿಯುವುದು ಹೇಗೆ ಅನ್ನೋ ಆತಂಕ ಎದುರಾಗಿದೆ.

ನೈಟ್ ಕರ್ಫೂ ಮುನ್ನ ಪ್ರತಿದಿನ 200 ಪ್ರೇಕ್ಷಕರು ಆಗಮಿಸುತ್ತಿದ್ದರು. ಆದರೆ ಇದೀಗ 50 ರಿಂದ 60 ಪ್ರೇಕ್ಷಕರು ಮಾತ್ರ ಬರುತ್ತಿದ್ದು, ನಷ್ಟದಲ್ಲೇ ನಾಟಕ ಪ್ರದರ್ಶನ ಮಾಡುವಂತಾಗಿದೆ. ಹೀಗಾಗಿ ಸರ್ಕಾರ ನಮ್ಮ ಸಹಾಯಕ್ಕೆ ನಿಲ್ಲಬೇಕು ಎಂದು ಕಲಾವಿದರು ಮನವಿ ಮಾಡಿದ್ದಾರೆ.

Tags: Basavaraj BommaiBJPCongress PartyKarnataka Governmentಬಿಜೆಪಿರಂಗಭೂಮಿ ಕಲಾವಿದಸಾಮಾಜಿಕ ಹೋರಾಟ
Previous Post

ಅಸಹಾಯಕ ತಳಸಮುದಾಯಗಳ ವಿಘಟನೆಯೇ ಅಧಿಕಾರಸ್ಥರ ಬಂಡವಾಳ

Next Post

ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

January 15, 2026
ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
Next Post
ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada