
ಕೇಂದ್ರ ರೈಲ್ವೇ ಇಲಾಖಾ ಪರೀಕ್ಷೆ ವಿಚಾರವಾಗಿ ಮಾಂಗಲ್ಯ ಮತ್ತು ಜನಿವಾರ ತೆಗೆಯುವಂತೆ ಆದೇಶಕ್ಕೆ ವಿರೋಧ ಕೇಳಿ ಬಂದಿತ್ತು. ಇದೀಗ ಹೊಸ ಸುತ್ತೋಲೆ ಹೊರಡಿಸಿರುವ ರೈಲ್ವೇ ಇಲಾಖೆ ನೇಮಕಾತಿ ಮಂಡಳಿ, ಮಾಂಗಲ್ಯ ಮತ್ತು ಜನಿವಾರ ತೆಗೆಯುವ ನಿಯಮ ಸಡಿಲಿಕೆ ಮಾಡಿದೆ. ಏಳನೇ ಕಾಲಂನಲ್ಲಿನ ಮಾರ್ಪಾಡು ಮಾಡಿದೆ. ಯಾವುದೇ ಧಾರ್ಮಿಕ ಮನೋಭಾವನೆಗೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ.

ಕೇಂದ್ರ ರೈಲ್ವೇ ಇಲಾಖಾ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಜನಿವಾರ ತೆಗೆಯುವಂತೆ ಆದೇಶಕ್ಕೆ ಬಂದಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ರೈಲ್ವೇ ಇಲಾಖೆ ನೇಮಕಾತಿ ಮಂಡಳಿ ಹೊಸ ಸುತ್ತೋಲೆ ಹೊರಡಿಸಿದೆ.. ಮಾಂಗಲ್ಯ ಮತ್ತು ಜನಿವಾರ ತೆಗೆಯುವ ನಿಯಮ ಸಡಿಲಿಕೆ ಮಾಡಲಾಗಿದೆ. ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ ನಿಷೇಧ ಗೊಂದಲದ ಬಗ್ಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದು, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯದ ಬಗ್ಗೆ ದೂರು ಬಂದಿದೆ.
ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂಬ ದೂರುಗಳನ್ನು ಸಂಸದರು, ಶಾಸಕರು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದಿದ್ದಾರೆ.

ಜನಿವಾರ ಮತ್ತು ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೆ ಈಡಾಗಬಾರದೆಂದು ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ ಸಚಿವ ವಿ ಸೋಮಣ್ಣ.