ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ಪುತ್ರನಿಗೆ ತಮ್ಮ ತವರು ಕ್ಷೇತ್ರ ಶಿಕಾರಿಪುರ ಬಿಟ್ಟುಕೊಟ್ಟಿರುವುದಾಗಿ ಪ್ರಕಟಿಸಿದರು.
ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ಮುಂಬರುವ ಚುನಾವಣೆಯಲ್ಲಿ ನನ್ನ ಪುತ್ರ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದರು.
ಮೈಸೂರು ಭಾಗದಲ್ಲಿ ಸ್ಪರ್ಧಿಸುವಂತೆ ವಿಜಯೇಂದ್ರ ಮೇಲೆ ಒತ್ತಡವಿದೆ. ಆದರೆ ಈ ಕ್ಷೇತ್ರ ಖಾಲಿ ಆಗುತ್ತಿರುವುದರಿಂದ ಶಿಕಾರಿಪುರದಿಂದಲೇ ಸ್ಪರ್ಧಿಸುತ್ತಾರೆ. ಶಿಕಾರಿಪುರ ಜನತೆ ನನಗೆ ಬೆಂಬಲ ನೀಡಿದಂತೆ ಮಗನಿಗೂ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.