• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸೋನಿಯಾಗೆ ಟಕ್ಕರ್; ಹೊಸ ಪಕ್ಷ ಶುರು ಮಾಡಿದ ಅಮರೀಂದರ್ ಸಿಂಗ್ ಮುಂದಿನ ನಡೆಯೇನು?

ನಚಿಕೇತು by ನಚಿಕೇತು
November 6, 2021
in ದೇಶ, ರಾಜಕೀಯ
0
ಸೋನಿಯಾಗೆ ಟಕ್ಕರ್; ಹೊಸ ಪಕ್ಷ ಶುರು ಮಾಡಿದ ಅಮರೀಂದರ್ ಸಿಂಗ್ ಮುಂದಿನ ನಡೆಯೇನು?
Share on WhatsAppShare on FacebookShare on Telegram

ಪಂಜಾಬ್ ರಾಜಕೀಯದಲ್ಲಿ ಮಾಜಿ ಸಿಎಂ ಅಮರೀಂದರ್ ಸಿಂಗ್ ಹೊಸ ಮನ್ವಂತರ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಕ್ಯಾಪ್ಟನ್ ಮುಂದಿನ ನಡೆಯ ಗೊಂದಲಗಳಿಗೆ ಕರೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ಗೆ ಸೆಡ್ಡು ಹೊಡೆಯುವಂತೆ ಅಮರೀಂದರ್ ಸಿಂಗ್ ಲೋಕ ಕಾಂಗ್ರೆಸ್ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ.

ADVERTISEMENT

ಇತ್ತೀಚೆಗೆ ಪಂಜಾಬ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ಪಡೆಯ ವಿರುದ್ಧ ಅಮರಿಂದರ್ ಸಿಂಗ್ ಸಮರ ಸಾರಿದ್ರು. ಜೊತೆಗೆ ಕಾಂಗ್ರೆಸ್ ಪಕ್ಷ ತೊರೆದ ಮೇಲೆ ಬಿಜೆಪಿ ಸೇರ್ತಾರೆ ಎಂಬ ಊಹಾಪೋಹಗಳು ಸಹ ಕೇಳಿ ಬಂದಿದ್ದವು. ಆದ್ರೆ ಈಗ ಅಮರಿಂದರ್ ಸಿಂಗ್ ಲೋಕ ಕಾಂಗ್ರೆಸ್ ಎಂಬ ತಮ್ಮದೇ ಒಂದು ಪಕ್ಷ ಸ್ಥಾಪಿಸುವ ಮೂಲಕ ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಅಮರಿಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ತಡ, ಕೈ ಪಡೆಯ ವಿರುದ್ಧ ಸಿಂಗ್ ಸಿಡಿದೆದ್ದಿರು. ಇನ್ನೂ ಕಾಂಗ್ರೆಸ್ ತೊರೆಯುವುದಾಗಿ ಹೇಳಿಕೆ ನೀಡಿದ್ರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲಿ ಅಮಿತ್ ಶಾ, ಮೋದಿಯವರನ್ನು ಕೂಡ ಭೇಟಿ ಮಾಡಿದ್ರು. ಈ ಭೇಟಿಯಿಂದ ಅಮರಿಂದರ್ ಸಿಂಗ್ ಕಮಲಕ್ಕೆ ಸೇರ್ಪಡೆ ಆಗ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಗೆ ಸ್ವತಃ ಅಮರಿಂದರ್ ನಾನು ಕಾಂಗ್ರೆಸ್ ತೊರೆಯುವುದು ಮಾತ್ರ ಸತ್ಯ. ಆದ್ರೆ ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟನೆ ನೀಡಿದ್ರು.

ಪಕ್ಷ ತೊರೆದು ಈಗ ಲೋಕ ಕಾಂಗ್ರೆಸ್ ಎಂಬ ಪಕ್ಷವನ್ನು ಸ್ಥಾಪಿಸಿದ್ದಾರೆ. ಪಕ್ಷ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಅಧಿಕೃತ ಸದಸ್ಯತ್ವಕ್ಕೆ 7 ಪುಟಗಳ ರಾಜೀನಾಮೆ ಪತ್ರವನ್ನು ಸೋನಿಯಾಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನೂ ಸಿಂಗ್ ತಮ್ಮ ಹೊಸ ಪಕ್ಷದ ಬಗ್ಗೆ ಟ್ವಿಟರ್ ಪೋಸ್ಟ್‌ ಮಾಡಿದ್ದು, ಪಕ್ಷದ ನೋಂದಣಿಗೆ ಅನುಮೋದನೆಯೊಂದೇ ಭಾರತದ ಚುನಾವಣಾ ಆಯೋಗದಲ್ಲಿ ಬಾಕಿ ಉಳಿದಿದೆ. ಕೆಲವೇ ದಿನಗಳಲ್ಲಿ ಪಕ್ಷದ ಚಿಹ್ನೆಯನ್ನು ಅಧಿಕೃತಗೊಳಿಸುವುದಾಗಿ ತಿಳಿಸಿದ್ದಾರೆ.

‘ಲೋಕ’ದ ಮುಂದಿನ ನಡೆ ಏನು?

ನಮ್ಮ ಪಕ್ಷ ಸಮಸ್ಯೆ ಆಧಾರಿತ ಬೆಂಬಲ ನೀಡುತ್ತದೆ
3 ಹೊಸ ಕೃಷಿ ಕಾನೂನುಗಳನ್ನು ರದ್ದು ಮಾಡುತ್ತೇವೆ
ಬಿಜೆಪಿ ಜೊತೆ ಹೊಂದಾಣಿಕೆ ಮಾತಿನ ಬಗ್ಗೆ ನಾ ಹೇಳಿಲ್ಲ ಪಕ್ಷ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುತ್ತದೆ ಅಷ್ಟೇ ಆದರೆ ಈ ಬಗ್ಗೆ ಬಿಜೆಪಿಯೊಂದಿಗೆ ಇನ್ನೂ ಮಾತನಾಡಿಲ್ಲ ನಮ್ಮ ಪಕ್ಷ ಸಮಸ್ಯೆ ಆಧಾರಿತ ಬೆಂಬಲ ನೀಡುತ್ತದೆ.

ಜೊತೆಗೆ 3 ಹೊಸ ಕೃಷಿ ಕಾನೂನುಗಳನ್ನು ರದ್ದಿನ ಬಗ್ಗೆ ಮಾತುಕತೆ ನಡೆಸುತ್ತೇವೆ. ನಮ್ಮ ಪಕ್ಷ ಬಿಜೆಪಿ ಜೊತೆ ಹೊಂದಾಣಿಕೆ ಮಾತಿನ ಬಗ್ಗೆ ನಾನು ಚರ್ಚೆ ಮಾಡಿಲ್ಲ. ಇನ್ನೂ ಪಕ್ಷ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುತ್ತದೆ ಅಷ್ಟೇ. ಆದರೆ ಈ ಬಗ್ಗೆ ಇನ್ನೂ ಬಿಜೆಪಿ ಜೊತೆ ಮಾತಾನಾಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ತೊರೆದ ಕೂಡಲೇ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದ ಅಮರಿಂದರ್, ಈಗ ಕೈ ಪಡೆಗೆ ಠಕ್ಕರ್ ನೀಡಲು ಲೋಕ ಕಾಂಗ್ರೆಸ್ ಪಾರ್ಟಿಯನ್ನು ಘೋಷಣೆ ಮಾಡಿದ್ದಾರೆ. ಜೊತೆಗೆ ಸೀಟು ಹಂಚಿಕೆ ಬಗ್ಗೆ ಬಿಜೆಪಿ ಮಾತಾಡುವುದಾಗಿ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಲೋಕ ಕಾಂಗ್ರೆಸ್ ಪಕ್ಷ ಒಂದಾಗಲಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಅಮರೀಂದರ್ ಸೇಡು ತೀರಿಸಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.

Tags: Amarendar singhBJPCongress PartyCovid 19Sonia Gandhiಅಮರಿಂದರ್ ಸಿಂಗ್ನರೇಂದ್ರ ಮೋದಿಬಿಜೆಪಿ
Previous Post

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Next Post

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! - AIIMS

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada