• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ಪ್ರಚಾರದಲ್ಲಿ ಅಪ್ಪನಿಗೆ ನೆರವಾದ ಎಂಜಿನಿಯರ್ ಪದವೀಧರ  ಮಕ್ಕಳು..!

Any Mind by Any Mind
April 29, 2023
in ರಾಜಕೀಯ
0
ಚುನಾವಣಾ ಪ್ರಚಾರದಲ್ಲಿ ಅಪ್ಪನಿಗೆ ನೆರವಾದ ಎಂಜಿನಿಯರ್ ಪದವೀಧರ  ಮಕ್ಕಳು..!
Share on WhatsAppShare on FacebookShare on Telegram

ಶಿವಮೊಗ್ಗ(shivamogga) ಜಿಲ್ಲೆ ರಾಜ್ಯ ರಾಜಕಾರಣಕ್ಕೆ ತನ್ನದೇ ಕೊಡುಗೆ ನೀಡಿದೆ. ಜಿಲ್ಲೆಯಿಂದ ನಾಲ್ವರು ಸಿಎಂಗಳಾಗಿದ್ದು, ರಾಜಕೀಯ ಚಟುವಟಿಕೆಗಳ ಪ್ರಯೋಗ ಶಾಲೆಯಾಗಿದೆ. ಕಳೆದ ಸಲ ಏಳು ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನ ಗೆದ್ದು ಬೀಗಿದ್ದ ಬಿಜೆಪಿಗೆ ಈ ಚುನಾವಣೆ ಕಠಿಣವಾಗಿ ಪರಿಣಮಿಸಿದೆ. ಎಲ್ಲಾ ಪಕ್ಷದಲ್ಲಿಯೂ ಕುಟುಂಬ ಸದಸ್ಯರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸಾಗರ ಹಾಗೂ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ(BJP) ಶಾಸಕರ ಪುತ್ರರು ಹಲವು ವರ್ಷಗಳಿಂದ ತಮ್ಮದೇ ವರ್ಚಸ್ಸು ಬೆಳೆಸಿಕೊಂಡಿದ್ದು ಚುನಾವಣಾ(election) ಪ್ರಚಾರದಲ್ಲಿದ್ದಾರೆ. ಸಾಗರ ಶಾಸಕ ಹರತಾಳು ಹಾಲಪ್ಪ ಪುತ್ರ ಚೇತನ್ ಹಾಲಪ್ಪ ಅವರಿಗೆ ಮೂವತ್ತೊಂದು ವರ್ಷ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಕಂಪನಿ ಒಡೆತನ ಹೊಂದಿರುವ ಚೇತನ್ ಸುಮಾರು ಮೂರು ಸಾವಿರ ವಿದ್ಯಾವಂತ ಯುವಕರಿಗೆ ಕೆಲಸ ನೀಡಿದ್ದಾರೆ. ಚಾಕಚಕ್ಯತೆ, ತೀಕ್ಷ್ಣ ರಾಜಕಾರಣಕ್ಕೆ(politics) ಸಾಕ್ಷಿಯಾಗಿರುವ ಹರತಾಳು ಹಾಲಪ್ಪ ಅವರನ್ನ ನಿಭಾಯಿಸೋದು ಕಷ್ಟ‌. ಹಾಲಪ್ಪ ಪುತ್ರ ಚೇತನ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಾ ತಂದೆ ಪರ ಮತಯಾಚನೆ ಮಾಡುತ್ತಾರೆ. ಈ ಸಮಯದಲ್ಲಿ ಕಾರ್ಯಕರ್ತರಿಗೆ ತಂದೆ ಸ್ಪಂದಿಸಲು ಆಗದೇ ಹೋದರೆ ಚೇತನ್ ಸ್ಪಂದಿಸುತ್ತಾರೆ. ಬಿಇ( ಮೆಕ್ಯಾನಿಕಲ್) ಆರ್ ವಿ ಎಂಜಿನಿಯರಿಂಗ್ ಕಾಲೇಜ್(college) ಹಾಗೂ ಎಂಬಿಎ ಲೀಡ್ಸ್ ವಿವಿ, ಲಂಡನ್‌ನಲ್ಲಿ ಮುಗಿಸುರುವ ಚೇತನ್ ಗೆ ಹಳ್ಳಿ ಜನರ ಒಡನಾಟ ಇದೆ. ತಂದೆ ಸೊರಬದಲ್ಲಿ ಚುನಾವಣೆಗೆ ನಿಂತಾಗಲೂ ಸಹ ಚೇತನ್ ಕೆಲಸ ಮಾಡಿದ್ದರು. ‌ಸಾಗರದಲ್ಲಿ ಮರು ಆಯ್ಕೆ ಬಯಸಿರುವ ಹಾಲಪ್ಪ ಪರ ಮಗ ಚೇತನ್ ಕೆಲಸ ಮಾಡುತ್ತಿದ್ದಾರೆ. ಪ್ರತಿ ದಿನ ಹಲವು ಹಳ್ಳಿಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಸ್ಯೆಗಳನ್ನೂ ಆಲಿಸುತ್ತಾರೆ. ಆದರೆ ಚೇತನ್ ಗೆ ತಾವು ರಾಜಕಾರಣಿ ಆಗಬೇಕು ಎಂಬ ಇಂಗಿತ ಇಲ್ಲ. ಈ ಕುರಿತು ಮಾತನಾಡಿದ ಚೇತನ್(chetan) ತಾವು ಎಂಜಿನಿಯರಿಂಗ್ ವಿದ್ಯಾರ್ಥಿ ಆಗಿದ್ದರೂ ಸಹ ಸಾಮಾಜಿಕ ಜಾಲತಾಣದ(social media) ಪ್ರಚಾರದಿಂದ ಏನೂ ಪ್ರಯೋಜನ ಇಲ್ಲ. ಜನರ ಬಳಿ ಹೋಗುವ ಸಾಂಪ್ರದಾಯಿಕ ಶೈಲಿಯೇ ಮತದಾರರನ್ನ ಸೆಳೆಯಲು ಅನುಕೂಲ ಎನ್ನುತ್ತಾರೆ.

ADVERTISEMENT

ಇನ್ನು ಸೊರಬದಲ್ಲಿ ಅಜ್ಜ ಹಾಗೂ ಅಪ್ಪನ ಹಾದಿಯಲ್ಲೇ ಕ್ಷೇತ್ರದ ಜನರ ಪ್ರೀತಿ ಗಳಿಸಲು ಸಫಲರಾಗಿರುವ ಅರ್ಜುನ್ ಬಂಗಾರಪ್ಪ ಕೂಡ ತಂದೆ ಕುಮಾರ್ ಬಂಗಾರಪ್ಪ ಅವರ ಮರು ಆಯ್ಕೆಗಾಗಿ ಹಳ್ಳಿಗಳ್ಳನ್ನ ಸುತ್ತುತ್ತಿದ್ದಾರೆ. ಪ್ರತಿ ದಿನ ಹತ್ತಾರು ಕಿಲೋಮೀಟರ್ ಕ್ರಮಿಸುವ ಅರ್ಜುನ್ ಕ್ಷೇತ್ರದಲ್ಲಿ ಚಿರಪರಿಚಿತ ಮುಖ. ಇಪ್ಪತ್ತೊಂಬತ್ತು ವರ್ಷ ವಯಸ್ಸಿನ ಅರ್ಜುನ್ ಬಂಗಾರಪ್ಪ(arjun bangarappa) ಬೆಂಗಳೂರಿನ ಎಂಎಸ್ ರಾಮಯ್ಯ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಮುಗಿಸಿದ್ದಾರೆ. ತಂದೆ ಒಡೆತನದ ಶ್ರೀ ರೇಣುಕಾಂಬ ಸ್ಟುಡಿಯೋ ಸೇರಿ ಕುಟುಂಬದ ವ್ಯವಹಾರಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಇವೆಲ್ಲದಕ್ಕೂ ಮಿಗಿಲಾಗಿ ಸಿನಿಮಾ ನಟನೆಯ ತರಬೇತಿ ಚೆನೈನಲ್ಲಿ ಪಡೆದಿದ್ದು ಇನ್ನೆರಡು ವರ್ಷಗಳಲ್ಲಿ ಅರ್ಜುನ್ ನಟನಾಗಿ ಕೂಡ ತೆರೆ ಮೇಲೆ ಕಾಣಲಿದ್ದಾರೆ. ತಂದೆ ಕುಮಾರ್ ಬಂಗಾರಪ್ಪ ಕೂಡ 80-90 ದಶಕದಲ್ಲಿ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ಅರ್ಜುನ್ ಕಿರುಚಿತ್ರ ನಿರ್ಮಾಣ ಮಾಡಿದ್ದು, ಚುನಾವಣೆ ಮುಗಿಯುತ್ತಿದ್ದಂತೆ ಚಿತ್ರ ಬಿಡುಗಡೆಯಾಗಲಿದೆ. ಈ ಕುರಿತು ಮಾತನಾಡಿದ ಅರ್ಜುನ್ ಎಂಜಿನಿಯರಿಂಗ್, ರಾಜಕಾರಣ(politics) ಹಾಗೂ ಸಿನಿಮಾ ಮೂರೂ ಕ್ಷೇತ್ರದಲ್ಲಿ ಜವಾಬ್ದಾರಿ ಇದ್ದು ಸಿನಿಮಾದಲ್ಲಿ ಆಸಕ್ತಿ ಹೆಚ್ಚಿದೆ ಎನ್ನುತ್ತಾರೆ. ಸೊರಬ(soraba) ಕ್ಷೇತ್ರ ಹೊಸದೇನಲ್ಲ ಗ್ರಾಮಸ್ಥರ ಖಾಸಗಿ ಕಾರ್ಯಕ್ರಮ ಆಮಂತ್ರಣಕ್ಕೆ ಯಾವಾಗಲೂ ತಪ್ಪಿಸಿಲ್ಲ. ಹಾಗಾಗಿ ಜನರಿಗೆ ತಮ್ಮ ಪರಿಚಯ ಇದೆ ಎನ್ನುತ್ತಾರೆ.ಉಭಯ ಬಿಜೆಪಿ(BJP) ನಾಯಕರ ಪುತ್ರರು ಪಕ್ಷದ ಚೌಕಟ್ಟಿನಲ್ಲೇ ಕೆಲಸ ಮಾಡುತ್ತಿರೋದಾಗಿ, ಜನರ ಪ್ರತಿಕ್ರಿಯೆ ತಮ್ಮ ಪರವಾಗಿ ಇರೋದಾಗಿ ಆತ್ಮವಿಶ್ವಾಸ ಇಟ್ಟುಕೊಂಡಿದ್ದಾರೆ.

Tags: #bjp#campaign#election2023#karnataka#karnatakaassemblyelection#pratidhvani#pratidhvanidigital#pratidhvaninews#shivamogga
Previous Post

ಬೆಂಗಳೂರಿಗಿಂದು ಪ್ರಧಾನಿ ನರೇಂದ್ರ ಮೋದಿ ಭೇಟಿ:  ಅಬ್ಬರದ ಪ್ರಚಾರ ನಡೆಸಲಿರುವ ನಮೋ

Next Post

ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆರಂಭಿಸಿದ  ಗುಜರಾತ್ ಹೈಕೋರ್ಟ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

June 17, 2025
Next Post
ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆರಂಭಿಸಿದ  ಗುಜರಾತ್ ಹೈಕೋರ್ಟ್

ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆರಂಭಿಸಿದ  ಗುಜರಾತ್ ಹೈಕೋರ್ಟ್

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada