• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಸಿಬಿಐ ತನಿಖೆಯಲ್ಲೂ ಬಯಲಾಗಲಿಲ್ಲ ಧರ್ಮಸ್ಥಳದ ಸೌಜನ್ಯ ಕೊಲೆ ಆರೋಪಿ..!!

ಕೃಷ್ಣ ಮಣಿ by ಕೃಷ್ಣ ಮಣಿ
June 17, 2023
in ಅಂಕಣ
0
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣದ ತೀರ್ಪು ಪ್ರಕಟ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ನಾಯಕರ ನಡುವೆ ಆರೋಪ – ಪ್ರತ್ಯಾರೋಪ ವಾಕ್ಸಮರ ಜರುಗಿದಾಗ ಧರ್ಮಸ್ಥಳದ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಪ್ರಮಾಣ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತವೆ. ಧರ್ಮಸ್ಥಳ ಎಂದರೆ ಧರ್ಮ ಸ್ಥಾನ ಎನ್ನುವುದು ಲೋಕರೂಢಿ. ಆದರೆ ಅದೇ ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಓರ್ವ ಅಪ್ರಾಪ್ತ ಬಾಲಕಿಗೆ ನ್ಯಾಯ ಸಿಗಲಿಲ್ವಾ ಅನ್ನೋ ಅನುಮಾನ ಕಾಡುತ್ತಿದೆ. ಜೊತೆಗೆ ಅತ್ಯಾಚಾರ ಮಾಡಿ ಕೊಲೆ ಮಾಡಿದವರು ಯಾರು ಅನ್ನೋ ರಹಸ್ಯ ರಹಸ್ಯವಾಗಿಯೇ ಉಳಿದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ADVERTISEMENT

11 ವರ್ಷಗಳ ಬಳಿಕ ಕೊಲೆ ಕೇಸ್‌ನಲ್ಲಿ ಕೋರ್ಟ್ ತೀರ್ಪು..

ಧರ್ಮಸ್ಥಳದಲ್ಲಿ 2012 ರ ಅಕ್ಟೋಬರ್ 9 ರಂದು 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ಉಜಿರೆಯ SDMC ಕಾಲೇಜಿನಲ್ಲಿ ಓದುತ್ತಿದ್ದ ಸೌಜನ್ಯಳನ್ನು ಅಪಹರಣ ಮಾಡಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಆ ಬಳಿಕ ಮೃತದೇಹ ಪತ್ತೆಯಾಗಿತ್ತು. ಮೃತ ದೇಹ ಸಿಕ್ಕ ಸ್ಥಳದಿಂದ 50 ಮೀಟರ್ ಅಂತರದಲ್ಲಿ ಟೆಂಟ್‌ನಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆ ಬಳಿಕ ತನಿಖೆ ಬಗ್ಗೆ ಅಪಸ್ವರ ಕೇಳಿ ಬಂದಿದ್ದರಿಂದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಇದೀಗ ಬೆಂಗಳೂರು ವಿಶೇಷ ಕೋರ್ಟ್ ತೀರ್ಪು ನೀಡಿದೆ.

ರೇಪ್ ಅಂಡ್ ಮರ್ಡರ್ ಸಾಕ್ಷ್ಯಗಳು ಇಲ್ಲದಕ್ಕೆ ಖುಲಾಸೆ..!

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ತೀರ್ಪು ನೀಡಿ ಬಿಡುಗಡೆ ಮಾಡಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನಲೆ ಆರೋಪಿ ಸಂತೋಷ್ ರಾವ್ ಬಿಡುಗಡೆ ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ ಸಿ.ಬಿ ಆದೇಶ ಮಾಡಿದ್ದಾರೆ. ಆರೋಪಿ ಸಂತೋಷ್ ರಾವ್ ಪರ ವಕೀಲ ಮೋಹಿತ್ ಕುಮಾರ್ ವಾದ ಮಾಡಿಸಿದ್ದರು. ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. 2 ದಿನಗಳ ಬಳಿಕ ಆರೋಪಿ ಬಂಧನ ಮಾಡಲಾಗಿತ್ತು. ಸೌಜನ್ಯ ಮೃತಪಟ್ಟ ಸಮಯದಲ್ಲಿ ಜೋರು ಮಳೆ ಇತ್ತು. ಅದೇ ದಿನ 500 ಜನರು ಹುಡುಕಾಟ ನಡೆಸಿದ್ರು. ಆದರೆ ಯಾರೂ ಕೂಡ ಪತ್ತೆಯಾಗಿರಲಿಲ್ಲ. 50 ಮೀಟರ್ ಅಂತರದಲ್ಲಿ ಟೆಂಟ್‌ನಲ್ಲಿ ವಾಸವಿದ್ದ ಎನ್ನುವ ಕಾರಣಕ್ಕೆ ಪೊಲೀಸರು ಅನುಮಾನ ವ್ಯಕ್ತಪಡಿಸಿ ಬಂಧನ ಮಾಡಿದ್ರು. ಪ್ರಕೃತಿ ಚಿಕಿತ್ಸಾಲಯ ಸಿಸಿಟಿವಿ ಸಂಗ್ರಹಿಸಿಲ್ಲ. ಪೋಸ್ಟ್ ಮಾರ್ಟಂ ರಾತ್ರೋರಾತ್ರಿ ಬ್ಯಾಡ್ ಲೈಟ್‌ನಲ್ಲಿ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ವಾದ ಮಂಡಿಸಿದ್ರು.

ಕೋರ್ಟ್‌ಗೆ ಸಾಕ್ಷ್ಯಗಳಿಲ್ಲ.. ಅತ್ಯಾಚಾರಿ, ಕೊಲೆಪಾತಕ ಅಲ್ಲ.. ಇನ್ಯಾರು..?

ರೇಪ್ ನಡೆದ ಸ್ಥಳದಲ್ಲಿ ಆರೋಪಿ ಇದ್ದ ಅನ್ನೋದಕ್ಕೆ ಸಾಕ್ಷಿಗಳು ಇರದ ಕಾರಣಕ್ಕೆ ದೋಷಮುಕ್ತ ಅಂತ ಕೋರ್ಟ್ ತೀರ್ಪು ನೀಡಿದೆ. ನಿರಪರಾಧಿಗೆ ಶಿಕ್ಷೆ ಆಗಬಾರದು ಅನ್ನೋದು ಸತ್ಯ. ಆದರೆ ಆರೋಪಿ ಅನ್ನೋದಕ್ಕೆ ಸಾಕ್ಷ್ಯಗಳಿಲ್ಲ ಎನ್ನುವುದು ಕೋರ್ಟ್ ತೀರ್ಪಿನ ಸಾರಾಂಶ. ಆದರೆ ಪೊಲೀಸರು, ಸಿಬಿಐ ತನಿಖಾ ತಂಡ ಆರೋಪಿಯನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ. ಇದರ ಜೊತೆಗೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್‌ನಲ್ಲಿ ಬಂಧನ ಆಗಿದ್ದು ಧರ್ಮಸ್ಥಳದಲ್ಲಿ ಕೆಲಸ ಮಾಡುವ ಓರ್ವ ಸಿಬ್ಬಂದಿ ಅನ್ನೋದು ವಿಶೇಷ. ಇನ್ನು ಈ ಕೇಸ್‌ನಲ್ಲಿ ವಕೀಲರು ಉಚಿತ ವಾದ ಮಂಡನೆ ಮಾಡಿದ್ದೇನೆ ಎಂದಿದ್ದಾರೆ. ಕಾರಣ ಏನು ಅನ್ನೋದು ಮಾತ್ರ ಗೊತ್ತಿಲ್ಲ.

ಕೃಷ್ಣಮಣಿ

Tags: BelthangadiCBI Special CourtDharmasthalaDharmasthala SDM CollegeSanthosh Raosoujanya
Previous Post

ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Next Post

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ

Related Posts

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ
Top Story

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

by ನಾ ದಿವಾಕರ
August 27, 2026
0

ನೂರು ತುಂಬಿದ ಭಾರತ ಹೇಗಿರಲಿದೆ ಎಂಬ ಜಿಜ್ಞಾಸೆ ಮತ್ತು ಹೇಗಿರಬೇಕು ಎಂಬ ದೃಢ ನಿರ್ಧಾರ ವರ್ತಮಾನದ ಸಾಮಾಜಿಕ-ರಾಜಕೀಯ ಸಂಕಥನಗಳಲ್ಲಿ ಧ್ವನಿಸಲೇಬೇಕಾದ ಸನ್ನಿವೇಶದಲ್ಲಿ ನಾವಿದ್ದೇವೆ. ಈ ಎರಡೂ ಪ್ರಶ್ನೆಗಳನ್ನು...

Read moreDetails
ಯಶಸ್ಸಿನ ಓಟದಲ್ಲಿ ನೆಮ್ಮದಿ ಕಳೆದುಕೊಳ್ಳುತ್ತಿದೆಯೇ ಇಂದಿನ ಪೀಳಿಗೆ..?

ಯಶಸ್ಸಿನ ಓಟದಲ್ಲಿ ನೆಮ್ಮದಿ ಕಳೆದುಕೊಳ್ಳುತ್ತಿದೆಯೇ ಇಂದಿನ ಪೀಳಿಗೆ..?

August 26, 2026
ಎದೆ ಕಲಕುವ ಭಾವಸ್ಪರ್ಷಾನುಭವ- ಒಥೆಲೊ

ಎದೆ ಕಲಕುವ ಭಾವಸ್ಪರ್ಷಾನುಭವ- ಒಥೆಲೊ

August 25, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -5

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -5

August 23, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
Next Post
ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada