• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಂಸತ್ತು | ಮಣಿಪುರ ವಿಚಾರ ಚರ್ಚೆಗೆ ವಿಪಕ್ಷಗಳ ಪಟ್ಟು, ಸರ್ಕಾರ ಸಮ್ಮತಿ ; ಉಭಯ ಸದನಗಳ ಕಲಾಪ ಮುಂದೂಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
July 31, 2023
in ದೇಶ, ರಾಜಕೀಯ
0
ಸಂಸತ್ತು
Share on WhatsAppShare on FacebookShare on Telegram

ಸಂಸತ್ತು ಮುಂಗಾರು ಅಧಿವೇಶನದಲ್ಲಿ ಸೋಮವಾರ (ಜು.31) ಮಣಿಪುರ ಹಿಂಸಾಚಾರ, ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರ ಸದ್ದು ಮಾಡಿವೆ. ಪ್ರತಿಪಕ್ಷಗಳು ಈ ಬಗ್ಗೆ ಚರ್ಚೆಗೆ ಪಟ್ಟು ಹಿಡಿದಿವೆ. ತೀವ್ರ ಗದ್ದಲದ ನಡುವೆ ಲೋಕಸಭೆ ಹಾಗೂ ರಾಜ್ಯಸಭೆಗಳ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಯಾಗಿದೆ.

ADVERTISEMENT

ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದವು. ಇದರಿಂದ ಲೋಕಸಭೆಯ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆಯಾಗಿದೆ.

ಸಂಸತ್ತು ಉಭಯ ಸದನಗಳ ಕಲಾಪ ಬೆಳಿಗ್ಗೆ 11 ಗಂಟೆಗೆ ಆರಂಭವಾಯಿತು. ಮಲಾವಿ ದೇಶದಿಂದ ಬಂದಿರುವ ಸಂಸದೀಯ ನಿಯೋಗವು ಸದನದ ಕಲಾಪಗಳನ್ನು ವೀಕ್ಷಿಸುತ್ತಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು. ಅವರು ವಿದೇಶಿ ನಿಯೋಗವನ್ನು ಸ್ವಾಗತಿಸಿದರು.

ಸ್ಪೀಕರ್ ತಮ್ಮ ಮಾತು ಮುಗಿಸುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರು ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಕೂಡಲೇ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಂಸತ್ತು ಲೋಕಸಭೆ ಕಲಾಪದಲ್ಲಿ ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಶಿಕ್ಷಣ ಮತ್ತು ಹಣಕಾಸು ಸಚಿವಾಲಯಗಳಿಗೆ ಸಂಬಂಧಿಸಿದ ಎರಡು ಪ್ರಶ್ನೆಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಯಿತು. ಪ್ರತಿಭಟನೆ ಮುಂದುವರಿದಾಗ ಸ್ಪೀಕರ್ ಅವರು ಪ್ರತಿಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಿಗೆ ತೆರಳಿ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಸ್ಪೀಕರ್, ಮೊದಲಿಗೆ 15 ನಿಮಿಷಗಳ ಕಾಲ. ನಂತರ ಮಧ್ಯಾಹ್ನ 2 ಗಂಟೆಗೆ ಕಲಾಪವನ್ನು ಮುಂದೂಡಿದರು.

‘ಮಧ್ಯಾಹ್ನ 2 ಗಂಟೆಗೆ ಮಣಿಪುರ ಹಿಂಸಾಚಾರ ಕುರಿತ ಚರ್ಚೆಗೆ ಸಿದ್ಧ’

ಬೆಳಿಗ್ಗೆ 11 ಗಂಟೆಗೆ ಸಂಸತ್ತು ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಣಿಪುರ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಒತ್ತಾಯಿಸಿದರು. ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಪಕ್ಷಗಳು ಕಳೆದ 10 ದಿನಗಳಲ್ಲಿ ನಿಯಮ 267ರ ಅಡಿಯಲ್ಲಿ ಹಲವು ಬಾರಿ ರಾಜ್ಯಸಭಗೆ ನೋಟಿಸ್ ನೀಡಿವೆ ಎಂದು ಖರ್ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಗ್ನಿ ಅವಘಡ ; 125 ರೋಗಿಗಳ ಸ್ಥಳಾಂತರ

ಮಣಿಪುರದ ಕುರಿತು ಚರ್ಚೆ ನಡೆಸಲು ಸರ್ಕಾರವು ಮಧ್ಯಾಹ್ನ 2 ಗಂಟೆಗೆ ಸಿದ್ಧವಾಗಿದೆ ಎಂದು ರಾಜ್ಯಸಭೆ ಸಭಾಪತಿ ಹೇಳಿದರು. ಇದಕ್ಕೆ ಒಪ್ಪದ ಸದಸ್ಯರು ಕೂಡಲೇ ಚರ್ಚೆಗೆ ಒತ್ತಾಯಿಸಿ ಗದ್ದಲ ನಡೆಸಿದ್ದರಿಂದ ಸದನವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು.

‘”ಮಣಿಪುರದ ಹಿಂಸಾಚಾರ ಕುರಿತು ಇಂದು ಮಧ್ಯಾಹ್ನ 2 ಗಂಟೆಗೆ ಸಂಸತ್ತು ಕಲಾಪದಲ್ಲಿ ಚರ್ಚೆ ಸಬೇಕೆಂದು ನಾವು ಉದ್ದೇಶಿಸಿದ್ದೇವೆ. ಆದರೆ, ವಿರೋಧ ಪಕ್ಷಗಳ ಸದಸ್ಯರು ತಮಗೆ ಇರುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಚರ್ಚೆಗೆ ಸಿದ್ಧವಿದೆ” ಎಂದು ರಾಜ್ಯಸಭೆಯ ಸಭಾನಾಯಕ ಪೀಯೂಷ್ ಗೋಯಲ್ ಹೇಳಿದ್ದಾರೆ.

Tags: IndiaLok SabhaManipurManipur ViolenceMansoon SessionParliamentPM Narendra ModiRajyasabhaಮಣಿಪುರಮಣಿಪುರ ಹಿಂಸಾಚಾರಮುಂಗಾರು ಅಧಿವೇಶನರಾಜ್ಯಸಭೆಲೋಕಸಭೆಸಂಸತ್ತು
Previous Post

ಸುಪ್ರೀಂ ಕೋರ್ಟ್‌ ಕದ ತಟ್ಟಿದ ಮಣಿಪುರ ಬೆತ್ತಲೆ ಪ್ರಕರಣ ; ಇಂದು ವಿಚಾರಣೆ

Next Post

ಮಹಾರಾಷ್ಟ್ರ | ಚಲಿಸುವ ರೈಲಿನ ಮೇಲೆ ಗುಂಡು ಹಾರಿಸಿ ಹಿರಿಯ ಅಧಿಕಾರಿ ಸೇರಿ ನಾಲ್ವರ ಹತ್ಯೆಗೈದ ಆರ್‌ಪಿಎಫ್‌ ಪೇದೆ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಮಹಾರಾಷ್ಟ್ರ

ಮಹಾರಾಷ್ಟ್ರ | ಚಲಿಸುವ ರೈಲಿನ ಮೇಲೆ ಗುಂಡು ಹಾರಿಸಿ ಹಿರಿಯ ಅಧಿಕಾರಿ ಸೇರಿ ನಾಲ್ವರ ಹತ್ಯೆಗೈದ ಆರ್‌ಪಿಎಫ್‌ ಪೇದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada