• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
August 18, 2026
in Top Story, ಕರ್ನಾಟಕ
0
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಕುರಿತ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆರಂಭಿಸಿದೆ.

Advocate S. Balan EXCLUSIVE :ಕೇಸ್‌ನಲ್ಲಿ ಮಾಫಿ ಸಾಕ್ಷಿಯಾದ್ರೆ ಮುಂದೇನು ಗತಿ..! #pratidhvani #darshancase #

ಬಿಎಂಟಿಸಿ ಪ್ರಸ್ತುತ ಬೆಂಗಳೂರಿನಿಂದ ಸುಮಾರು 60 ಕಿ.ಮೀ. ವ್ಯಾಪ್ತಿಯವರೆಗೆ ಪ್ರತಿದಿನ 1,811 ಮಾರ್ಗಗಳಲ್ಲಿ 6,234 ಅನುಸೂಚಿಗಳ ಮೂಲಕ 65,518 ಸುತ್ತುವಳಿಗಳನ್ನು ನಡೆಸುತ್ತಿದ್ದು, ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖ ಆಧಾರವಾಗಿದೆ.

 ಸಂಸ್ಥೆಯಲ್ಲಿ 9,462 ಚಾಲಕರು, 7,969 ಚಾಲಕ-ಕಂ-ನಿರ್ವಾಹಕರು ಸೇರಿದಂತೆ ಒಟ್ಟು 17,431 ಚಾಲನಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ 2,989 ವಿದ್ಯುತ್ ಬಸ್ ಚಾಲಕರು ಸಹ ಸೇವೆ ಸಲ್ಲಿಸುತ್ತಿದ್ದು, ಸುರಕ್ಷಿತ ಹಾಗೂ ಪರಿಣಾಮಕಾರಿ ಸಾರ್ವಜನಿಕ ಸಾರಿಗೆ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆಗಸ್ಟ್‌ 18ರಿಂದ ಪ್ರತೀ ಮಂಗಳವಾರ ಮತ್ತು ಗುರುವಾರ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿಯಲ್ಲಿ ಸುರಕ್ಷಿತ ಚಾಲನೆ, ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತೆ, ಅಪಘಾತ ತಡೆ ಕ್ರಮಗಳು ಹಾಗೂ ಜವಾಬ್ದಾರಿಯುತ ಚಾಲನೆಯ ಬಗ್ಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಲಾಗುತ್ತದೆ.

ಪೊಲೀಸ್ ಇಲಾಖೆಯ ತಜ್ಞ ಅಧಿಕಾರಿಗಳು ಸಂಚಾರ ನಿಯಮಗಳ ಅನುಸರಣೆ, ರಸ್ತೆ ಬಳಕೆದಾರರ ಸುರಕ್ಷತೆ ಮತ್ತು ಅಪಘಾತಗಳಿಗೆ ಕಾರಣವಾಗುವ ಅಂಶಗಳ ಕುರಿತು ಚಾಲನಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.

Advocate Dilip Kumar I S  on actor Darshan   ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ

ಇದೇ ವೇಳೆ ವಡ್ಡರಹಳ್ಳಿ ತರಬೇತಿ ಕೇಂದ್ರದಲ್ಲೂ ಸುರಕ್ಷಿತ ಚಾಲನೆ ಕುರಿತ ನಿಯಮಿತ ತರಬೇತಿ ಮುಂದುವರಿದಿದ್ದು, ವಲಯ ಮಟ್ಟದಲ್ಲಿಯೂ ವಾರಕ್ಕೊಮ್ಮೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಮೂಲಕ ಚಾಲನಾ ಕೌಶಲ್ಯವನ್ನು ಹೆಚ್ಚಿಸುವುದು, ಅಪಘಾತಗಳನ್ನು ಕಡಿಮೆ ಮಾಡುವುದು ಹಾಗೂ ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಅನುಭವ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ.

Session Congress vs BJP : ಖರ್ಗೆ ಭಾಷಣದ ಜಾಗ ಶುದ್ಧೀಕರಣ: ಬಿಜೆಪಿ ನಾಯಕರ ವಿರುದ್ಧ ʼಕೈʼ ಶಾಸಕರು ಆಕ್ರೋಶ..!

“ಸುರಕ್ಷಿತ ಚಾಲನೆ – ಸುರಕ್ಷಿತ ಪ್ರಯಾಣ” ಎಂಬ ಆಶಯದೊಂದಿಗೆ ಚಾಲನಾ ಸಿಬ್ಬಂದಿಯ ತರಬೇತಿ, ಜಾಗೃತಿ ಹಾಗೂ ಮೇಲ್ವಿಚಾರಣೆಗೆ ಬಿಎಂಟಿಸಿ ಹೆಚ್ಚಿನ ಆದ್ಯತೆ ನೀಡಿದ್ದು, ಸಾರ್ವಜನಿಕರ ಸಹಕಾರ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಿಂದ ಅಪಘಾತಮುಕ್ತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಿಸಲು ಸಂಸ್ಥೆ ಬದ್ಧವಾಗಿದೆ.

D. K. Shivakumar : ಸದನದಲ್ಲಿ ಶಾಸಕ ಬೆಲ್ಲದ್‌ಗೆ ಕಾಲೆಳೆದ ಸಿಎಂ ಡಿಕೆಶಿ ಬಿಜೆಪಿ ನಾಯಕರಿಗೆ ನಗುವೇ ನಗು..!
Previous Post

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

Next Post

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

Related Posts

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

by ಪ್ರತಿಧ್ವನಿ
August 18, 2026
0

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

Read moreDetails
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
Next Post
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada