ಮೈಸೂರು: ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ(Ayodhya) ರಾಮಮಂದಿರ(Rama Mandira) ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಮಮಂದಿರ ಉದ್ಘಾಟನೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.
![](https://pratidhvani.com/wp-content/uploads/2024/01/pratap-Simha_new-620x354-1-jpg.webp)
ಈ ನಡುವೆ ಬಾಲರಾಮನ ದರ್ಶನಕ್ಕೆ ಲಕ್ಷಾಂತರ ಪ್ರವಾಸಿಗರು ಅಯೋಧ್ಯೆಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಫೆಬ್ರವರಿ 4ಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಅಯೋಧ್ಯೆಗೆ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಮೈಸೂರಿನಿಂದ ಫೆ 4ರಂದು ಅಯೋಧ್ಯೆಗೆ ಲಕ್ಷಾಂತರ ಮಂದಿ ಭಕ್ತರು ತೆರಳಲಿದ್ದು, ನಾನು ಮತ್ತು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಅನೇಕರು ತೆರಳುತ್ತಿದ್ದೇವೆ. ಮೈಸೂರಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
![](https://pratidhvani.com/wp-content/uploads/2024/01/GDs-qKSaAAA_An5-1024x404.webp)
ಫೆ.4ರಂದು ಮೈಸೂರಿನಿಂದ ಅಯೋಧ್ಯೆಗೆ ಹೊರಡಲಿರುವ ಈ ವಿಶೇಷ ರೈಲು 60.40 ಗಂಟೆಗಳ ಕಾಲ ಸಂಚರಿಸಲಿದ್ದು, ಬರೋಬ್ಬರು 2894 ಕಿ.ಮೀ ದೂರದ ಪ್ರಯಾಣ ಇದಾಗಿದೆ. ಮೈಸೂರಿನಿಂದ ಹೊರಡಲಿರುವ ವಿಶೇಷ ರೈಲು ಅರಸೀಕೆರೆ, ಹೊಸಪೇಟೆ, ವಿಜಯಪುರ, ಸೋಲಾಪುರ, ದೌಂಡ್, ಬಹುಸ್ವಾಲ್, ಇಟಾರಸಿ, ಬಿನಾ, ಜಾನ್ಸಿ, ಪ್ರಯಾಗರಾಜ್ ಮಾರ್ಗವಾಗಿ ಸಂಚರಿಸಲಿದೆ. ಮೈಸೂರಿನಿಂದ ಅಯೋಧ್ಯೆಗೆ ತೆರಳಲಿರುವ ವಿಶೇಷ ರೈಲಿನ ಕುರಿತಂತೆ ಸಂಸದ ಪ್ರತಾಪ್ ಸಿಂಹ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.