• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

“ಶ್ರೀಮಂತ” ಚಿತ್ರದ ಪೋಸ್ಟರ್, ರೈತ ಗೀತೆ ಬಿಡುಗಡೆ

Any Mind by Any Mind
September 29, 2022
in ಸಿನಿಮಾ
0
“ಶ್ರೀಮಂತ” ಚಿತ್ರದ ಪೋಸ್ಟರ್, ರೈತ ಗೀತೆ ಬಿಡುಗಡೆ
Share on WhatsAppShare on FacebookShare on Telegram

ರೈತನ ಕುರಿತಾದ ಬದುಕು, ಬವಣೆಗಳೊಂದಿಗೆ ಹಳ್ಳಿಯ ಸೊಗಡು, ಗ್ರಾಮೀಣ ಕಲೆಗಳು, ಜತೆಗೆ  ಸ್ನೇಹ, ಪ್ರೀತಿ, ಬಾಂಧವ್ಯ ಹೀಗೆ ಎಲ್ಲಾ ಅಂಶಗಳನ್ನು ಬೆಸೆದುಕೊಂಡು ತೆರೆಮೇಲೆ ಬರಲು ಸಿದ್ಧವಾಗುತ್ತಿರುವ ಚಿತ್ರವೇ “ಶ್ರೀಮಂತ”.

ADVERTISEMENT

ಗೋಲ್ಡನ್ ರೈನ್ ಮೂವೀಸ್ ಮೂಲಕ ಜಿ .ನಾರಾಯಣಪ್ಪ ವಿ. ಸಂಜಯ್ ಬಾಬು ಹಾಗೂ ಹಾಸನ್ ರಮೇಶ್ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡಿರುವ ಈ ಚಿತ್ರದ ಪೋಸ್ಟರ್ ಹಾಗೂ ರೈತ ಗೀತೆಯ ಲಿರಿಕಲ್ ವೀಡಿಯೋ ಹಾಡೊಂದನ್ನ  ಬೆಂಗಳೂರಿನ ಕಲಾವಿದರ ಭವನದಲ್ಲಿ ಅದ್ಧೂರಿಯಾಗಿ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಖ್ಯ  ಅತಿಥಿ ನಾದಬ್ರಹ್ಮ ಡಾ. ಹಂಸಲೇಖ ಹಾಗೂ ಯುವ ರೈತ ಮುಖಂಡರಾದ ಸಂತೋಷ್ ಹಾಗೂ ಚಿರಂತ್ ಆಗಮಿಸಿ ಪೋಸ್ಟರ್ ಲಾಂಚ್ ಮಾಡಿದರು.  ಹಾಗೆಯೇ ರೈತನ ಕುರಿತಾದ ಹಾಡು ‘ ಮಳೆ ಮುನಿದರೆ ಸಂತ.. ಜನಪದ ಸಂತ.. ಜನಪದ ಸಂತ… ಎಂಬ  ಹಾಡನ್ನು ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಕಂಠಸಿರಿಯಲ್ಲಿ ಹೊರಬಂದಿದ್ದು, ಇದು ಇವರ ಕೊನೆ ಹಾಡಾಗಿದ್ದು ಈ ಹಾಡನ್ನ ನಾದಬ್ರಹ್ಮ ಹಂಸಲೇಖ ಹಾಗೂ ನಿರ್ಮಾಪಕರಾದ ಜಿ. ನಾರಣಪ್ಪನವರು ಬಿಡುಗಡೆ ಮಾಡಿದರು.

ಇದಕ್ಕೂ ಮುನ್ನ ಈ ಹಾಡಿನ ಬಗ್ಗೆ ಚಿತ್ರೋದ್ಯಮದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ಹಾಡನ್ನು ವೀಕ್ಷಿಸಿ ಮಾತನಾಡಿದ ವಿಡಿಯೋವನ್ನ ಪರದೆ ಮೇಲೆ ಪ್ರದರ್ಶಿಸಲಾಯಿತು.

ರೈತ ಗೀತೆ ಬಿಡುಗಡೆ ಮಾಡಿ ಮಾತನಾಡಿದ ಡಾ. ಹಂಸಲೇಖ, ಈ ಸುಸಂದರ್ಭ ಎಂದೂ ಮರೆಯಲಾಗದ ದಿನ ನನಗೆ. ಈ ರೈತಗೀತೆಯ ಹಾಡು ಬಹಳ ಸೊಗಸಾಗಿ ಬಂದಿದೆ ಹಾಗೂ ಈ ಹಾಡಿನ ಕ್ವಾಲಿಟಿ  ಕೂಡ ಅದ್ಭುತವಾಗಿ ಪರದೆಯ ಮೇಲೆ ಮೂಡಿದೆ ಎಂದರು.

ಈ ಸಭಾಂಗಣಕ್ಕೆ ಬರುತ್ತಿದ್ದಂತೆ ನಾನು ನನ್ನ ದೇವರು ಎಸ್ಪಿಬಿಗೆ ಕೈಮುಗಿದೆ. ಹಾಗೆ ಅಪ್ಪು ಗೂ ನಾನು ಕೈಮುಗಿದೆ… ಅವರು ವಯಸ್ಸಿನಲ್ಲಿ ಚಿಕ್ಕವರಾದರೂ ಅವರ ಸಾಧನೆ ಅಪಾರ.ಅಪ್ಪು ಇಲ್ಲದ ಜಾಗ ಇಲ್ಲವೇ ಇಲ್ಲ. ಯಾಕೆಂದರೆ ಯಾವುದೇ ಶುಭ ಸಮಾರಂಭ ಅಥವಾ ಯಾವುದೇ ಕಾರ್ಯ ಎಲ್ಲೇ ಹೋದರೂ ಅಪ್ಪು ಫೋಟೋ ಇಲ್ಲದ ಜಾಗವಿಲ್ಲ. ಅತಿ ಚಿಕ್ಕ ವಯಸ್ಸಿನಲ್ಲೇ ಇಂಥ ಮಹಾನ್ ಸಾಧನೆ ಮಾಡಿ ಎಲ್ಲರ ಮನಸ್ಸಿನ ಭಗವಂತನಾಗಿದ್ದಾನೆ ಅಪ್ಪು ಎಂದು  ಗುಣಗಾನ ಮಾಡಿದರು.

ಬಹುತೇಕ  ಎಲ್ಲಾ ಭಾಷೆಯಲ್ಲೂ ಹಾಡುವ ಮೂಲಕ  ತಮ್ಮದೇ ಆದ ಅಭಿಮಾನಿ ಬಳಗ, ಪ್ರೀತಿ, ವಿಶ್ವಾಸವನ್ನು ಗಳಿಸಿದ ನನ್ನ ದೇವರು ಹಾಡಿದ ಕೊನೆಯ ಹಾಡು ಈ ರೈತ ಗೀತೆ. ನನ್ನ ಜೀವನದ ಮರೆಯಲಾಗದ ಹಾಡು ಇದಾಗಲಿದೆ. ಎಸ್.ಪಿ.ಬಿ ೫೦ ವರ್ಷಗಳಲ್ಲಿ ಎಲ್ಲಾ ಭಾಷೆಯಲ್ಲಿ ಹಾಡಿದ್ದಾರೆ. ಅಪ್ಪು ಕೂಡ ೪೫ ವರ್ಷದಲ್ಲೇ  ಮನೆ ಮನೆಗೆ ಹೋಗಿದ್ದಾನೆ. ೮೦ ವರ್ಷದ ಕನ್ನಡ ಚಿತ್ರರಂಗವನ್ನು ರೈತ ಸಮುದಾಯ ಕಾಯ್ದಿದೆ. ಇಂದಿನ ಹೀರೋಗಳು ನೀವು ಜನಪದ ಕಥೆ ಇಟ್ಟು ಸಿನಿಮಾ ಮಾಡಿ ಅದರಲ್ಲಿ ರೈತ ಇರತಾನೆ. ನೀವು ಮುಂದಾದರೆ ನಾನು ಕೂಡ ನಿಮ್ಮ ಜೊತೆ ನಿರ್ಮಾಣದಲ್ಲಿ ನಾನು  ಸಾಥ್ ನೀಡುತ್ತೇನೆ ಎಂದು ಅವರು ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಬಾ.ಮಾ. ಹರೀಶ್ ಮಾತನಾಡಿ, ರೈತ ಸಮುದಾಯದ ಬಗ್ಗೆ ಉತ್ತಮ ಚಿತ್ರ ಮಾಡಿದ್ದಾರೆ.  ಹಾಡು ತುಂಬ ಸೊಗಸಾಗಿ ಮೂಡಿಬಂದಿದೆ. ಎಲ್ಲರೂ  ಈ ಚಿತ್ರವನ್ನು ನೋಡಿ ಯಶಸ್ವಿಗೊಳಿಸಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು.

“ಶ್ರೀಮಂತ” ಚಿತ್ರಕ್ಕೆ ಬಾಲಿವುಡ್ ನಟ ಸೋನು ಸೂದ್ ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರದ ನಾಯಕಿಯರಾಗಿ ಮುಂಬೈ ಬೆಡಗಿ ವೈಷ್ಣವಿ ಪಟ್ವರ್ಧನ್ ಹಾಗೂ ವೈಷ್ಣವಿ ಚಂದ್ರನ್ ಮೆನನ್  ಅಭಿನಯಿಸಿದ್ದಾರೆ.

ಇನ್ನು ಉಳಿದಂತೆ ಈ ಚಿತ್ರದಲ್ಲಿ ಹಿರಿಯ ನಟರಾದ ರಮೇಶ್ ಭಟ್, ರವಿಶಂಕರ್ ಗೌಡ, ಸಾಧು ಕೋಕಿಲ, ಚರಣ್ ರಾಜ್, ಕಲ್ಯಾಣಿ, ಗಿರಿ, ರಾಜು ತಾಳಿಕೋಟೆ, ಕುರಿಬಾಂಡ್ ರಂಗ, ಬ್ಯಾಂಕ್ ಮಂಜಣ್ಣ, ಬಸುರಾಜ್ ಹಾಸನ್ ಹಾಗೂ ಮುಂತಾದವರು ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ನಾದಬ್ರಹ್ಮಡಾ. ಹಂಸಲೇಖ ಸಂಗೀತ ಹಾಗೂ ಸಾಹಿತ್ಯ  ನೀಡಿದ್ದು, ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ, ವಿಜಯ್ ಪ್ರಕಾಶ್, ನವೀನ್ ಸಜ್ಜು, ಅಜಯ್ ವಾರಿಯರ್, ರಘು, ಅಂಕಿತಾ ಕುಂಡು, ಅಮ್ರಪಾಲಿ ಮುಂತಾದವರು ಹಾಡಿದ್ದಾರೆ. ರವಿಕುಮಾರ್ ಸನಾ ಹಾಗೂ  ಕೆ .ಎಂ. ವಿಷ್ಣುವರ್ಧನ್ , ಛಾಯಾಗ್ರಹಣ , ಕೆ .ಎಂ. ಪ್ರಕಾಶ್ ಸಂಕಲನ, ಪ್ರೊ. ಅರವಿಂದ ಮಾಲಗತ್ತಿ ಸಾಹಿತ್ಯ,  ಮಾಸ್ ಮಾದ ಸಾಹಸ, ಮದನ್ ಹರಿಣಿ ಹಾಗೂ ಮೋಹನ್ ನೃತ್ಯ, ಪಳನಿ ಸೌಂಡ್ ಇಂಜನಿಯರ್ ಕೆಲಸ ಮಾಡಿರುವಿರುವ ಈ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಹಾಗೂ ನಿರ್ದೇಶನವನ್ನು ಹಾಸನ ರಮೇಶ್ ಮಾಡಿದ್ದಾರೆ.

Previous Post

ನಳೀನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಸತ್ಯ ಹೊರಗೆ ಬರುತ್ತೆ:

Next Post

ಮುಖೇಶ್‌ ಅಂಬಾನಿ ಭದ್ರತೆ Z+ಗೆ ಹೆಚ್ಚಿಸಿದ ಕೇಂದ್ರ

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
Next Post
ದೀಪಾವಳಿಗೆ 5ಜಿ ಸೇವೆ ಆರಂಭ: ರಿಲಾಯನ್ಸ್‌ ಮುಖ್ಯಸ್ಥ ಅಂಬಾನಿ ಘೋಷಣೆ

ಮುಖೇಶ್‌ ಅಂಬಾನಿ ಭದ್ರತೆ Z+ಗೆ ಹೆಚ್ಚಿಸಿದ ಕೇಂದ್ರ

Please login to join discussion

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada