ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾಗಶಃ ಪೂರ್ಣಗೊಂಡಿದೆ . ಈ ಬಾರಿ ಅಭೂತಪೂರ್ವ ಗೆಲುವು ಸಾಧಿಸುತ್ತಿರುವ ಕಾಂಗ್ರೆಸ್ ಸ್ವತಂತ್ರ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿದೆ. ಸ್ಪಷ್ಟ ಬಹುಮತ ಪಡೆಯಲಿರುವ ಕಾಂಗ್ರೆಸ್ ಸರ್ಕಾರ ರಚನೆಯ ಚಟುವಟಿಕೆ ಆರಂಭಿಸಿದೆ.

ಸಚಿವ ಬಿ. ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದಾರೆ. ಬಿಜೆಪಿಯ ಪ್ರಬಲ ನಾಯಕರ ಪೈಕಿ ಒಬ್ಬರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಿ. ನಾಗೇಂದ್ರ ಸಚಿವ ಬಿ. ಶ್ರೀರಾಮುಲುರನ್ನು ಬರೋಬ್ಬರಿ 25 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.