• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಆರಂಭವಾಯಿತು ದುನಿಯಾ ವಿಜಯ್ ಅಭಿನಯದ ನೂತನ ಚಿತ್ರ .

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ಸಿನಿಮಾ
0
ಶ್ರೀವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಆರಂಭವಾಯಿತು ದುನಿಯಾ ವಿಜಯ್ ಅಭಿನಯದ ನೂತನ ಚಿತ್ರ .
Share on WhatsAppShare on FacebookShare on Telegram

ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ .

ADVERTISEMENT

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. “ಜಂಟಲ್ ಮ್ಯಾನ್”, ” ಗುರುಶಿಷ್ಯರು” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ “ವಿ ಕೆ 29” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶಾಸಕ ಶ್ರೀ ಗೋಪಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. “ಡೇರ್ ಡೆವಿಲ್ ಮುಸ್ತಫಾ” ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ರಿತನ್ಯ ಎಂದು ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್, ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಾಯಕ ದುನಿಯಾ ವಿಜಯ್.

ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ ಎಂದರು ರಿತನ್ಯ(ಮೋನಿಕಾ).

“ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.

ಸಹ ನಿರ್ಮಾಪಕ ಸೂರಜ್ ಗೌಡ, ನಟ ಶಿಶಿರ, ಛಾಯಾಗ್ರಾಹಕ ಸ್ವಾಮಿ ಗೌಡ, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ನೂತನ ಚಿತ್ರದ ಕುರಿತು ಮಾತನಾಡಿದರು. “ಭೀಮ” ಚಿತ್ರದ ನಿರ್ಮಾಪಕರ ಕೃಷ್ಣ ಸಾರ್ಥಕ್ ಶುಭ ಹಾರೈಸಿದರು.

Tags: @kANNADAMOVIESದುನಿಯಾ ವಿಜಯ್ಶ್ರೀವೀರಾಂಜನೇಯಸ್ವಾಮಿ
Previous Post

ಚುನಾವಣೆ ಖರ್ಚಿಗೆ 50 ಲಕ್ಷ ಡಿಮ್ಯಾಂಡ್ ಇಟ್ರಾ ಆ ಪ್ರಭಾವಿ ಸಚಿವ ? ಸ್ಫೋಟಕ ಆರೋಪ ಮಾಡಿದ ಯತ್ನಾಳ್ ! 

Next Post

ಸಿಎಂ & ಡಿಸಿಎಂ ಪ್ರತಿಷ್ಟೆ ಈ ಮೂರು ಕ್ಷೇತ್ರಗಳಲ್ಲಿ ಅಡಗಿದೆ ! ಮೈಸೂರು – ಬೆಂಗಳೂರು – ಬೆಂ.ಗ್ರಾಮಾಂತಾರ ಅಗ್ನಿ ಪರೀಕ್ಷೆ ?!

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಸಿಎಂ & ಡಿಸಿಎಂ ಪ್ರತಿಷ್ಟೆ ಈ ಮೂರು ಕ್ಷೇತ್ರಗಳಲ್ಲಿ ಅಡಗಿದೆ ! ಮೈಸೂರು – ಬೆಂಗಳೂರು – ಬೆಂ.ಗ್ರಾಮಾಂತಾರ ಅಗ್ನಿ ಪರೀಕ್ಷೆ ?!

ಸಿಎಂ & ಡಿಸಿಎಂ ಪ್ರತಿಷ್ಟೆ ಈ ಮೂರು ಕ್ಷೇತ್ರಗಳಲ್ಲಿ ಅಡಗಿದೆ ! ಮೈಸೂರು - ಬೆಂಗಳೂರು - ಬೆಂ.ಗ್ರಾಮಾಂತಾರ ಅಗ್ನಿ ಪರೀಕ್ಷೆ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada