ಹತ್ತನೇ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಉತ್ತೀರ್ಣಗೊಳಿಸಬೇಕೆಂದು ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
CBSE ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವುದನ್ನು ಉಲ್ಲೇಖಿಸಿರುವ ನಾಗರಾಜ್, ಕರೋನಾ ಸೋಂಕು ಇರುವುದರಿಂದ ಕೇಂದ್ರ ಸರ್ಕಾರ ಮಕ್ಕಳ ಆರೋಗ್ಯ, ಪ್ರಾಣ ಮುಖ್ಯವೆಂದು ಹತ್ತನೇ, ಹನ್ನೆರಡನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ರಾಜ್ಯ ಸರ್ಕಾರವೂ ಪರೀಕ್ಷೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಕುರಿತು ಸರ್ಕಾರದ ಗಮನ ಸೆಳೆಯುವ ಸಲುವಾಗಿ ಇಂದು ವಿಧಾನಸೌಧದ ಬಳಿ ಇರುವ ದೇವರಾಜ ಅರಸು ಅವರ ಪ್ರತಿಮೆ ಬಳಿ ವಾಟಾಳ್ ನಾಗರಾಜ್ ಏಕಾಂಗಿಯಾಗಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.