• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ರಾಜ್ಯ ಬಜೆಟ್​​ ಅಧಿವೇಶನ.. ವಿಪಕ್ಷಗಳ ಅಸ್ತ್ರ.. ಸರ್ಕಾರದ ಪ್ರತ್ಯಾಸ್ತ್ರ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
March 3, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಇಂದಿನಿಂದ ರಾಜ್ಯ ಬಜೆಟ್​​ ಅಧಿವೇಶನ.. ವಿಪಕ್ಷಗಳ ಅಸ್ತ್ರ.. ಸರ್ಕಾರದ ಪ್ರತ್ಯಾಸ್ತ್ರ ಏನು..?
Share on WhatsAppShare on FacebookShare on Telegram

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್​ ಅಧಿವೇಶನ ಆರಂಭ ಆಗಲಿದೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ನಾಳೆಯಿಂದ ರಾಜ್ಯಪಾಲರ ಭಾಷಣದ ಮೇಲೆ ವಿಸ್ತೃತ ಚರ್ಚೆಗಳು ನಡೆಯಲಿವೆ. ರಾಜ್ಯಪಾಲರ ಭಾಷಣದಲ್ಲೇ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಮೂಲಕ ಬಿಜೆಪಿಯನ್ನು ಕೆರಳಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎನ್ನಲಾಗಿದೆ.

ADVERTISEMENT

ಇನ್ನು ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಜಾರಿ ಮಾಡಿದ ಗ್ಯಾರಂಟಿಗಳ ಬಗ್ಗೆ ತೀವ್ರವಾಗಿ ಟೀಕಿಸಿ, ನಂತರ ದೆಹಲಿ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸ್ವತಃ ಬಿಜೆಪಿ ನಾಯಕರೇ ಗ್ಯಾರಂಟಿ ಘೋಷಣೆ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್​ ಸರ್ಕಾರ ರಾಜ್ಯಪಾಲರ ಮೂಲಕ ಹೇಳಿಸಿ ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಮಂಗಳವಾರ, ಬುಧವಾರ ಹಾಗೂ ಗುರುವಾರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಅಧಿವೇಶನದಲ್ಲಿ ಇತ್ತೀಚೆಗೆ ನಡೆದ ಮೈಸೂರಿನ ಉದಯಗಿರಿ ಗಲಭೆ, ಹಾಡಹಗಲೇ ಬೀದರ್​ನಲ್ಲಿ ಹಾಗು ಮಂಗಳೂರಿನಲ್ಲಿ ನಡೆದ ಬ್ಯಾಂಕ್​ ದರೋಡೆ, ಕೆಪಿಎಸ್​​​​ಸಿ ಸರಣಿ ಅಕ್ರಮಗಳು, ಬಾಣಂತಿಯರ ಸರಣಿ ಸಾವು ವರದಿ, ಬಸ್ಸು, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್‌, ನೀರು, ಹಾಲಿನ ದರ ಏರಿಕೆಗೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್‌ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಬೆಂಗಳೂರು ನಗರದ ಸಮಸ್ಯೆಗಳನ್ನೇ ಮುಖ್ಯ ಅಸ್ತ್ರವಾಗಿಸಿ ಹೋರಾಟ ಮಾಡಲು ಸಿದ್ಧತೆ ನಡೆಸಿವೆ.

ವಿರೋಧ ಪಕ್ಷಗಳಿಗೆ ಠಕ್ಕರ್ ಕೊಡಲು ಆಡಳಿತ ಪಕ್ಷ ಕೂಡ ಸಜ್ಜಾಗಿದ್ದು, ಕೋವಿಡ್ ಅಕ್ರಮದ ಬಗ್ಗೆ ತನಿಖೆ ಮಾಡಿ ನ್ಯಾ. ಕುನ್ಹಾ ನೀಡಿರುವ ವರದಿ, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಭೂ ಅಕ್ರಮ ಹಾಗೂ ಗಣಿ ಹಂಚಿಕೆ ಕೇಸ್​, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಧೋರಣೆ ಹಾಗೂ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ. ತೆರಿಗೆ ಪಾಲು ಕಡಿತ ಮಾಡಿರುವ ವಿಚಾರ ಸೇರಿದಂತೆ ಸಾಕಷ್ಟು ಅಸ್ತ್ರಗಳನ್ನು ಬತ್ತಳಿಕೆಯಲ್ಲಿ ಇಟ್ಟುಕೊಂಡೇ ರಣಾಂಗಣಕ್ಕೆ ಇಳಿಯುತ್ತಿದೆ.

Tags: BJPbudgetBudget sessionbudget session 2023budget session in parliamentbudget session in parliament latest news updatesbudget session latest news updatesbudget session of parliamentCongress Partyparliament budget sessionparliament budget session latest news updatespresident ram nath kovind address parliament budget sessionunion budget 2022 latest news updatesunion budget 2022-23 latest news updatesಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ವಿಚಾರ; ಆ ಕೆಲಸ ಮಾಡಲು ಬೇರೆ ಜನ ಇದ್ದಾರೆ ಎಂದು ಕುಟುಕಿದ HD ಕುಮಾರಸ್ವಾಮಿ

Next Post

ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ - ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada