• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
June 19, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Share on WhatsAppShare on FacebookShare on Telegram

-3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋಗೆ ಚಾಲನೆ

ADVERTISEMENT

ಬೆಂಗಳೂರು, ಜೂನ್ 19, 2025: ಸುಸ್ಥಿರ ಇಂಧನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕವು ವಿಶ್ವದ ಗಮನ ಸೆಳೆದಿದೆ. ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದು, ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಹೊಂದಿದೆ ಎಂದು ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ’ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ಪೋ-2025’ರ ಐದನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯದಲ್ಲಿ ಸುಸ್ಥಿರ ಇಂಧನ ನೀತಿ ಇರುವುದರಿಂದಲೇ ನಮ್ಮ ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಇದೆ,” ಎಂದರು.

Nikhil Kumaraswamy: ಕೇತಗಾನಹಳ್ಳಿ‌ ಜಮೀನು ಒತ್ತುವರಿ ಆರೋಪ ಕುಮಾರಸ್ವಾಮಿಗೆ ರಿಲೀಫ್ ನಿಖಿಲ್ ಏನಂದ್ರು?

“ನವೀಕರಿಸಬಹುದಾದ ಇಂಧನ ನೀತಿ 2022-27 ಸ್ಪಷ್ಟ ಗುರಿಯನ್ನು ನಮ್ಮ ಮುಂದಿರಿಸಿದೆ. ನಮ್ಮ ನೀತಿ ಸಂಶೋಧನೆ, ಬಂಡವಾಳ ಹೂಡಿಕೆ ಮತ್ತು ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ಒಳಗೊಂಡಿರುವುದು ವಿಶೇಷ. ಇತ್ತಿಚೆಗೆ ಯಶಸ್ವಿಯಾಗಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ನವೀಕರಿಸಬಹುದಾದದ ಇಂಧನ ವಲಯದಲ್ಲಿ 4 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಿರುವುದು ನಮ್ಮ ಸುಸ್ಥಿರ ಇಂಧನ ನೀತಿಯ ಫಲ,” ಎಂದು ತಿಳಿಸಿದರು.

“ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸಾರಥಿಯಾಗಿ ಮುನ್ನಡೆಯುತ್ತಿದೆ. ನಮ್ಮ ನವೀಕರಿಸಬಹುದಾದದ ಇಂಧನ ನೀತಿಯು ಹಸಿರು ಇಂಧನ ಕ್ಷೇತ್ರದ ಸಾಮರ್ಥ್ಯ ವೃದ್ದಿ, ಸಂಶೋಧನೆ ಹಾಗೂ‌ ಪರಿಸರ ವ್ಯವಸ್ಥೆಗೆ ಪೂರಕವಾಗಿದ್ದು, ದೇಶಕ್ಕೆ ಮಾದರಿಯಾಗಿದೆ,” ಎಂದು ತಿಳಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಸಮರ್ಥ ಮಾರ್ಗದರ್ಶನದಲ್ಲಿ ಕ್ರೆಡಲ್ ಅತ್ಯುತ್ತಮ ಸಾಧನೆ ಮಾಡಿದೆ. ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ,”ಎಂದರು.

“ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಹಿಂದೆ ಇಂಧನ ಸಚಿವರಾಗಿದ್ದಾಗ, ಪಾವಗಡ ಸೋಲಾರ್‌ ಪಾರ್ಕ್‌ ಮಾಡಿದ್ದು ಇತಿಹಾಸ. ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆ ಪಡೆದಿತ್ತು. ಈಗ ಈ ಸೋಲಾರ್ ಪಾರ್ಕ್‌ನ ವಿಸ್ತರಣೆ ಕಾರ್ಯ ನಮ್ಮ ಮುಂದಿದ್ದು, ಮತ್ತೆ ನಾವು ಮೊದಲ ಸ್ಥಾನಕ್ಕೆ ಏರುವ ಭರವಸೆ ನನಗಿದೆ,” ಎಂದರು.

Labour Minister Santhosh Lad: ಆಶಾದೀಪ ಯೋಜನೆ ಜಾರಿಗೆ ತಂದ ಸಚಿವ ಸಂತೋಷ್‌ ಲಾಡ್..!‌ #AshaDeepaYojane

3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋವನ್ನು ರಾಮಕೃಷ್ಣ ಆಶ್ರಮದ ವೀರೇಶಾನಂದ ಶ್ರೀಗಳು, ಪರಮಾನಂದ ಶ್ರೀಗಳು ಉದ್ಘಾಟಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘದ ಸುರೇಂದ್ರ ಕುಮಾರ್, ಪ್ರೈಮ್ ಎನರ್ಜಿಯ ಉದ್ಯಮಿ ರಮೇಶ್ ಶಿವಣ್ಣ ಹಾಗೂ ಜೆಟ್ರೋ ಕಂಪನಿಯ ಜಪಾನ್ ಪ್ರತಿನಿಧಿ ತೊಷಿರೋ ಮಿಜುತಾನಿ ಉಪಸ್ಥಿತರಿದ್ದರು.

ಎಕ್ಸ್‌ಪೋದಲ್ಲಿ ಸೋಲಾರ್ ವಿದ್ಯುತ್, ಗ್ರಿಡ್ ಉನ್ನತೀಕರಣ, ಹಸಿರು ಇಂಧನ ಅಳವಡಿಕೆ ಸಂಬಂಧಿಸಿದಂತೆ ವಿಚಾರಗೊಷ್ಠಿಗಳು ನಡೆಯಲಿವೆ.

Tags: best jobs for the futurebest jobs for the future 2030clean energyfossil fuels and alternative sources of energyfossil fuels vs renewable energyfuture careershow to ask for the job in a sales interviewhow to ask for the job in a thank you letterRenewable Energytop 10 best careers for the futuretop 10 best jobs for the futuretop 10 emerging jobs for the futuretop 10 jobs for the futurewhat are the best jobs for the future
Previous Post

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Related Posts

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಸುನೀಗಿರುವುದಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ,...

Read moreDetails
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
Next Post
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada