ಬೆಂಗಳೂರು: ವರನಟ ಡಾ. ರಾಜಕುಮಾರ್ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿರೋ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶಿವಕುಮಾರ್ ಹಾಗೂ ಮತ್ತಿತರರು ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಪುನೀತ್ ಕೆರೆಹಳ್ಳಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ್ದ ಪುನೀತ್ ಕೆರೆಹಳ್ಳಿ, ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದ ಎನ್ನಲಾಗಿತ್ತು. ಹೀಗಾಗಿ ಈ ಬಗ್ಗೆ ಕ್ಷಮೆ ಕೇಳುವಂತೆ ಶಿವಕುಮಾರ್ ಹಾಗೂ ಅವರ ತಂಡದ ಸದಸ್ಯರು ಪುನೀತ್ ಕೆರೆಹಳ್ಳಿಗೆ ಒತ್ತಾಯಿಸಿದ್ದರು.
ಆದರೆ ಇದಕ್ಕೆ ಒಪ್ಪದ ಪುನೀತ್, ನಾನ್ಯಾಕೆ ಕ್ಷಮೆ ಕೇಳ್ಬೇಕು ಎಂದು ವಾದ ಮಾಡಿದ್ದು, ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದ ಸಂದರ್ಭದಲ್ಲಿ ಶಿವಕುಮಾರ್ ಮತ್ತು ತಂಡದವರು ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಾಮರಾಜಪೇಟೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ಚಾಮರಾ






