ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜ್ (Chhatrapati Shivaji Maharaj) ಜಯಂತಿ ಅಂಗವಾಗಿ ನಡೆದ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯಲ್ಲಿ ವರದಿಯಾಗಿದೆ.

ನಗರದ ಹಳೇ ನಗರದ ಪಂಕಾ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ ಗೋಯಲ್ ಅವರ ಮೇಲೂ ಕಲ್ಲು ಬಿದ್ದಿದೆ. ಕಲ್ಲು ಕುತ್ತಿಗೆ ಭಾಗಕ್ಕೆ ಗಾಯವಾಗಿದ್ದು,ಅವರ ಯೂನಿಫಾರ್ಮ್ ಮೇಲೆ ರಕ್ತದ ಕಲೆ ಕಂಡು ಬಂದಿದೆ. ಅದೃಷ್ಟವಶಾತ್ ಅವರು ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.







