• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಸ್​ವೈ ಮನೆ ಮೇಲೆ ಕಲ್ಲು ತೂರಾಟ ; ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು : ಸಿಎಂ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
March 27, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಎಸ್​ವೈ ಮನೆ ಮೇಲೆ ಕಲ್ಲು ತೂರಾಟ ; ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು : ಸಿಎಂ ಮನವಿ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ : ಮಾ.27: ಒಳ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಸಮುದಾಯದವರು ಪ್ರತಿಭಟಿಸುತ್ತಿದ್ದ ವೇಳೆ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಈ ವೇಳೆ ಮಾತನಾಡಿದ ಅವರು, ಬಂಜಾರ ಸಮುದಾಯದ ಮುಖಂಡರಲ್ಲಿ ನಾನು ವಿನಂತಿ ಮಾಡುತ್ತೇನೆ. ಮೊದಲನೆಯದಾಗಿ ಸದಾಶಿವ ಆಯೋಗದ ಶಿಫಾರಸು ವರದಿಯನ್ನು ನಾವು ಜಾರಿ ಮಾಡಿಲ್ಲ. ಎಸ್​ಸಿ ಲಿಸ್ಟ್ ಇಂದು ತೆಗೆಯುತ್ತಾರೆ ಎಂಬ ಆತಂಕ ಇದೆ. ನಾನೇ ಸ್ವಂತ ಆದೇಶ ಮಾಡಿ ಬೋವಿ, ಲಂಬಾಣಿ, ಕೊರಮ, ಕೊರಚ, ಎಲ್ಲ ಕೂಡ ಎಸ್​ಸಿ ಲಿಸ್ಟ್​ನಲ್ಲಿ ಇರುತ್ತವೆ. ಯಾವುದೇ ಕಾರಣಕ್ಕೂ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಆದೇಶ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಮೂರು ಪರ್ಸೆಂಟ್ ಬದಲು ನಾಲ್ಕೂವರೆ ಪರ್ಸೆಂಟ್ ಕೊಟ್ಟಿದ್ದೇವೆ. ಮತ್ತು ಮುಂದೆ ಸದಾಶಿವ ಆಯೋಗದ ಕೆಲಸ ಇಲ್ಲ ಅಂತ ನಾವು ತೀರ್ಮಾನ ಸಹ ಮಾಡಿದ್ದೇವೆ ಎಂದರು.

ಅವರ ಬೇಡಿಕೆ ಪ್ರಕಾರ ಮಾಡಿದ್ದೇವೆ. ಯಾವುದೇ ಗೊಂದಲ ಇಲ್ಲ, ಸಮುದಾಯದ ಹಿತರಕ್ಷಣೆ ಮಾಡಿದ್ದೇವೆ. 2 ಲಕ್ಷದ ಹಕ್ಕು ಪತ್ರಗಳನ್ನ ಲಂಬಾಣಿ ತಾಂಡಾದ ಜನರಿಗೆ ಕೊಟ್ಟಾಗಿದೆ. ನಿಮ್ಮ ಪರವಾಗಿ ಬಿಜೆಪಿ ಸರ್ಕಾರ ಇದೆ. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದವರು ಯಡಿಯೂರಪ್ಪನವರು. ಆ ಭಾಗದ ಎಲ್ಲಾ ತಾಂಡಾಗಳಿಗೆ ಮೂಲಭೂತ ಸೌಲಭ್ಯಗಳನ್ನು ಕೊಟ್ಟವರು ಬಿಎಸ್​ವೈ. ಹಿಂಸೆಗೆ ಅವಕಾಶ ಇಲ್ಲ. ಏನೇ ವಿಷಯ ಇದ್ರೂ ಕುಳಿತು ಬಗೆಹರಿಸೋಣ ಎಂದು ಸಿಎಂ ಹೇಳಿದರು.

ಕಾಂಗ್ರೆಸ್​​ನವರ ಕೃತ್ಯವನ್ನು ನಾನು ಖಂಡಿಸುತ್ತೇನೆ : ಸಿಎಂ ಬೊಮ್ಮಾಯಿ: ಎರಡನೇದಾಗಿ ಇದರಲ್ಲಿ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಆರೋಪಿಸಿದ ಸಿಎಂ, ಸಾಮಾಜಿಕ ನ್ಯಾಯ ನೀಡಿದ ಮೇಲೆ ತಡೆದುಕೊಳ್ಳಲು ಆಗದೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು. ಬಂಜಾರ ಸಮುದಾಯದ ರಕ್ಷಣೆ ಮೊದಲಿಂದಲೂ ಬಿಜೆಪಿ ಮಾಡಿದೆ. ಮುಂದೆಯೂ ಮಾಡುತ್ತದೆ. ತಪ್ಪು ದಾರಿಗೆ ಎಳೆಯುವ ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು. ಇಂತಹ ಕಾಂಗ್ರೆಸ್​​ನವರ ಕೃತ್ಯವನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಅವರು ಕ್ಷಮೆಗೆ ಅರ್ಹರಲ್ಲ. ರಾಷ್ಟ್ರೀಯ ಪಕ್ಷ ಮಾಡುತ್ತಿರುವುದು ಅತ್ಯಂತ ಸಣ್ಣ ಕೆಲಸ. ಈಗ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲಾ ಹೇಳಬೇಕು. ಜನರ ಮಧ್ಯೆ ಜಗಳ ಹಚ್ಚೋ ಶಕುನಿ ಯಾರು ಅಂತ. ಯಾರಾದ್ರೂ ಇದ್ರೆ ಅದು ಕಾಂಗ್ರೆಸ್ ಪಕ್ಷ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.ಬಿಎಸ್​ವೈ ಮನೆ ಮೇಲೆ ಕಲ್ಲು ತೂರಾಟ : ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಇಂದು ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಕೆಲ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ

Tags: BJPbjpkarnatkabsbommaiBSYBSYHOMEcmbommaiCongress PartylatetsnewsShikaripuraShivamoggaSTONPELTಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ..!

Next Post

ಅಂಬರೀಶ್ ಅವರು ಸಹಜವಾಗಿ ಬದುಕು ನಡೆಸಿದರು ; ಸಿಎಂ ಬೊಮ್ಮಾಯಿ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಅಂಬರೀಶ್ ಅವರು ಸಹಜವಾಗಿ ಬದುಕು ನಡೆಸಿದರು ; ಸಿಎಂ ಬೊಮ್ಮಾಯಿ

ಅಂಬರೀಶ್ ಅವರು ಸಹಜವಾಗಿ ಬದುಕು ನಡೆಸಿದರು ; ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada