• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮರಾಠ ಮೀಸಲಾತಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ: 300 ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ದೇಶ
0
ಮರಾಠ ಮೀಸಲಾತಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ: 300 ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ
Share on WhatsAppShare on FacebookShare on Telegram

  ಮರಾಠ ಮೀಸಲಾತಿಗಾಗಿ ಆಗ್ರಹಿಸಿ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆಯುತ್ತಿದ್ದ ಸತ್ಯಾಗ್ರಹ ಹಿಂಸಾಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ADVERTISEMENT

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮನೋಜ್ ಜಾರಂಗೆ ನೇತೃತ್ವದಲ್ಲಿ ಜಲ್ನಾದ ಅಂತರವಾಲಿ ಸಾರಥಿ ಎಂಬ ಗ್ರಾಮದಲ್ಲಿ ಮಂಗಳವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು. ವೈದ್ಯರ ಸಲಹೆ ಮೇರೆಗೆ ಜಾರಂಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಪ್ರಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಘರ್ಷಣೆಗೆ ಇಳಿದಿದ್ದಾರೆ.

ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ. ಕೆಲವರು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ಸಂಘರ್ಷದಲ್ಲಿ ಕರ್ನಾಟಕದ ಕೆಸ್‌ಆರ್‌ಟಿಸಿ ಬಸ್‌ ಗೆ ಬೆಂಕಿ ಹಚ್ಚಲಾಗಿದೆ.

The BJP led Maharashtra govt police brutally attacks on Maratha community people at Ambhat Jalna who were demanding reservations for community. Several protestors are badly injured. Opposition condemned the attack saying police unnecessarily used force to disperse protestors. pic.twitter.com/8jYhfwUGbA

— Sudhir Suryawanshi (@ss_suryawanshi) September 1, 2023

ಹಿಂಸಾಚಾರವನ್ನು ನಿಗ್ರಹಿಸಲು ಹಾಗೂ ಗಲಭೆಕೋರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಆಶ್ರುವಾಯು ಸಿಡಿಸಿದ್ದಾರೆ.

ಗಾಳಿಯಲ್ಲಿ ಕೆಲವು ಸುತ್ತು ಗುಂಡುಗಳನ್ನೂ ಹಾರಿಸಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದರಾದರೂ, ಅಧಿಕಾರಿಗಳು ಈ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು ನೀಡಿಲ್ಲ.

Massive violence reported yesterday during #MarathaReservation protest in #Jalna, Maharashtra!

Rioters indulged in stone-pelting & arson injuring 42 police personnel, including 2 SPs.

Call themselves warrior class, are most dominant politically, still want reservation as OBC 🤦 pic.twitter.com/rnjAaGZSAU

— NK (Modi ka Parivar) 🇮🇳 (@nirmal_indian) September 2, 2023

ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮನವಿ ಮಾಡಿದ್ದು, ಹಿಂಸಾಚಾರದ ಬಗ್ಗೆ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ. ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧ, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಅವರು ಹೇಳಿದ್ದಾರೆ.

ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಿರುವುದನ್ನು ಪ್ರತಿಪಕ್ಷಗಳು ಖಂಡಿಸಿವೆ.

https://twitter.com/HateDetectors/status/1697661956541550614
Tags: AblazeJalnaMaharashtraMaharashtra ViolenceMaratha QuotaprotestStones Peltedvehiclesviolence
Previous Post

ಮಧ್ಯಪ್ರದೇಶ | ಪತ್ನಿಯೊಂದಿನ ಕಲಹದಲ್ಲಿ ಮಧ್ಯಪ್ರವೇಶಿಸಿದ ಅಣ್ಣನನ್ನು ಗುಂಡಿಕ್ಕಿ ಕೊಂದ ಮಾಜಿ ಸೈನಿಕ

Next Post

ಬರಗಾಲ ಘೋಷಣೆ ಬಗ್ಗೆ ಸೆ.4 ರಂದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ
Top Story

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

by ಪ್ರತಿಧ್ವನಿ
August 22, 2026
0

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್‌ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails
ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

August 22, 2026
ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

August 22, 2026
₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

August 22, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಗಾಲ ಘೋಷಣೆ ಬಗ್ಗೆ ಸೆ.4 ರಂದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada