• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
September 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಮ್ಮ ರಕ್ತದಾಹ ನಿಲ್ಲಿಸಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹರಿಹಾಯ್ದರು.

ADVERTISEMENT

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.

ಧರ್ಮಸ್ಥಳಕ್ಕೆ ಬಿಜೆಪಿಯವರು ಭೇಟಿ ಜೊತೆಗೆ ಸೌಜನ್ಯ ಅವರ ಮನೆಗೂ ಭೇಟಿ ನೀಡಿದ ಬಗ್ಗೆ ಕೇಳಿದಾಗ, “ಯಾತ್ರೆಯಲ್ಲಿ ಅಲ್ಲಿನ ಜನಪ್ರತಿನಿಧಿಗಳೂ ಸಹ ಶ್ರೀಕ್ಷೇತ್ರವನ್ನು ಒಪ್ಪಿ ಮಾತನಾಡಿಲ್ಲ. ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ. ಇದು ಕ್ಷೇತ್ರದ ಮೇಲೆ ಇರುವ ಗೌರವದಿಂದ ಮಾಡಿರುವ ಯಾತ್ರೆಯಲ್ಲ” ಎಂದರು.

“ಬಿಜೆಪಿ- ಜೆಡಿಎಸ್ ಅವರು ಏತಕ್ಕೆ ಯಾತ್ರೆ ಮಾಡಿದ್ದಾರೆ. ಯಾರಿಗೆ ಸಾಂತ್ವನ ಹೇಳಲು ಯಾತ್ರೆಗೆ ಹೋಗಿದ್ದಾರೆ ಎಂದು ಪ್ರಶ್ನೆಸಿದ ಸುರೇಶ್ ಅವರು, ಬಿಜೆಪಿಯವರ ರಾಜಕೀಯ ಬೇಳೆ ಅಲ್ಲಿ ಬೇಯುವುದಿಲ್ಲ. ಏಕೆಂದರೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಬಿಜೆಪಿಗರ ರಾಜಕೀಯ ಒಳ ಒಪ್ಪಂದಗಳನ್ನು ಅರಿತಿದ್ದಾರೆ” ಎಂದರು.

“ಈ ಹಿಂದೆಯೂ ಸೌಜನ್ಯ ಅವರ ಮನೆಗೆ ತೆರಳಿ ಸಾಂತ್ವನವೆಂಬ ನಾಟಕವಾಡಿ ಯಾವ ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವುದು ದಾಖಲೆಗಳಲ್ಲಿದೆ. ಈಗಲೂ ಸಹ ಇದೇ ರೀತಿಯ ವ್ಯವಸ್ಥೆ ರೂಪಿಸಿ ಜನರನ್ನು ಮರುಳು ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ರಾಜಕೀಯ ಮಾಡುವವರಿಗೆ ನಾಚಿಕೆಯಾಗಬೇಕು

“ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ. ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವವರಿಗೆ ನಾಚಿಕೆಯಾಗಬೇಕು. ಸೌಜನ್ಯ ಪ್ರಕರಣ ಸೇರಿದಂತೆ ಅನೇಕ ಆರೋಪಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುಂಚಿತವಾಗಿಯೂ ನಡೆದಿತ್ತು. ಈ ಆರೋಪಗಳು ಬಂದಂತಹ ಸಂದರ್ಭದಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಯಾವುದೇ ರೀತಿಯ ಹೇಳಿಕೆ ನೀಡಿದ ಉದಾಹರಣೆಗಳು ಎಲ್ಲಿಯೂ ಇಲ್ಲ” ಎಂದರು.

“ನಿಷ್ಪಕ್ಷವಾಗಿ ಎಸ್ ಐಟಿ ತನಿಖೆ ನಡೆದ ನಂತರ ಏಕಾಏಕಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ, ಈ ಕ್ಷೇತ್ರದ ಪರವಾಗಿ ನಾವಿದ್ದೇವೆ ಎಂದು ಅವರು ಹೇಳಿದ ನಂತರ, ಬಿಜೆಪಿ ಹಾಗೂ ಜೆಡಿಎಸ್ ನವರು ಈ ತರಾತುರಿಯಲ್ಲಿ ಯಾತ್ರೆ ಮಾಡಿದ್ದಾರೆ” ಎಂದು ಜರಿದರು.

ಇದು ಆರ್ ಎಸ್ ಎಸ್ ನ ಎರಡು ಬಣಗಳ ಕಿತ್ತಾಟವೇ ಎಂದು ಕೇಳಿದಾಗ, “ಈ ವಿಚಾರ ಎಲ್ಲರಿಗೂ ತಿಳಿದಿದೆ. ಈ ವಿಚಾರ ಏಕೆ ಉಲ್ಬಣವಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ದಕ್ಷಿಣ ಕನ್ನಡ ಜಿಲ್ಲೆಗೆ ಹೋದರೆ ತಿಳಿಯುತ್ತದೆ. ಆರ್ ಎಸ್ ಎಸ್ ಹಾಗೂ ಬಿಜೆಪಿಯ ಎರಡು ಬಣಗಳ ವಿಚಾರ ಇರಬಹುದು. ಇವರ ನಾಟಕ ಇಲ್ಲಿಗೆ ನಿಲ್ಲಬೇಕು” ಎಂದರು.

ಸೌಜನ್ಯ ಕುಟುಂಬದವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರೆ ಖರ್ಚು ವೆಚ್ಚ ನೀಡುವುದಾಗಿ ವಿಜಯೇಂದ್ರ ಅವರು ಹೇಳಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಅವರನ್ನೇ ಕೇಳಬೇಕು. ಏತಕ್ಕಾಗಿ ಈ ಪ್ರಕರಣದ ಖರ್ಚು ವೆಚ್ಚ ಭರಿಸುತ್ತೀರಿ? ಇಂತಹ ಹೇಳಿಕೆಯನ್ನು ಈ ಹಿಂದೆಯೂ ನೀಡಲಾಗಿತ್ತು. ಇವರಿಗೆ ರಾಜಕೀಯ ನೆನಪುಗಳು ಕಡಿಮೆ ಇರಬೇಕು” ಎಂದರು.

ಇದು ಮತಬ್ಯಾಂಕ್ ರಾಜಕಾರಣವೇ ಎಂದು ಕೇಳಿದಾಗ, “ಮತ ಬ್ಯಾಂಕ್ ರಾಜಕಾರಣ ಚುನಾವಣಾ ಸಮಯದಲ್ಲಿ ನಡೆಯುತ್ತದೆ, ಈಗ ನಡೆಯುತ್ತಿರುವುದು ಕೆಸರೆರಚಾಟ” ಎಂದರು.

ಮುನಿರತ್ನ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಬಿ ರಿಪೋರ್ಟ್ ನೀಡಿರುವ ಬಗ್ಗೆ ಕೇಳಿದಾಗ, “ಇದು ಬಿಜೆಪಿಯವರ ವಿಚಾರ, ಅವರನ್ನೇ ಕೇಳಬೇಕು. ಇದು ನಮಗೆ ಸಂಬಂಧಿಸಿದ ವಿಚಾರವಲ್ಲ. ದೂರು ನೀಡಿದವರು ಬಿಜೆಪಿ ಕಾರ್ಯಕರ್ತೆ. ಅವರದ್ದೇ ಪಕ್ಷದ ಕಾರ್ಯಕರ್ತೆ ಅತ್ಯಾಚಾರವಾಗಿದೆ ಎಂದು ದೂರು ನೀಡಿದ್ದರು. ಆ ಹೆಣ್ಣು ಮಗಳು ಎಲ್ಲಿಂದ ಸಾಕ್ಷಿ ಒದಗಿಸಲು ಆಗುತ್ತದೆ. ಅವರ ಶಾಸಕರಷ್ಟು ಬುದ್ದಿವಂತರಲ್ಲವಲ್ಲ ಅವರು” ಎಂದು ವ್ಯಂಗ್ಯವಾಡಿದರು.

ಜಾತಿನಿಂದನೆ, ಅತ್ಯಾಚಾರ ಆರೋಪ ನಿಜವಾಗಿದೆಯಲ್ಲ

“ಜಾತಿ ನಿಂದನೆ ಆರೋಪದಲ್ಲಿ, ಇನ್ನೊಂದು ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಸಾಬೀತಾಗಿದೆಯಲ್ಲ. ಇದರ ಬಗ್ಗೆ ಮಾಧ್ಯಮಗಳು ಮಾತನಾಡಬೇಕು. ಬಿಜೆಪಿ ಕಾರ್ಯಕರ್ತೆಗೆ ಆಗಿರುವ ಅನ್ಯಾಯದ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ನಾಯಕರು ಇದರ ಬಗ್ಗೆ ಉತ್ತರ ನೀಡಬೇಕು. ಹೀರೋ ತರ ಜನರ ಮುಂದೆ ಬಂದು ಭಾಷಣ ಮಾಡುತ್ತಿದ್ದಾರೆ. ಯಾವ ಮುಖ ಹೊತ್ತುಕೊಂಡು ಭಾಷಣ ಮಾಡುತ್ತಿದ್ದಾರೋ ಗೊತ್ತಿಲ್ಲ” ಎಂದು ಹೇಳಿದರು.

ರಾಜೇಂದ್ರ, ರಾಜಣ್ಣ ಹಿರಿಯ ನಾಯಕರು

ಶಿವಕುಮಾರ್ ಅವರು ಬಿಜೆಪಿಗೆ ಹೋಗಬಹುದು ಎನ್ನುವ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದಾಗ, “ರಾಜೇಂದ್ರ ಅವರು ಹಾಗೂ ರಾಜಣ್ಣ ಅವರು ಇಬ್ಬರೂ ಹಿರಿಯ ನಾಯಕರು. ಅವರಿಗೆ ಏನೇನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಯವರು, ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯವರು ಉತ್ತರ ನೀಡುತ್ತಾರೆ” ಎಂದರು.

ಸೆಪ್ಟೆಂಬರ್ ಕ್ರಾಂತಿ ಎಂದರೆ ಬಿಜೆಪಿಗೆ ಹೋಗುವುದು ಎನ್ನುವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಬಳಿ ಜನಬೆಂಬಲವೂ ಇಲ್ಲ. ಅವರಷ್ಟು ತಿಳುವಳಿಕೆಯೂ ಇಲ್ಲ. ನಮಗೆ ಇರುವುದು ಕಾಂಗ್ರೆಸ್ ಪಕ್ಷವೊಂದೇ, ಆ ಪಕ್ಷದ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಧ್ವಜದ ಕೆಳಗೆ, ಕಾಂಗ್ರೆಸ್ಸಿಗರ ಜೊತೆಗೆ ಕೆಲಸ ಮಾಡಿ ಅಭ್ಯಾಸವಿದೆ. ಉಳಿದದ್ದು ಅವರಿಗೆ ಬಿಟ್ಟಿದ್ದು” ಎಂದು ಹೇಳಿದರು.

ರಾಜಣ್ಣ ಅವರ ವಿರುದ್ಧ ಪಿತೂರಿಯಾಯಿತು ಎನ್ನುವ ಬಗ್ಗೆ ಕೇಳಿದಾಗ, “ಪಿತೂರಿ ಮಾಡಲು ಜನಗಳೇ ಇಲ್ಲ. ಜನಗಳು ಎಲ್ಲಿದ್ದಾರೆ?” ಎಂದರು.

Tags: BamulBJPdharmastalaDK Shivakumardk sureshJDSkn rajannaMLAmpMunirathnanandini milkRajannaRajendra RajannaRSSSIT
Previous Post

ಕಾರ್ಖಾನೆ ಹಾಗೂ ನೌಕರರ ನಡುವಿನ ಸಮಸ್ಯೆ ನಿವಾರಣೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆ

Next Post

70 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಜಾರಿ ನಾಯಿ

Related Posts

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ
Top Story

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

by ಪ್ರತಿಧ್ವನಿ
September 4, 2025
0

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ...

Read moreDetails
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

September 4, 2025
Next Post
70 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಜಾರಿ ನಾಯಿ

70 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಜಾರಿ ನಾಯಿ

Recent News

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ
Top Story

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

by ಪ್ರತಿಧ್ವನಿ
September 4, 2025
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ
Top Story

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

by ಪ್ರತಿಧ್ವನಿ
September 4, 2025
Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

September 4, 2025
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada