• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

500 ಬೀದಿ ನಾಯಿ ಕೊಂ* ಗ್ರಾಮಸ್ಥರು : 15 ಮಂದಿ ವಿರುದ್ಧ ಕೇಸ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
January 14, 2026
in Top Story, ದೇಶ
0
500 ಬೀದಿ ನಾಯಿ ಕೊಂ* ಗ್ರಾಮಸ್ಥರು : 15 ಮಂದಿ ವಿರುದ್ಧ ಕೇಸ್ ದಾಖಲು
Share on WhatsAppShare on FacebookShare on Telegram

ಹೈದರಾಬಾದ್‌: ತೆಲಂಗಾಣ ರಾಜ್ಯದಲ್ಲಿ ನಡೆದಿರುವ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಪ್ರಕರಣವು ಭಾರೀ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಪ್ರಾಣಿ ಹಿಂಸೆಯ ವಿರುದ್ಧ ಕೈಗೊಳ್ಳಲಾದ ಅತಿದೊಡ್ಡ ಕಾನೂನು ಕ್ರಮಗಳಲ್ಲಿ ಒಂದಾಗಿದೆ.

ADVERTISEMENT
Zameer Ahmed : ಬಿಜೆಪಿ ನಾಯಕರಿಗೆ ಸವಾಲ್‌ ಹಾಕಿದ ಸಚಿವ ಜಮೀರ್‌..! #janardhanreddy #sriramulu #pratidhvani

ಪೊಲೀಸರು ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಾದ್ಯಂತ ಏಳು ಗ್ರಾಮ ಮುಖ್ಯಸ್ಥರು ಸೇರಿದಂತೆ 15 ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದಾರೆ. ಹೊಸ ವರ್ಷದ ಮೊದಲ ಎರಡು ವಾರಗಳಲ್ಲಿ ಕನಿಷ್ಠ 500 ನಾಯಿಗಳನ್ನು ವಿಷಪೂರಿತವಾಗಿ ಕೊಂದಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಪ್ರಾಣಿ ಹಿಂಸೆಯ ವಿರುದ್ಧದ ಅತಿದೊಡ್ಡ ಕ್ರಮಗಳಲ್ಲಿ ಒಂದಾಗಿದೆ.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ, ಬೀದಿ ನಾಯಿಗಳ ದಾಳಿಯಿಂದ ತತ್ತರಿಸಿದ್ದ ಗ್ರಾಮಸ್ಥರನ್ನು ಸೆಳೆಯುವ ಉದ್ದೇಶದಿಂದ ಕೆಲ ಅಭ್ಯರ್ಥಿಗಳು ನಾಯಿ-ಮುಕ್ತ ಗ್ರಾಮ ಮಾಡುವ ಭರವಸೆ ನೀಡಿದ್ದರು ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಆದರೆ ಈ ಭರವಸೆಯನ್ನು ಈಡೇರಿಸುವ ಹೆಸರಿನಲ್ಲಿ, ಕಾನೂನನ್ನು ಕೈಗೆತ್ತಿಕೊಂಡು ಬೀದಿ ನಾಯಿಗಳನ್ನು ಗುಂಪು ಗುಂಪಾಗಿ ಹತ್ಯೆ ಮಾಡಿರುವುದು ಈಗ ಬಹಿರಂಗವಾಗಿದೆ.

Vijayendra on BJP, JDS alliance: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ವಿಜಯೇಂದ್ರ ಏನಂದ್ರು?

ಪೊಲೀಸರ ಪ್ರಕಾರ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸರಪಂಚ್‌ಗಳ ಸೂಚನೆಯಂತೆ ಈ ಕ್ರೂರ ಕೃತ್ಯ ನಡೆದಿದ್ದು, ಇದು ಸಂಪೂರ್ಣವಾಗಿ ಯೋಜಿತ ಮತ್ತು ವ್ಯವಸ್ಥಿತ ಹತ್ಯಾಕಾಂಡವಾಗಿತ್ತು. ಜಗ್ತಿಯಾಲ್ ಜಿಲ್ಲೆಯ ಧರ್ಮಪುರಿ ಪುರಸಭೆಯಿಂದ ಹೊರಬಂದಿರುವ ಒಂದು ಭಯಾನಕ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

DKS on Rahul Gandhi: ಏರ್​ಪೋರ್ಟ್​ ರಾಹುಲ್​​ ಗಾಂಧಿ ಜೊತೆ ಪ್ರತ್ಯೇಕವಾಗಿ ಏನೇನ್ ಚರ್ಚಿಸಿದ್ರಿ ಸರ್?

ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಬೀದಿ ನಾಯಿಗೆ ಮಾರಕ ಇಂಜೆಕ್ಷನ್ ಚುಚ್ಚುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದು, ಕೇವಲ ಒಂದು ನಿಮಿಷದೊಳಗೆ ನಾಯಿ ಕುಸಿದು ಸಾವನ್ನಪ್ಪುತ್ತದೆ. ಅದೇ ಸ್ಥಳದಲ್ಲಿ ಇನ್ನೂ ಎರಡು ನಾಯಿಗಳ ಶವಗಳು ಬಿದ್ದಿರುವುದು ಕಂಡುಬಂದಿದೆ. ಈ ಪುರಸಭಾ ವ್ಯಾಪ್ತಿಯಲ್ಲಿ ಮಾತ್ರವೇ ಕಳೆದ ಎರಡು ವಾರಗಳಲ್ಲಿ ಕನಿಷ್ಠ 50 ನಾಯಿಗಳನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

RajivGowda on Amrutha ViralAudio : ಬೆಂಕಿ ಹಚ್ತೀನಿ.. ಜನರನ್ನು ಕರೆತಂದು ದಂಗೆ ಎಬ್ಬಸ್ತೀನಿ..! #congress

ಇತ್ತ ಹನಮಕೊಂಡ ಜಿಲ್ಲೆಯ ಶಾಯಂಪೇಟೆ ಪ್ರದೇಶದಲ್ಲಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 110ಕ್ಕೂ ಹೆಚ್ಚು ನಾಯಿಗಳ ಮೃತದೇಹಗಳನ್ನು ಹೊರತೆಗೆದಿರುವುದನ್ನು ದೃಢಪಡಿಸಿದ್ದಾರೆ. ಸಾವಿನ ನಿಖರ ಕಾರಣ ಪತ್ತೆಹಚ್ಚಲು ಕೆಲ ನಾಯಿಗಳ ಮೇಲೆ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಷಪೂರಿತ ಇಂಜೆಕ್ಷನ್‌ ಮೂಲಕ ಹತ್ಯೆ ಮಾಡಿರುವ ಶಂಕೆ ಬಲವಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಹತ್ಯಾಕಾಂಡದ ಹಿಂದೆ ಇದ್ದಂತೆ ಶಂಕಿಸಲಾಗಿರುವ 15 ಪ್ರಮುಖ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಸದ್ಯ ಈ ಪ್ರಕರಣದ ತನಿಖೆ ಮುಂದುವರಿದಿದೆ.

Tags: ‌ supreme courtDeathdoghydrabadIndiaTelangana
Previous Post

BBK 12: ಮತ್ತೊಂದು ಅರುಣ್ ಸಾಗರ್ ಆಗ್ತಾರಾ ಗಿಲ್ಲಿ? ಜನಮೆಚ್ಚಿದ ಆಟಗಾರನಿಗೆ ರನ್ನರ್ ಅಪ್ ಪಟ್ಟನಾ..?

Next Post

ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?

ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada