ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಯುಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಯಿಂದ ಅನೇಕ ನಾಯಕರು ಬೇರೆ ಪಕ್ಷಗಳ ಕಡೆ ಮುಖ ಮಾಡುತ್ತಿದ್ದಾರೆ.
ನಿನ್ನೆಯಷ್ಟೇ ಯೋಗಿ ಆದಿತ್ಯನಾಥ ಸಚಿವ ಸಂಪುಟದ ಒಬಿಸಿ ನಾಯಕ ಸ್ವಾಮಿ ಪ್ರಸಾದ ಮೌರ್ಯ ಸೇರಿದಂತೆ ಅನೇಕ ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದರು. ಇದೀಗ ಯೋಗಿ ಆದಿತ್ಯನಾಥ್ ಸಚಿವ ಸಂಪುಟದ ಒಬಿಸಿಯ ಪ್ರಭಾವಿ ನಾಯಕ ಹಾಗೂ ಸಚಿವ ದಾರಾ ಸಿಂಗ್ ಚೌಹಾಣ್ ಬಿಜೆಪಿಯನ್ನು ತೊರೆದು ಸಮಾಜವಾದಿ ಪಕ್ಷ ಸೇರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಾರ ಸಿಂಗ್ ʻನಾನು ಸಮರ್ಪಣ ಮನೋಭಾವದಿಂದ ಸೇವೆ ಸಲ್ಲಿಸಿದೆ. ಆದರೆ, ಈ ಸರ್ಕಾರಕ್ಕೆ ಹಿಂದುಳಿದ, ದಲಿತ, ರೈತರ ಹಾಗೂ ನಿರುದ್ಯೋಗಿ ಯುವಕರ ಮೇಲೆ ಈ ಸರ್ಕಾರ ನಿರಂತರ ದಬ್ಬಾಳಿಕೆ ನಡೆಸುತ್ತದ್ದರಿಂದ ನಾನು ಬೇಸತ್ತು ರಾಜೀನಾಮೆ ನೀಡಿದ್ದೇನೆʼ ಎಂದು ತಿಳಿಸಿದ್ದಾರೆ.