ರಾಜ್ಯದಲ್ಲಿ ಕಳೆದ ಎರಡು ವಾರಗಳ ಕಾಲ ಅಕಾಲಿಕ ಮಳೆ ಸುರಿದು ಮಳೆರಾಯ ಮಾಡಿದ್ದ ಅವಾಂತರ ಒಂದಾ, ಎರಡ. ಇದೀಗ ಮಳೆರಾಯ ಸ್ವಲ್ಪ ಕೃಪೆ ತೋರಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
ಇದೀಗ ಜನರು ಮುಂದಿನ ದಿನಗಳಲ್ಲಿ ಮಳೆಯಾಗುವುದಿಲ್ಲ ಎಂದು ಮೈ ಮರೆಯಬಾರದು. ಏಕೆಂದರೆ ನವೆಂಬರ್ 26ಕ್ಕೆ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗಲಿದ್ದು ಮುಂದಿನ ವಾರ ರಾಜ್ಯಾದ್ಯಂತ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.
ನದಿ ದಡದ ಗ್ರಾಮದ ಜನರು ಈ ಕೂಡಲೇ ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಬೇಕು ಎಂದು ಎಚ್ಚರಿಸಿದ್ದಾರೆ. ಕಳೆದ ವಾರ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದನ್ನು.
![](https://pratidhvani.com/wp-content/uploads/2021/10/pratidhvani_2021-04_29cee206-dc0f-4bab-800a-a1c9baf36790_Support_QR-300x300-1.jpg)
ನವೆಂಬರ್ 1ರಿಂದ ಇಲ್ಲಿ ತನಕ ರಾಜ್ಯಾದಲ್ಲಿ ವಾಡಿಕೆಗಿಂತ ಶೇ.270ಕ್ಕಿಂತ ಹೆಚ್ಚು ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.330 ರಷ್ಟು ಹೆಚ್ಚು ಮಳೆಯಾಗಿದೆ.
ನವೆಂಬರ್ ತಿಂಗಳಲ್ಲಿ ಇಷ್ಟೊಂದು ಮಳೆಯಾಗಿರುವುದು ಹೊಸ ದಾಖಲೆಯನ್ನೇ ಬರೆದಿದೆ.