ಶಿವಮೊಗ್ಗ- ಕಾಲೇಜು ಕಟ್ಟದಿಂದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇಲ್ಲಿನ ಶರಾವತಿ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ಮೇಘಶ್ರೀ (೧8) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇಂದು ಕಾಲೇಜಿನಲ್ಲಿ ನಡೆಯುತ್ತಿದ್ದ ಜೀವಶಾಸ್ತ್ರ ಪರೀಕ್ಷೆ ಬರೆಯುತ್ತಿದ್ದಾಗಲೇ, ಅರ್ಧಕ್ಕೆ ವಾಶ್ ರೂಂಗೆ ಅಂತ ಎದ್ದುಹೊರಟ ಮೇಘಶ್ರೀ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ,
ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ ಮೇಘಶ್ರೀ ಕಾಲೇಜಿನ ಹಾಸ್ಟೆಲ್ನಲ್ಲಿದ್ದುಕೊಂಡು ವಿದ್ಯಾಭ್ಯಾಸ ನಡೆಸುತ್ತಿದ್ದಳು. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸದ್ಯ ಮೇಘಶ್ರಿ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.