• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಕಲಾ ಕಾಲೇಜು (GAC) ಒತ್ತುವರಿಗೆ ಮುಂದಾದ ನೃಪತುಂಗ ಯೂನಿವರ್ಸಿಟಿ; ವಿದ್ಯಾರ್ಥಿಗಳ ಪ್ರತಿಭಟನೆ

Any Mind by Any Mind
September 18, 2021
in ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ಸರ್ಕಾರಿ ಕಲಾ ಕಾಲೇಜು (GAC) ಒತ್ತುವರಿಗೆ ಮುಂದಾದ ನೃಪತುಂಗ ಯೂನಿವರ್ಸಿಟಿ; ವಿದ್ಯಾರ್ಥಿಗಳ ಪ್ರತಿಭಟನೆ
Share on WhatsAppShare on FacebookShare on Telegram

ಇತ್ತೀಚೆಗೆ ರಾಜ್ಯ ಸರ್ಕಾರ ಮಾಡಿದ ನೂತನ ನೃಪತುಂಗ ಯೂನಿವರ್ಸಿಟಿ ಮುಂಭಾಗ ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು‌. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರಿ ವಿಜ್ಞಾನ ಕಾಲೇಜನ್ನು ಇತ್ತೀಚೆಗೆ ನೃಪತುಂಗ ಯೂನಿವರ್ಸಿಟಿ ಎಂದು ಮಾಡಲಾಯ್ತು. ಈ ಕಾಲೇಜಿನ ಅಂದಾಜು ಜಾಗ ಕೇವಲ 3.7 ಎಕರೆ ಇದೆ, ಹೀಗಿದ್ದರೂ ಸರ್ಕಾರಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ‌ ಮಾಡಿದ್ದಾರೆ.

ಒಂದು ಯೂನಿವರ್ಸಿಟಿ ಮಾಡಲು ಕನಿಷ್ಠ 10 ಎಕರೆ ಬೇಕು ಎಂದು ರಾಜ್ಯ ಸರ್ಕಾರದ ಆದೇಶ ಇದೆ. ನೃಪತುಂಗ ಯೂನಿವರ್ಸಿಟಿ ಈಗ ಕೇವಲ 3.7 ಎಕರೆ ಜಾಗ ಹೊಂದಿದ್ದು, ಪಕ್ಕದ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗಿದೆ‌.

ನೃಪತುಂಗ ಯೂನಿವರ್ಸಿಟಿ ಸರ್ಕಾರಿ ಕಲಾ ಕಾಲೇಜು ಜಾಗ 7 ಎಕರೆ ಒತ್ತುವರಿಗೆ ಮಂದಾಗಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ‌ ಕಲಾ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಸರ್ಕಾರ ಮತ್ತು ನೃಪತುಂಗ ಯೂನಿವರ್ಸಿಟಿ ವಿರುದ್ಧ ಪ್ರತಿಭಟಿಸಿದರು. ನಮ್ಮ ಕಾಲೇಜಿನ ಜಾಗ ಹೇಗೆ ಒತ್ತುವರಿ ಮಾಡಿಕೊಳ್ಳುತ್ತೀರಿ ಎಂದು ಅಸಮಾಧಾನ ಹೊರಹಾಕಿದರು.

ಕೊರೋನಾ ಸಂದರ್ಭದಲ್ಲಿ ಕಾಲೇಜು ತರಗತಿಗಳು ನಡೆಯುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ಯೂನಿವರ್ಸಿಟಿಯನ್ನಾಗಿ ಮಾಡಿದೆ. ಈ ವೇಳೆ ನೃಪತುಂಗ ಯೂನಿವರ್ಸಿಟಿ ಉಪಕುಲಪತಿ ಶ್ರೀನಿವಾಸ್ ಬಳ್ಳಿ ನಕಲಿ ದಾಖಲೆ ಸೃಷ್ಟಿಸಿ ನಮ್ಮದು 11 ಎಕರೆ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ನೃಪತುಂಗ ಯೂನಿವರ್ಸಿಟಿ ವಿಸಿ ಶ್ರೀನಿವಾಸ ಬಳ್ಳಿ ಸೃಷ್ಟಿಸಿದ ನಕಲಿ‌ ದಾಖಲೆಗಳ ಆಧಾರದ ಮೇರೆಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಮಹೇಶ್ ಒಂದು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಅಧೀನ ಕಾರ್ಯದರ್ಶಿ  ಹೊರಡಿಸಿದ ಆದೇಶ ಪ್ರತಿಯಲ್ಲಿ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಯೂನಿವರ್ಸಿಟಿಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ. ಸರ್ಕಾರ ಕಲಾ ಕಾಲೇಜು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಹಿಂದೆಯೇ ಸರ್ಕಾರ ಕಲಾ ಕಾಲೇಜು‌ ಜಾಗದ ಮೇಲೆ ಪ್ರಭಾವಿ ರಾಜಕಾರಣಿಗಳ ಕಣ್ಣು ಬಿದ್ದಿತ್ತು. ಈಗಾಗಲೇ ಸರ್ಕಾರವು ಕಲಾ ಕಾಲೇಜಿನ ಒಂದಷ್ಟು ಜಾಗವನ್ನು ಸಿವಿಲ್ ಕೋರ್ಟ್, ಬೆಂಗಳೂರು ಮೆಟ್ರೋ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಟ್ಟಿದ್ದಾರೆ.

ಈಗ ಸರ್ಕಾರ ಕಲಾ ಕಾಲೇಜಿನಲ್ಲಿ ಇರುವುದು 7 ಎಕರೆ ಜಾಗ. ಈ ಜಾಗವನ್ನು ಅಧಿಕಾರದ ದುರಾಸೆಗಾಗಿ ನೃಪತುಂಗ ಯೂನಿವರ್ಸಿಟಿ ಉಪ ಕುಲಪತಿ ಶ್ರೀನಿವಾಸ್ ಬಳ್ಳಿ ಮತ್ತು ಹಲವು ಅಧಿಕಾರಿಗಳು ಹೊಡೆಯಲು ಮುಂದಾಗಿದ್ದಾರೆ ಎನ್ನುವುದು ಪ್ರತಿಭಟನಾನಿರತ ವಿದ್ಯಾರ್ಥಿಗಳ ಆಕ್ರೋಶ.

ಇನ್ನು, ಸರ್ಕಾರ ಕಲಾ ಕಾಲೇಜಿನಲ್ಲಿ 2 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ‌. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸಾವಿರಾರು ಮಂದಿ ವಿದ್ಯಾರ್ಥಿಗಳು ಈ ಕಾಲೇಜಿನ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಡೀ ಕರ್ನಾಟಕದಲ್ಲೇ ಕಲಾ ವಿಭಾಗಕ್ಕಾಗಿ ಇರುವ ಏಕೈಕ ಕಾಲೇಜು ಗವರ್ನಮೆಂಟ್ ಆರ್ಟ್ಸ್ ಕಾಲೇಜು.

Tags: Student protest against Nrupatunga University as it is set to take over Govt Arts Collegeಗ್ಯಾಸ್ ಕಾಲೇಜುನೃಪತುಂಗಯೂನಿವರ್ಸಿಟಿವಿದ್ಯಾರ್ಥಿ
Previous Post

ಸೋನು ಸೂದ್ ಹಾಗೂ ಆಪ್ತರಿಂದ 20 ಕೋಟಿ ತೆರಿಗೆ ವಂಚನೆ- ಐಟಿ‌ ಇಲಾಖೆ

Next Post

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada