ಉಡುಪಿಯ ಸರ್ಕಾರಿ PU ಕಾಲೇಜಿನಲ್ಲಿ ಸೋಮವಾರ ನಡೆದ ಅಂತಿಮ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿದ ಮೂವರು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಲ್ಮಾಸ್, ʻಇಂದು ನಮ್ಮ ಅಂತಿಮ ಪ್ರಾಯೋಗಿಕ ಪರೀಕ್ಷೆ ಇತ್ತು ನಾವು ರೆಕಾರ್ಡ್ ಬುಕ್ ಅನ್ನು ಪೂರ್ಣಗೊಳಿಸಿ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಸಿದ್ದರಿದ್ದೇವು ಆದರೆ ಹಿಜಾಬ್ ಧರಿಸಿದ ಒಂದೇ ಕಾರಣಕ್ಕೆ ಪ್ರಾಂಶಪಾಲರು ನಮ್ಮಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಕೊಡಲಿಲ್ಲ ಮತ್ತು ನಿಮಗೆ ಇಲ್ಲಿಂದ ಹೊರಡಲು 5 ನಿಮಿಷಗಳ ಸಮಯಾವಕಾಶವನ್ನು ನೀಡಲಾಗಿದೆ ಇಲ್ಲದಿದ್ದರೆ ನಿಮ್ಮ ಮೇಲೆ ಪೊಲೀಸ್ ದೂರು ದಾಖಲಿಸಬೇಕಾಗುತ್ತದೆ ಎಂದು ನಮಗೆ ಹೇಳಿದರು ಎಂದು ಟ್ವೀಟ್ ಮಾಡಿದ್ದಾರೆ.
ನಾವು ಈಗ ನಮ್ಮ ಪರೀಕ್ಷೆಗೆ ಹಾಜರಾಗಬೇಕಿತ್ತು ಆದರೆ, ಇಲ್ಲಿಂದ ಹೊರಡುವುದಲ್ಲ ನಾನು ಕಾಲೇಜು ಮೇಲಿಟ್ಟಿದ ನಂಬಿಕೆ ಹಾಗೂ ನನ್ನ ಕನಸುಗಳು ಹಿಜಾಬ್ನಿಂದಾಗಿ ಚಿದ್ರಗೊಂಡವು ಎಂದು ಮತ್ತೊಂದು ಟೀಟ್ನಲ್ಲಿ ಹೇಳಿದ್ದಾರೆ.
ಕರ್ನಾಟಕ ಹೈ ಕೋರ್ಟ್ ಹಿಜಾಬ್ ವಿವಾದದ ಕುರಿತಾಗಿ ಅಂತಿಮ ತೀರ್ಪು ಪ್ರಕಟಿಸುವವರೆಗೂ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಪ್ರತಿಭಟಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಕಳೆದ ವಾರ ವಿದ್ಯಾರ್ಥಿಗಳು ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಭೇಟಿ ಮಾಡಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಕೂಡ ಸಲ್ಲಿಸಿದ್ದರು.






