• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ ಆಕ್ಸಿಜನ್‌ ದುರಂತ- ಸಚಿವ ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು -ಸಿದ್ದರಾಮಯ್ಯ

Any Mind by Any Mind
May 4, 2021
in ಕರ್ನಾಟಕ
0
ಚಾಮರಾಜನಗರ ಆಕ್ಸಿಜನ್‌ ದುರಂತ- ಸಚಿವ ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕಳೆದು ಒಂದು ದಿನದಲ್ಲಿ ಚಾಮರಾಜನಗರ ಜಿಲ್ಲೆಯೊಂದರಲ್ಲೇ 24 ರೋಗಿಗಳು ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ. ಕೇವಲ 3 ಜನ ಮಾತ್ರ ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಹೇಳಿರುವುದು ಶುದ್ಧ ಸುಳ್ಳು ಎಂದು ವಿರೋಧ ನಾಯಕ ಸಿದ್ದರಾಮಯ್ಯ ಸುಧಾಕರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆಗನುಗುಣವಾಗಿ ಪ್ರತಿನಿತ್ಯ ಕನಿಷ್ಟ 350 ಆಕ್ಸಿಜನ್ ಸಿಲಿಂಡರ್ ಅಗತ್ಯವಿದೆ, ಆದರೆ ಕಳೆದ ಭಾನುವಾರ ಸರಬರಾಜು ಆದದ್ದು ಕೇವಲ 126 ಸಿಲಿಂಡರ್. ಹೀಗಾಗಿ ಸಂಜೆಯ ವೇಳೆಗೆ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಖಾಲಿಯಾಗಿ ರೋಗಿಗಳು ಸಾವಿಗೀಡಾಗಿದ್ದಾರೆ. ಇಂದು ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ನಾನು ಪ್ರಶ್ನಿಸಿದಾಗ “ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ, ನಾವು ಆಕ್ಸಿಜನ್ ವ್ಯವಸ್ಥೆ ಮಾಡುವ ಎಷ್ಟೇ ಪ್ರಯತ್ನ ಮಾಡಿದರೂ ಅದರಿಂದ ಪ್ರಯೋಜನವಾಗಿಲ್ಲ” ಎಂಬ ಸತ್ಯಸಂಗತಿಯನ್ನು ಅಧಿಕಾರಿಗಳು ಹೇಳಿದ್ದಾರೆ. ಇದಕ್ಕೆ ಸಚಿವ ಸುಧಾಕರ್‌  ಏನಂತಾರೆ..? ಎಂದು ಪ್ರಶ್ನೆ ಮಾಡಿದ್ದಾರೆ.

ಆಕ್ಸಿಜನ್ ದುರಂತ: ರೋಗಿಗಳ ಸಾವಿಗೆ ಸರ್ಕಾರ, ವೈದ್ಯರು & ಜಿಲ್ಲಾಡಳಿತವೇ ನೇರ ಹೊಣೆ -ಸಿದ್ದರಾಮಯ್ಯ

ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್, ಬೆಡ್‌ಗಳು, ವೈದ್ಯರು ಸೇರಿದಂತೆ ವಿವಿಧ ವೈದ್ಯಕೀಯ ಸವಲತ್ತುಗಳನ್ನು ಪೂರೈಕೆ ಮಾಡಬೇಕಾದುದ್ದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಯಡಿಯೂರಪ್ಪ ಸರ್ಕಾರ ವಿಫಲವಾಗಿರುವುದೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಕಾರಣ ಎಂದು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಸಚಿವರು ಈ ಮೂವರ ಹೇಳಿಕೆಗಳು ಭಿನ್ನವಾಗಿವೆ. ಹಾಗಾಗಿ ಸತ್ಯ ಯಾವುದು..? ಸುಳ್ಳು ಯಾವುದು..? ಎಂದು ಜನರಿಗೆ ತಿಳಿಯಬೇಕಾದರೆ ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಸಿಗಬೇಕು ಎಂದಾದರೆ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ. ಸ್ವತಂತ್ರ ತನಿಖಾಸಂಸ್ಥೆಯಿಂದ ತನಿಖೆಯಾಗದ ಹೊರತು ಸತ್ಯಾಸತ್ಯತೆ ಹೊರಬರುವ ವಿಶ್ವಾಸವಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತಮ್ಮ ಬೇಜವಾಬ್ದಾರಿಯಿಂದ 24 ಜನ ರೋಗಿಗಳ ಸಾವಿಗೆ ಕಾರಣರಾದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಘಟನೆಯ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇವರಿಗೆ ಮಾನ ಮರ್ಯಾದಿಯಿದ್ದರೆ ತಮ್ಮ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರರು ಎಂದು ಚಾಟಿಬೀಸಿದ್ದಾರೆ.

ಕೊರೊನಾ ಎರಡನೇ ಅಲೆ ಆರಂಭವಾಗಿ ಇಷ್ಟು ದಿನಗಳಾಯಿತು, ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಈವರೆಗೆ ಕೋವಿಡ್ ನಿರ್ವಹಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ, ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇವರು ಎಚ್ಚರವಾಗೋಕೆ ಇನ್ನೆಷ್ಟು ಅಮಾಯಕರು ಸಾಯಬೇಕೆಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ಸಾವಿಗೀಡಾದವರಲ್ಲಿ ಬಹುತೇಕರು ಬಡವರು, ಕುಟುಂಬಕ್ಕೆ ಆಧಾರವಾಗಿದ್ದವರು, ಯುವಕರೇ ಆಗಿದ್ದಾರೆ. ಸರ್ಕಾರದ ಬೇಜವಾಬ್ದಾರಿಗೆ ಇಂದು ಅನೇಕ ಕುಟುಂಬಗಳು ಬೀದಿಪಾಲಾಗಿವೆ. ಹಾಗಾಗಿ ಮೃತ ರೋಗಿಗಳ ಕುಟುಂಬಕ್ಕೆ ತಲಾ ರೂ.25 ಲಕ್ಷ ಪರಿಹಾರವನ್ನು ಈ ಕೂಡಲೇ ರಾಜ್ಯ ಸರ್ಕಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಒತ್ತಾಯಿಸಿದ್ದಾರೆ.

Previous Post

ಸೋಂಕಿತರನ್ನು ಸರ್ಕಾರವೇ ಕೊಲೆ ಮಾಡಿದೆ, ಈ ಕುರಿತು ನ್ಯಾಯಾಂಗ ತನಿಖೆ ನಡೆಯಬೇಕು: ಡಿಕೆ ಶಿವಕುಮಾರ್‌ ಆಗ್ರಹ

Next Post

ಆಮ್ಲಜನಕ ಹಾಹಾಕಾರ: ಸರ್ಕಾರಕ್ಕೆ ಮುಂಗಡ ಬುಕಿಂಗ್ ದಂಧೆಯೇ ಆದ್ಯತೆಯಾಯಿತೆ..?

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
Next Post
ಆಮ್ಲಜನಕ ಹಾಹಾಕಾರ: ಸರ್ಕಾರಕ್ಕೆ ಮುಂಗಡ ಬುಕಿಂಗ್ ದಂಧೆಯೇ ಆದ್ಯತೆಯಾಯಿತೆ..?

ಆಮ್ಲಜನಕ ಹಾಹಾಕಾರ: ಸರ್ಕಾರಕ್ಕೆ ಮುಂಗಡ ಬುಕಿಂಗ್ ದಂಧೆಯೇ ಆದ್ಯತೆಯಾಯಿತೆ..?

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada