• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in Top Story, ರಾಜಕೀಯ, ವಾಣಿಜ್ಯ, ಸರ್ಕಾರಿ ಗೆಜೆಟ್
0
ಸಕ್ಕರೆ ಕಾರ್ಖಾನೆಯಿಂದ ರೈತರ ಬೆಳೆ ಹಾನಿ – ರೊಚ್ಚಿಗೆದ್ದ ರೈತರು…
Share on WhatsAppShare on FacebookShare on Telegram

ಕೆ.ಆರ್.ಪೇಟೆ: ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ಹಾರುವ ಬೂದಿಯಿಂದ ಆ ವ್ಯಾಪ್ತಿಯ ರೈತರ ತೋಟದ ಫಸಲುಗಳು ಹಾಳಾಗುತ್ತಿದ್ದಾವೆ ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳಿ ಎಂದು ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಕಾರ್ಖಾನೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದೆ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ ಕಾರ್ಖಾನೆಯ ಸುತ್ತಮುತ್ತಲಿನ ರೈತರು ತರಾಟೆಗೆ ತೆಗೆದುಕೊಂಡು

ADVERTISEMENT

ತಾಲೂಕು ರೈತಸಂಘದ ನೇತೃತ್ವದಲ್ಲಿ ನೂರಾರು ರೈತರು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಕಾರ್ಯವೈಖಾರಿ ಖಂಡಿಸಿ.ಪಟ್ಟಣದಲ್ಲಿರುವ ತಾಲೂಕು ಪಂಚಾಯತಿ ಕಾರ್ಯಾಲಕ್ಕೆ ರೈತ ಚಳುವಳಿಯ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕಿ ರೂಪಶ್ರೀ ಸ್ಥಳಕ್ಕೆ ಆಗಮಿಸಿ ಚಳುವಳಿಗೆ ಆಗಮಿಸಿದ ನೂರಾರು ರೈತರ ಮನವೊಲಿಸಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ರೈತರೊಂದಿಗೆ ಆರೋಗ್ಯಕರ ಚರ್ಚೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ಸಭೆಯಲ್ಲಿ ಮಾತನಾಡಿದ ರೈತಪರ ಹೋರಾಟಗಾರ ಕರೋಟಿ ತಮ್ಮಯ್ಯ ರೈತರ ಜೀವನಾಡಿ ಹೇಮಾವತಿ ನದಿ ಸಮೀಪವಿರುವ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯಿಂದ ಬರುವ ಹಾರುವ ವಿಷಕಾರಿ ಬೂದಿಯಿಂದ ಕಾರ್ಖಾನೆ ವ್ಯಾಪ್ತಿಗೆ ಬರುವ ಮಾಕವಳ್ಳಿ, ಕರೋಟಿ,ವಡ್ಡರಹಳ್ಳಿ ಹೆಗ್ಗಡಹಳ್ಳಿ, ಕರಿಗನಹಳ್ಳಿ, ಮಾಣಿಕನಹಳ್ಳಿ,ಲಿಂಗಾಪುರ,ರಾಮನಹಳ್ಳಿ, ಬಿಚೇನಹಳ್ಳಿ,ಕುಂದನಹಳ್ಳಿ, ಗ್ರಾಮಗಳ ರೈತರ ತೋಟದ ಫಸಲಗಳು ಮೇಲೆ ಭಾರಿ ಪರಿಣಾಮ ಬೀರುತ್ತಿವೆ ಹಾಗೂ ಹಾರುವ ಬೂದಿಯಿಂದ ಈ ಭಾಗದ ಜನರ ಆರೋಗ್ಯದ ಮೇಲೂ ಸಮಸ್ಯೆ ಎದುರಾಗುತ್ತಿದೆ ಎಂದು ಹತ್ತು ವರ್ಷಗಳಿಂದ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸೂಕ್ತ ವರದಿಯೊಂದಿಗೆ ಕಾರ್ಖಾನೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಹಲವು ಬಾರಿ ಮನವಿ ಮಾಡಿದರು ಬಡವರ ಕೋಪ ದವಡೆಗೆ ಮೂಲ ಎಂಬ ಗಾದೆಯ ಅನುಸಾರವಾಗಿ ತಾಲೂಕು ತೋಟಗಾರಿಕಾ ಇಲಾಖೆ ಕಾರ್ಖಾನೆಯ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ನಿರಂತರವಾಗಿ ಕಿಡಿಕಾರಿ.ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಮತ್ತು ನಮಗೆ ನ್ಯಾಯ ದೊರಕಿಸಿಕೊಡಿ ಎಂದು ತೋಟಗಾರಿಕೆ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ರೂಪಶ್ರೀರವರಿಗೆ ಕಾರ್ಖಾನೆ ವ್ಯಾಪ್ತಿಯ ರೈತರು ಪಟ್ಟು ಹಿಡಿದರು.

ಬಳಿಕ ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಮಾತನಾಡಿ ಪರಿಸರ ಮತ್ತು ಕಾರ್ಖಾನೆ ವ್ಯಾಪ್ತಿಯ ರೈತರ ಉಳಿವಿಗಾಗಿ ನಾನು ಕೂಡ ಕಾರ್ಖಾನೆಯ ಸ್ಥಳೀಯ ಸಮಿತಿಯ ಸದಸ್ಯನಾಗಿದ್ದೇನೆ ನಿಮ್ಮ ಸ್ಥಳೀಯ ಇಲಾಖೆ ಅಧಿಕಾರಿಗಳು ಸಮಿತಿಯ ಎಷ್ಟು ಬಾರಿ ಸಭೆಗೆ ಹಾಜರಾಗಿದ್ದಾರೆ ನಿಮ್ಮ ಎದುರೇ ನೀವೇ ಕೇಳಬೇಕು..?ತಾಲೂಕಿನ ತೋಟಗಾರಿಕೆ ಇಲಾಖೆ ಸಾರ್ವಜನಿಕ ಉಳಿವಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೋ ಅಥವಾ ಉದ್ಯಮಿಗಳ ಕೈಗೊಂಬೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೋ ಎಂದು ಸಾಮಾನ್ಯ ಜನರಲ್ಲಿ ಆತಂಕ ಮೂಡಿದೆ ಎಂದು ಆರೋಪಿಸಿ ಸರ್ಕಾರ ನೀಡುವ ಸಂಬಳಕಾದರೂ ಸ್ವಾಭಿಮಾನದಿಂದ ಮುಂದಿನ ದಿನಗಳಲ್ಲಿ ಪ್ರಾಮಾಣಿಕ ಕಾರ್ಯನಿರ್ವಹಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲು ಸಿದ್ದರಿದ್ದೇವೆ ಎಂದು ಸಭೆಯಲ್ಲಿ ತಮ್ಮ ಆಕ್ರೋಶ ಹೊರಹಾಕಿದರು.

ಸಮಸ್ಯೆ ಸ್ವೀಕರಿಸಿ ಮಾತನಾಡಿದ ತೋಟಗಾರಿಕೆ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ರೂಪಶ್ರೀ ಒಂದು ಕಾರ್ಖಾನೆಗಳಿದ್ದಲ್ಲಿ ಆ ಭಾಗದ ರೈತರ ಸಮಸ್ಯೆ ನನಗೂ ಹರಿವು ಇದೆ. ನಾನು ರೈತನ ಮಗಳು ಅಂತಹ ರೈತ ಸಂಕುಲದ ಆರೋಗ್ಯಕ್ಕೆ ಮತ್ತು ಪರಿಸರದ ಮೇಲೆ ಹಾನಿ ಉಂಟುಮಾಡುವ ಕಾರ್ಖಾನೆಯಾದರೆ ಅವರ ಮೇಲೆ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುತ್ತೇನೆ ಹಾಗೂ ಕಾರ್ಖಾನೆಯಿಂದ ಬರುವ ಹಾರುವ ಬೂದಿಯ ಬಗ್ಗೆ ನನಗೆ ಮತ್ತು ತಾಲೂಕು ರೈತರಿಗೆ ಶೀಘ್ರವೇ ವರದಿ ನೀಡುವಂತೆ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಲೋಕೇಶ್ ರವರಿಗೆ ಸಭೆಯಲ್ಲಿ ಸೂಚಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಸತೀಶ್, ತಾ.ಪಂ ಅಭಿವೃದ್ದಿ ಅಧಿಕಾರಿ ನರಸಿಂಹರಾಜು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಡಿ.ಲೋಕೇಶ್, ಹಿರಿಯ ರೈತ ಮುಖಂಡರಾದ ಮಂದಗೆರೆ ಜಯರಾಮ್.ಜಗದೀಶ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಸಂಘದ ತಾಲೂಕು ಕಾರ್ಯದರ್ಶಿ ಬೂಕನಕೆರೆ ನಾಗರಾಜು,ಮಾಕವಳ್ಳಿ ರವಿ, ಕರೋಟಿ ತಮ್ಮಯ್ಯ,ಹೊನ್ನೇಗೌಡ,ಪಿ.ಬಿ ಮಂಚನಹಳ್ಳಿ ನಾಗೇಗೌಡ, ನಗರೂರು ಕುಮಾರ್, ಕೃಷ್ಣಾಪುರ ರಾಜಣ್ಣ, ಚೌಡೇನಹಳ್ಳಿ ಕೃಷ್ಣೇಗೌಡ, ಕಾರಿನಗಹಳ್ಳಿ ಮಂಜುನಾಥ್ ಸೇರಿದಂತೆ ರೈತರಿದ್ದರು.

Tags: CorruptionformersprotestkrpeteMakavalliofficersraitasanghasugarfactory
Previous Post

48 ಗಂಟೆಯಲ್ಲಿ 4 ಕ್ಷೇತ್ರದ ಬಂಡಾಯಕ್ಕೆ ಬ್ರೇಕ್ ಹಾಕಿದ ಯಡಿಯೂರಪ್ಪ ! ರಾಜಾಹುಲಿ ಫುಲ್ ಆಕ್ಟಿವ್ ! 

Next Post

ಬಿಜೆಪಿಯಲ್ಲಿ ರಾಜಾಹುಲಿಗೆ ಭಾರೀ ಡಿಮ್ಯಾಂಡ್ ! ನಾಮಪತ್ರ ಸಲ್ಲಿಕೆಗೆ ಬರಲೇಬೇಕು ಎಂದು ಅಭ್ಯರ್ಥಿಗಳ ಪಟ್ಟು !

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕೇಸರಿ ಅಭ್ಯರ್ಥಿಗ ‘ನಾಮಪತ್ರ’ ಪರ್ವ..! ‘ರಾಜಾಹುಲಿ’ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..! BSY ಫುಲ್ ಬ್ಯುಸಿ

ಬಿಜೆಪಿಯಲ್ಲಿ ರಾಜಾಹುಲಿಗೆ ಭಾರೀ ಡಿಮ್ಯಾಂಡ್ ! ನಾಮಪತ್ರ ಸಲ್ಲಿಕೆಗೆ ಬರಲೇಬೇಕು ಎಂದು ಅಭ್ಯರ್ಥಿಗಳ ಪಟ್ಟು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada