• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ..!!

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ (Dr. CN Ashwath Narayan) ಅವರು ಆರೋಪಿಸಿದ್ದಾರೆ.

ADVERTISEMENT


ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಕಲಬುರ್ಗಿ ಜಿಲ್ಲೆಯ ಗ್ರಂಥಾಲಯದ ಗ್ರಂಥಪಾಲಕಿ ಭಾಗ್ಯವತಿ ಅವರು 15 ತಿಂಗಳಿಂದ ಗ್ರಂಥಾಲಯದ ದಿನಪತ್ರಿಕೆ ಬಿಲ್ಲನ್ನು ಪಾವತಿಸಿಲ್ಲ, ಕರೆಂಟ್ ಬಿಲ್ಲನ್ನು ಪಾವತಿಸಿಲ್ಲ, ಗ್ರಂಥಾಲಯದಲ್ಲಿ ಕಾರ್ಯವನ್ನು ಮಾಡುವುದಕ್ಕೆ ಯಾವುದೇ ರೀತಿಯ ಸಹಕಾರ ಇಲ್ಲ. ಗ್ರಂಥಪಾಲಕಿ ಪ್ರತಿನಿತ್ಯ ಅನುಭವಿಸುತ್ತಿದ್ದ ಅವಮಾನ ಮತ್ತು ಅಸಹಾÀಯಕತೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡು ಸರ್ಕಾರಕ್ಕೆ ಬಹಳ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ವಿವರಿಸಿದರು. ಲಜ್ಜೆಗೆಟ್ಟ ಈ ಸರ್ಕಾರ ಯಾವ ಜವಾಬ್ದಾರಿ ಇಲ್ಲದೆ ಮನಬಂದಂತೆ ಏನು ಬೇಕಾದರೂ ಮಾಡಿ ಜಯಿಸಬಹುದು; ಯಾವುದರ ಬಗ್ಗೆ ಪರಿಜ್ಞಾನ ಇಲ್ಲದಿದ್ದರೂ ಕಾರ್ಯ ನಿರ್ವಹಿಸುತ್ತಿರುವ ಇಂತಹ ಕೆಟ್ಟ ಸರ್ಕಾರವನ್ನು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಬಯಲಿಗೆಳೆಯುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಎಂದು ತಿಳಿಸಿದರು.

ಒಳಜಗಳದಿಂದ ಬೆಂಗಳೂರು ಕಡೆಗಣನೆ…
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಂಗಳೂರು ನಗರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಒಳಜಗಳದಿಂದ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ (Dr. CN Ashwath Narayan) ಅವರು ಆರೋಪಿಸಿದರು. ಇಂದು ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಆಗುತ್ತಿಲ್ಲ, ಕಸ ವಿಲೇವಾರಿ ಮಾಡುವುದಕ್ಕೆ ಆಗುತ್ತಿಲ್ಲ ಮತ್ತು ಕಾನೂನು ಸುವ್ಯವಸ್ಥೆ ನೀಡುವುದಕ್ಕೆ ವಿಫಲರಾಗಿದ್ದಾರೆ ಎಂದು ತಿಳಿಸಿದರು. ಉದ್ಯಮಿಗಳಾದ ಕಿರಣ್ ಮಜುಂದಾರ್-ಶಾ ಅವರು, ಮೋಹನ್ ದಾಸ್ ಪೈ, ಬ್ಲಾಕ್ ಬಕ್‍ನ ಸಿಇಒ ಅವರು ಬೆಂಗಳೂರು ಅವ್ಯವಸ್ಥೆ ಬಗ್ಗೆ ಹೇಳುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಬೆದರಿಕೆ ಹಾಕುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಯಾರಾದರೂ ಖಂಡಿಸಿದರೆ, ಪ್ರಶ್ನೆ ಮಾಡಿದರೆ ಅವರು ಬಿಜೆಪಿ ಬೆಂಬಲಿಗರು ಎಂದು ಹೇಳುತ್ತಾರೆ. ಅವರು ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ (Dr. B R Ambedkar) ಅವರ ಬಗ್ಗೆ ಉಲ್ಲೇಖ ಮಾಡುತ್ತಿರುತ್ತಾರೆ. ಅವರಿಗೆ ನೈತಿಕತೆ ಇದೆಯೇ?; ಅವರು ಯಾವ ಪ್ರಜಾಪ್ರಭುತ್ವವನ್ನು ಗೌರವಿಸುತ್ತಾರೆ ಹಾಗೂ ಪ್ರಜಾಪ್ರಭುತ್ವದ ಅವರಿಗೆ ತಿಳಿದಿದೆಯೇ ಎಂದು ಕೇಳಿದರು.


ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರ ಮಗನಾಗಿರುವುದಕ್ಕೆ ಇಂದು ಅವರಿಗೆ ಸ್ಥಾನ ಸಿಕ್ಕಿದೆ. ಪ್ರಿಯಾಂಕ್ ಖರ್ಗೆ(Priyank Kharge) ಆಗಿಲ್ಲದ್ದಿದ್ದರೆ ಅವರ ವಿದ್ಯಾರ್ಹತೆಗೆ ಕಚೇರಿ ಸಹಾಯಕ ಉದ್ಯೋಗವೂ ಸಿಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಸಾರ್ವಜನಿಕರು, ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಸರಣಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಾವು ಕಾಣುತ್ತಿದ್ದೇವೆ ಎಂದು ಆಕ್ಷೇಪಿಸಿದರು. ಇಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಜಿಲ್ಲೆ ಮತ್ತು ಇಲಾಖೆ ಯಲ್ಲಿ ವೇತನ ನೀಡಿರುವುದಿಲ್ಲ. ಇದೆಲ್ಲವನ್ನು ಗಮನಿಸಿದ ಮಹಾನ್ ದೇಶಭಕ್ತ, ಮಹಾನ್ ಸಾಧಕ ಎಲ್ಲಿ ಹೋಗಿದ್ದೀರ ಎಂದು ಪ್ರಶ್ನಿಸಿದರು.


ಇಂತಹ ವಿಚಾರಗಳು ಇದ್ದಾಗ ಪ್ರಿಯಾಂಕ್ ಖರ್ಗೆ (Priyank Kharge) ಅವರ ಧ್ವನಿ ಅಡಗಿ ಹೋಗುತ್ತದೆ. ಎಷ್ಟಾದರೂ ಹೇಳಿ; ಏನಾದರೂ ಹೇಳಿ- ಅವರು ವಿಚಾರಗಳ ಸೂಕ್ಷ್ಮತೆಯನ್ನೇ ಕಳೆದುಕೊಂಡಿದ್ದಾರೆ ಎಂದರು. ಎಷ್ಟೇ ಅಂಕುಶದಲ್ಲಿ ಅವರಿಗೆ ಚುಚ್ಚಿದರು ತಲೆಗೆ ಬಂದ ಹಾಗೆ, ಮನಬಂದ ಹಾಗೆ ಮಾತನಾಡುತ್ತಾರೆ. ರಾಜ್ಯದ ಜನ ಪಶ್ಚಾತ್ತಾಪಪಡುತ್ತಿದ್ದು, ಜನರ ಜೀವವನ್ನು ತೆಗೆದುಕೊಳ್ಳುವ ಸರ್ಕಾರ ತೊಲಗಲಿ; ಸಾಕಪ್ಪ ಸಾಕು ಈ ಸರ್ಕಾರ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್(R Ashok), ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ (P Rajeev) ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ (Ashwath Narayan) ಅವರು ಉಪಸ್ಥಿತರಿದ್ದರು

Tags: BJPbjp karnatakaCN Ashwath NarayancongressCongress GovtKalburgiKarnatakaMallikarjun KhargePriyank KhargeR AshokRSSSanjeev
Previous Post

CM Siddaramaiah: ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು..!!

Next Post

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ” .

Related Posts

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು
ಇತರೆ / Others

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

by ಪ್ರತಿಧ್ವನಿ
November 19, 2025
0

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋಗಳ ವೈರಲ್ ಸಂಬಂಧ ದಾಖಲಾಗಿರೋ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಕೇಳಿಬಂದಿದೆ. ವಿಡಿಯೋಗಳ ವೈರಲ್ ಸಂಬಂಧ ಪರಪ್ಪನ ಅಗ್ರಹಾರ...

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ "ಕೊರಗಜ್ಜ" .

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada