• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸುಮಲತಾ, ದೇವೇಗೌಡರಿಗಾಗಿ ಹೊಂದಾಣಿಕೆ ಆಗಿತ್ತು..! ಗುಟ್ಟು ರಟ್ಟು.. ಜನರಿಗೆ ಸಿಟ್ಟು…!

ಕೃಷ್ಣ ಮಣಿ by ಕೃಷ್ಣ ಮಣಿ
May 4, 2023
in ರಾಜಕೀಯ
0
ಸುಮಲತಾ, ದೇವೇಗೌಡರಿಗಾಗಿ ಹೊಂದಾಣಿಕೆ ಆಗಿತ್ತು..! ಗುಟ್ಟು ರಟ್ಟು.. ಜನರಿಗೆ ಸಿಟ್ಟು…!
Share on WhatsAppShare on FacebookShare on Telegram

2019ರಲ್ಲಿ ನಡೆದು ಲೋಕಸಭಾ ಚುನಾವಣೆ(karnataka assembly election2023) ವೇಳೆ ಕಾಂಗ್ರೆಸ್(congress)​ ಹಾಗೂ ಜೆಡಿಎಸ್(JDS)​ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿತ್ತು. ಕರ್ನಾಟಕದಲ್ಲಿ(karnataka) ಮೈತ್ರಿ ಮಾಡಿಕೊಂಡೇ ಚುನಾವಣೆ ನಡೆಸಿದ್ದವು. ಆದರೂ ಬಿಜೆಪಿ ವಿರುದ್ಧ ಗೆದ್ದು ಬೀಗುವುದಕ್ಕೆ ಸಾಧ್ಯವಾಗಿರಲಿಲ್ಲ. ಬರೋಬ್ಬರಿ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಭಾರತೀಯ ಜನತಾ ಪಾರ್ಟಿ, ಮೈತ್ರಿ ಸರ್ಕಾರವನ್ನು ಮುಜುಗರಕ್ಕೆ ಈಡು ಮಾಡುವುದರಲ್ಲಿ ಯಶಸ್ವಿಯಾಗಿತ್ತು. ಆ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರವೂ ಮುರಿದು ಬಿದ್ದಿತ್ತು. ಆದರೆ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ರಾಜಕೀಯ ದಾಳ ಉರುಳಿಸಿದ್ದ ಕಾಂಗ್ರೆಸ್(congress)​ ನಾಯಕರು ಇಬ್ಬರು ನಾಯಕರ ಸೋಲು ಗೆಲುವಿಗೆ ಸಾಕ್ಷಿಯಾಗಿತ್ತು. ಮಂಡ್ಯದಲ್ಲಿ ಸುಮಲತಾ ಅವರನ್ನು ಗೆಲ್ಲಿಸಿ ನಿಖಿಲ್​ ಕುಮಾರಸ್ವಾಮಿಯನ್ನು(nikil kumaraswamy) ಸೋಲಿಸುವ ಕೆಲಸವನ್ನು ಕಾಂಗ್ರೆಸ್​ ಮಾಡಿತ್ತು ಎನ್ನುವುದು ಜೆಡಿಎಸ್​​ನ ಆರೋಪ ಆಗಿತ್ತು.

ADVERTISEMENT

ಮಂಡ್ಯದಲ್ಲಿ ಜೆಡಿಎಸ್​ಗೆ ದ್ರೋಹ ಮಾಡಿತ್ತು ಸತ್ಯ..!

ಈ ಮಾತನ್ನು ಜೆಡಿಎಸ್​​(JDS) ಮೈತ್ರಿ ಸರ್ಕಾರ ಬಿದ್ದ ಕೂಡಲೇ ಹೇಳಿತ್ತು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್​ ಪಕ್ಷವನ್ನು ಸೋಲಿಸುವ ಕೆಲಸ ಮಾಡಿತ್ತು ಎಂದು ಆರೋಪಿಸಿತ್ತು. ಆದರೆ ಕಾಂಗ್ರೆಸ್​ ನಾಯಕರು ಜೆಡಿಎಸ್​ ಆರೋಪವನ್ನು ಅಲ್ಲಗಳೆದಿದ್ದರು. ಆದರೆ ಇದೀಗ ಜೆಡಿಎಸ್​​ ಆರೋಪವನ್ನು ಒಪ್ಪಿಕೊಂಡಿದೆ. ನಿನ್ನೆ ಮಂಡ್ಯ ಜಿಲ್ಲಾ ಪ್ರವಾಸ ಮಾಡಿದ್ದ ಸಿದ್ದರಾಮಯ್ಯ, ನಾಗಮಂಗಲದಲ್ಲಿ ಭಾಷಣ ಮಾಡಿದ್ದರು. ಕಳೆದ ಬಾರಿ ಜೆಡಿಎಸ್ ಕ್ಯಾಂಡಿಡೇಟ್​​ಗೆ ಮತ ಹಾಕಿಸು ಎಂದು ಚಲುವರಾಯಸ್ವಾಮಿಗೆ ಹೇಳಿದ್ದೆ. ಆದರೆ ಜನ ಯಾಕೋ ಮಾತು ಕೇಳ್ತಿಲ್ಲ ಅಂದಿದ್ರು. ಈಗ ನನಗೆ ಅನ್ನಿಸ್ತಿದೆ ಆ ಯಮ್ಮನ್ನ (ಸುಮಲತಾ) ಗೆಲ್ಲಿಸಿ ತಪ್ಪು ಮಾಡಿದ್ವಿ ಅಂತ ಹೇಳುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಷ್​ ವಿರುದ್ಧ ಸಿದ್ದರಾಮಯ್ಯ(siddaramaiah) ವಾಗ್ದಾಳಿ ಮಾಡಿದ್ದಾರೆ.

ದೇವೇಗೌಡರನ್ನು ಸೋಲಿಸಲು ನಾನು ಕೆಲಸ ಮಾಡಿದೆ..!

ದೇವೇಗೌಡರು ಈಗಾಗಲೇ ಇಬ್ಬರ ಮೇಲೆ ಹೋಗ್ತಿದ್ದಾರೆ, ಇನ್ನು ಕೆಲವೇ ದಿನಗಳಲ್ಲಿ ನಾಲ್ವರ ಮೇಲೆ ಹೋಗ್ತಾರೆ ಎನ್ನುವ ಮೂಲಕ ದೇವೇಗೌಡರ ಸಾವನ್ನು ಬಯಸಿದ್ದ ಕೆ.ಎನ್​ ರಾಜಣ್ಣ, ಮಧುಗಿರಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈಗ ಚುನಾವಣೆ ಪ್ರಚಾರದ ಸಮಯದಲ್ಲಿ ಕೆ.ಎನ್​ ರಾಜಣ್ಣ ಮಾತನಾಡಿ, ಕಳೆದ ಬಾರಿ ಜೆಡಿಎಸ್​ ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಆಗಿದ್ದ ದೇವೇಗೌಡರನ್ನು ಸೋಲಿಸಲು ನಾನು ಕೆಲಸ ಮಾಡಿದ್ದೆ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು ಎಂದಿದ್ದರು. ಅಂದರೆ ಈಗ ಬಿಜೆಪಿ ಕಾರ್ಯಕರ್ತರು ನನ್ನನ್ನು ಬೆಂಬಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದಾರೆ. ಆದರೆ ಇದು ಜೆಡಿಎಸ್​​ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ದೇವೇಗೌಡರನ್ನು ಸೋಲಿಸುವ ಹುನ್ನಾರ ಮಾಡಿದ ಕೆ.ಎನ್​ ರಾಜಣ್ಣನನ್ನು ಸೋಲಿಸಲೇಬೇಕು ಅನ್ನೋ ಚರ್ಚೆಗಳು ಶುರುವಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್​ ಗೆಲುವಿಗೆ ಸಿದ್ದು ಮಾತೇ ಅಡ್ಡಿ..!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಬಾರಿ ಏಳಕ್ಕೆ ಏಳೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್​​, ಈ ಬಾರಿ ಒಂದೆರಡು ಸ್ಥಾನಗಳನ್ನು ಕಾಂಗ್ರೆಸ್​ಗೆ ಬಿಟ್ಟು ಕೊಡಬಹುದು ಅನ್ನೋ ಲೆಕ್ಕಾಚಾರ ಶುರುವಾಗಿತ್ತು. ಆದರೆ ನಾಗಮಂಗಲದಲ್ಲಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕಾಂಗ್ರೆಸ್​ ಗೆಲ್ಲುವ ಸ್ಥಾನಗಳಿಗೂ ಕೊಕ್ಕೆ ಹಾಕುವ ಸಾಧ್ಯತೆಯಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದ ಎನ್​ ಚಲುವರಾಯಸ್ವಾಮಿ ಸುಮಲತಾ ಬೆಂಬಲಿಸಿ, ನಿಖಿಲ್​ ಸೋಲಿಸಲು ಕಾರಣಕರ್ತ ಆಗಿದ್ದರು ಎನ್ನೋ ಮಾತಿಗೆ ಸಿದ್ದರಾಮಯ್ಯ ಸಾಕ್ಷ್ಯ ಕೊಟ್ಟಂತಾಗಿದೆ. ಇದೀಗ ಚಲುವರಾಯಸ್ವಾಮಿಯನ್ನು ಜೆಡಿಎಸ್​​ ಕಾರ್ಯಕರ್ತರು ಸೋಲಿಸಲು ಪಣತೊಟ್ಟಂತೆ ಕಾಣಿಸುತ್ತಿದೆ. ಚುನಾವಣೆ ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ಸಿದ್ದರಾಮಯ್ಯ ಕೊಟ್ಟ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ ಗೆಲುವಿಗೆ ಸಹಕಾರಿ ಆದಂತಿದೆ. ಒಟ್ಟಿನಲ್ಲಿ ಮೈತ್ರಿ ಸರ್ಕಾರದಲ್ಲಿ ಇದ್ದುಕೊಂಡು ಹೊಂದಾಣಿಕೆ ರಾಜಕಾರಣ(politics) ಮಾಡಿದ್ದ ಜೆಡಿಎಸ್​ಗೆ(JDS) ಕಾಂಗ್ರೆಸ್​ ದ್ರೋಹ ಮಾಡಿದ್ದನ್ನು ಹಳೇ ಮೈಸೂರು ಭಾಗ ಯಾವ ರೀತಿ ಸ್ವೀಕರಿಸುತ್ತದೆ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಗಬೇಕಿದೆ.

Tags: #bjp#election2023#jds#karnataka#karnatakaassemblyelection#karnatakaassemblyelection #election2023 #karnataka #bjp #congress #siddaramaiah #tweet #bjp #socialmedia #pratidhvani #pratidhvanidigital #pratidhvaninews#politics#pratidhvani#pratidhvanidigital#pratidhvaninews
Previous Post

ಚುನಾವಣಾ ಪ್ರಚಾರಕ್ಕಾಗಿ ದೇವದುರ್ಗಕ್ಕೆ ಬಂದಿಳಿದ ಕಿಚ್ವ ಸುದೀಪ್: ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ..!

Next Post

ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada