• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸುಮಲತಾ, ದೇವೇಗೌಡರಿಗಾಗಿ ಹೊಂದಾಣಿಕೆ ಆಗಿತ್ತು..! ಗುಟ್ಟು ರಟ್ಟು.. ಜನರಿಗೆ ಸಿಟ್ಟು…!

ಕೃಷ್ಣ ಮಣಿ by ಕೃಷ್ಣ ಮಣಿ
May 4, 2023
in ರಾಜಕೀಯ
0
ಸುಮಲತಾ, ದೇವೇಗೌಡರಿಗಾಗಿ ಹೊಂದಾಣಿಕೆ ಆಗಿತ್ತು..! ಗುಟ್ಟು ರಟ್ಟು.. ಜನರಿಗೆ ಸಿಟ್ಟು…!
Share on WhatsAppShare on FacebookShare on Telegram

2019ರಲ್ಲಿ ನಡೆದು ಲೋಕಸಭಾ ಚುನಾವಣೆ(karnataka assembly election2023) ವೇಳೆ ಕಾಂಗ್ರೆಸ್(congress)​ ಹಾಗೂ ಜೆಡಿಎಸ್(JDS)​ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿತ್ತು. ಕರ್ನಾಟಕದಲ್ಲಿ(karnataka) ಮೈತ್ರಿ ಮಾಡಿಕೊಂಡೇ ಚುನಾವಣೆ ನಡೆಸಿದ್ದವು. ಆದರೂ ಬಿಜೆಪಿ ವಿರುದ್ಧ ಗೆದ್ದು ಬೀಗುವುದಕ್ಕೆ ಸಾಧ್ಯವಾಗಿರಲಿಲ್ಲ. ಬರೋಬ್ಬರಿ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಭಾರತೀಯ ಜನತಾ ಪಾರ್ಟಿ, ಮೈತ್ರಿ ಸರ್ಕಾರವನ್ನು ಮುಜುಗರಕ್ಕೆ ಈಡು ಮಾಡುವುದರಲ್ಲಿ ಯಶಸ್ವಿಯಾಗಿತ್ತು. ಆ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರವೂ ಮುರಿದು ಬಿದ್ದಿತ್ತು. ಆದರೆ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಮಾಡಿಕೊಂಡು ರಾಜಕೀಯ ದಾಳ ಉರುಳಿಸಿದ್ದ ಕಾಂಗ್ರೆಸ್(congress)​ ನಾಯಕರು ಇಬ್ಬರು ನಾಯಕರ ಸೋಲು ಗೆಲುವಿಗೆ ಸಾಕ್ಷಿಯಾಗಿತ್ತು. ಮಂಡ್ಯದಲ್ಲಿ ಸುಮಲತಾ ಅವರನ್ನು ಗೆಲ್ಲಿಸಿ ನಿಖಿಲ್​ ಕುಮಾರಸ್ವಾಮಿಯನ್ನು(nikil kumaraswamy) ಸೋಲಿಸುವ ಕೆಲಸವನ್ನು ಕಾಂಗ್ರೆಸ್​ ಮಾಡಿತ್ತು ಎನ್ನುವುದು ಜೆಡಿಎಸ್​​ನ ಆರೋಪ ಆಗಿತ್ತು.

ADVERTISEMENT

ಮಂಡ್ಯದಲ್ಲಿ ಜೆಡಿಎಸ್​ಗೆ ದ್ರೋಹ ಮಾಡಿತ್ತು ಸತ್ಯ..!

ಈ ಮಾತನ್ನು ಜೆಡಿಎಸ್​​(JDS) ಮೈತ್ರಿ ಸರ್ಕಾರ ಬಿದ್ದ ಕೂಡಲೇ ಹೇಳಿತ್ತು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್​ ಪಕ್ಷವನ್ನು ಸೋಲಿಸುವ ಕೆಲಸ ಮಾಡಿತ್ತು ಎಂದು ಆರೋಪಿಸಿತ್ತು. ಆದರೆ ಕಾಂಗ್ರೆಸ್​ ನಾಯಕರು ಜೆಡಿಎಸ್​ ಆರೋಪವನ್ನು ಅಲ್ಲಗಳೆದಿದ್ದರು. ಆದರೆ ಇದೀಗ ಜೆಡಿಎಸ್​​ ಆರೋಪವನ್ನು ಒಪ್ಪಿಕೊಂಡಿದೆ. ನಿನ್ನೆ ಮಂಡ್ಯ ಜಿಲ್ಲಾ ಪ್ರವಾಸ ಮಾಡಿದ್ದ ಸಿದ್ದರಾಮಯ್ಯ, ನಾಗಮಂಗಲದಲ್ಲಿ ಭಾಷಣ ಮಾಡಿದ್ದರು. ಕಳೆದ ಬಾರಿ ಜೆಡಿಎಸ್ ಕ್ಯಾಂಡಿಡೇಟ್​​ಗೆ ಮತ ಹಾಕಿಸು ಎಂದು ಚಲುವರಾಯಸ್ವಾಮಿಗೆ ಹೇಳಿದ್ದೆ. ಆದರೆ ಜನ ಯಾಕೋ ಮಾತು ಕೇಳ್ತಿಲ್ಲ ಅಂದಿದ್ರು. ಈಗ ನನಗೆ ಅನ್ನಿಸ್ತಿದೆ ಆ ಯಮ್ಮನ್ನ (ಸುಮಲತಾ) ಗೆಲ್ಲಿಸಿ ತಪ್ಪು ಮಾಡಿದ್ವಿ ಅಂತ ಹೇಳುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಷ್​ ವಿರುದ್ಧ ಸಿದ್ದರಾಮಯ್ಯ(siddaramaiah) ವಾಗ್ದಾಳಿ ಮಾಡಿದ್ದಾರೆ.

ದೇವೇಗೌಡರನ್ನು ಸೋಲಿಸಲು ನಾನು ಕೆಲಸ ಮಾಡಿದೆ..!

ದೇವೇಗೌಡರು ಈಗಾಗಲೇ ಇಬ್ಬರ ಮೇಲೆ ಹೋಗ್ತಿದ್ದಾರೆ, ಇನ್ನು ಕೆಲವೇ ದಿನಗಳಲ್ಲಿ ನಾಲ್ವರ ಮೇಲೆ ಹೋಗ್ತಾರೆ ಎನ್ನುವ ಮೂಲಕ ದೇವೇಗೌಡರ ಸಾವನ್ನು ಬಯಸಿದ್ದ ಕೆ.ಎನ್​ ರಾಜಣ್ಣ, ಮಧುಗಿರಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈಗ ಚುನಾವಣೆ ಪ್ರಚಾರದ ಸಮಯದಲ್ಲಿ ಕೆ.ಎನ್​ ರಾಜಣ್ಣ ಮಾತನಾಡಿ, ಕಳೆದ ಬಾರಿ ಜೆಡಿಎಸ್​ ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಆಗಿದ್ದ ದೇವೇಗೌಡರನ್ನು ಸೋಲಿಸಲು ನಾನು ಕೆಲಸ ಮಾಡಿದ್ದೆ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು ಎಂದಿದ್ದರು. ಅಂದರೆ ಈಗ ಬಿಜೆಪಿ ಕಾರ್ಯಕರ್ತರು ನನ್ನನ್ನು ಬೆಂಬಲಿಸಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದಾರೆ. ಆದರೆ ಇದು ಜೆಡಿಎಸ್​​ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ದೇವೇಗೌಡರನ್ನು ಸೋಲಿಸುವ ಹುನ್ನಾರ ಮಾಡಿದ ಕೆ.ಎನ್​ ರಾಜಣ್ಣನನ್ನು ಸೋಲಿಸಲೇಬೇಕು ಅನ್ನೋ ಚರ್ಚೆಗಳು ಶುರುವಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್​ ಗೆಲುವಿಗೆ ಸಿದ್ದು ಮಾತೇ ಅಡ್ಡಿ..!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಬಾರಿ ಏಳಕ್ಕೆ ಏಳೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್​​, ಈ ಬಾರಿ ಒಂದೆರಡು ಸ್ಥಾನಗಳನ್ನು ಕಾಂಗ್ರೆಸ್​ಗೆ ಬಿಟ್ಟು ಕೊಡಬಹುದು ಅನ್ನೋ ಲೆಕ್ಕಾಚಾರ ಶುರುವಾಗಿತ್ತು. ಆದರೆ ನಾಗಮಂಗಲದಲ್ಲಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕಾಂಗ್ರೆಸ್​ ಗೆಲ್ಲುವ ಸ್ಥಾನಗಳಿಗೂ ಕೊಕ್ಕೆ ಹಾಕುವ ಸಾಧ್ಯತೆಯಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದ ಎನ್​ ಚಲುವರಾಯಸ್ವಾಮಿ ಸುಮಲತಾ ಬೆಂಬಲಿಸಿ, ನಿಖಿಲ್​ ಸೋಲಿಸಲು ಕಾರಣಕರ್ತ ಆಗಿದ್ದರು ಎನ್ನೋ ಮಾತಿಗೆ ಸಿದ್ದರಾಮಯ್ಯ ಸಾಕ್ಷ್ಯ ಕೊಟ್ಟಂತಾಗಿದೆ. ಇದೀಗ ಚಲುವರಾಯಸ್ವಾಮಿಯನ್ನು ಜೆಡಿಎಸ್​​ ಕಾರ್ಯಕರ್ತರು ಸೋಲಿಸಲು ಪಣತೊಟ್ಟಂತೆ ಕಾಣಿಸುತ್ತಿದೆ. ಚುನಾವಣೆ ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ಸಿದ್ದರಾಮಯ್ಯ ಕೊಟ್ಟ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ ಗೆಲುವಿಗೆ ಸಹಕಾರಿ ಆದಂತಿದೆ. ಒಟ್ಟಿನಲ್ಲಿ ಮೈತ್ರಿ ಸರ್ಕಾರದಲ್ಲಿ ಇದ್ದುಕೊಂಡು ಹೊಂದಾಣಿಕೆ ರಾಜಕಾರಣ(politics) ಮಾಡಿದ್ದ ಜೆಡಿಎಸ್​ಗೆ(JDS) ಕಾಂಗ್ರೆಸ್​ ದ್ರೋಹ ಮಾಡಿದ್ದನ್ನು ಹಳೇ ಮೈಸೂರು ಭಾಗ ಯಾವ ರೀತಿ ಸ್ವೀಕರಿಸುತ್ತದೆ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಗಬೇಕಿದೆ.

Tags: #bjp#election2023#jds#karnataka#karnatakaassemblyelection#karnatakaassemblyelection #election2023 #karnataka #bjp #congress #siddaramaiah #tweet #bjp #socialmedia #pratidhvani #pratidhvanidigital #pratidhvaninews#politics#pratidhvani#pratidhvanidigital#pratidhvaninews
Previous Post

ಚುನಾವಣಾ ಪ್ರಚಾರಕ್ಕಾಗಿ ದೇವದುರ್ಗಕ್ಕೆ ಬಂದಿಳಿದ ಕಿಚ್ವ ಸುದೀಪ್: ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ..!

Next Post

ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

ʻನಂಬರ್ ಒನ್ ಕರ್ನಾಟಕದ ಬಗ್ಗೆ ಮಾತನಾಡುವ ಮೋದಿ, ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ : ಸಿದ್ದರಾಮಯ್ಯ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada