Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸುಮಲತಾ ಕಾಂಗ್ರೆಸ್ ಸೇರ್ಪಡೆ ಆಸೆಗೆ ಡಿಕೆಶಿ ಅಡ್ಡಿ : ಗುಟ್ಟು ಬಿಚ್ಚಿಟ್ಟ ಸಂಸದೆ!

ಪ್ರತಿಧ್ವನಿ

ಪ್ರತಿಧ್ವನಿ

January 12, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ ಸಂಸದೆ ಸುಮಲತಾ ಪಕ್ಷ ಸೇರ್ಪಡೆ ವಿಚಾರ ಇನ್ನು ಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕಾಂಗ್ರೆಸ್ ಸೇರಲು ನಡೆದಿದ್ದ ಪ್ರಯತ್ನ‌ಗಳ ಬಗ್ಗೆ ಸ್ವತಃ ಸುಮಲತಾ ಮಾತನಾಡಿದ್ದು, ಪಕ್ಷ ಸೇರ್ಪಡೆಗೆ ಅಡ್ಡಿಪಡಿಸಿದ ಡಿಕೆ ಶಿವಕುಮಾರ್ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್. ಬಿಜೆಪಿ ಅಸೋಸಿಯಟ್ ಮೆಂಬರ್ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ರು. ಏನನ್ನು ವಿಚಾರಿಸದೇ ಅವರ ಅಭಿಪ್ರಾಯ ಹೇಳುವುದು ತಪ್ಪು. ನಾನು ಎಂಪಿಯಾಗಿರುವ ಮೂರು ವರ್ಷದ ಅವಧಿಯಲ್ಲಿ ಡಿಕೆಶಿ ಜೊತೆ ಮಾತಾಡಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷರಾದವರು ಜಿಲ್ಲೆಯಲ್ಲಿ ಏನು ಆಗುತ್ತಿದೆ ಎಂದು ತಿಳಿದುಕೊಂಡು ಮಾತಾಡಬೇಕು. ನನ್ನ ಗಂಡ ಅಂಬರೀಶ್ ಅವರು 25 ವರ್ಷ ಕಾಂಗ್ರೆಸ್‌ನಲ್ಲಿ ಇದ್ರು. ನಾನು ಆರಂಭದಲ್ಲಿ ನನ್ನ ಲೈಫ್‌ನಲ್ಲಿ ಮಂಡ್ಯಗೆ ಟಿಕೆಟ್ ಕೊಡಿ ಎಂದಿದ್ದು ಕಾಂಗ್ರೆಸ್‌ ಕಾಂಗ್ರೆಸ್‌ನ್ನು ಬಿಟ್ಟು ಬೇರೆ ಯಾವ ಪಕ್ಷದಿಂದ ಟಿಕೆಟ್ ಕೇಳಿರಲಿಲ್ಲ. ಅಂಬರೀಶ್ ಅವರಿಗೆ ಎಲ್ಲಾ ಪಕ್ಷದ ನಾಯಕರ ಜೊತೆ ಉತ್ತಮ ಒಡನಾಟ ಇತ್ತು. ನಾನು ಯಾರನ್ನು ಬೇಕಾದ್ರು ಟಿಕೆಟ್ ಕೇಳಬಹುದಿತ್ತು. ನಾನು ಕೇಳಿದ್ದು ಕಾಂಗ್ರೆಸ್ ಪಕ್ಷವನ್ನು ಮಾತ್ರ.

ಅಂಬರೀಶ್ ಅವರು ಇದ್ದ ಪಕ್ಷ ಎಂದು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದ್ದೆ. ಆದರೆ ಆ ಟೈಂನಲ್ಲಿ ಟಿಕೆಟ್ ಕೊಡಲ್ಲ ಎಂದಿದ್ದೇ ಡಿ.ಕೆ.ಶಿವಕುಮಾರ್. ಮಂಡ್ಯ ಬೇಡಾ ನೀವು ಬೆಂಗಳೂರು ದಕ್ಷಿಣ ಅಥವಾ ಉತ್ತರದಲ್ಲಿ ನಿಂತುಕೊಳ್ಳಿ. ಮಂಡ್ಯದಲ್ಲಿ ತುಂಬಾ ಕಷ್ಟ ಆಗುತ್ತೆ ಮಂಡ್ಯ ಆಗಲ್ಲ ಎಂದಿದ್ದು ಡಿಕೆಶಿ. 

ಈ ಮಾತನ್ನು ಹೇಳಿದ್ದಾರೋ ಇಲ್ವೋ ಅವರನ್ನ ಕೇಳಿನೋಡಿ. ಇದನ್ನು ಅವರು ಒಪ್ಪಿಕೊಳ್ಳಲೇ ಬೇಕು. ಅವರು ಟಿಕೆಟ್ ಕೊಡಲು ಆಗಲ್ಲ ಎಂದಿದ್ದಕ್ಕೆ ನಾನು ಪಕ್ಷೇತರವಾಗಿ ನಿಂತೆ. ಚಾಮುಂಡಿ ತಾಯಿ ಅಣೆ; ನನಗೆ ಅನುಕೂಲ ಮಾಡಿಕೊಡಿ ಎಂದು ಯಾವ ಪಕ್ಷವನ್ನು ಕೇಳಿಕೊಂಡಿಲ್ಲ. ಪಕ್ಷೇತರವಾಗಿ ಗೆಲ್ಲಿಸಿದ ನನ್ನ ಜನರ ಋಣವನ್ನು‌ ನಾನು ತೀರಿಸಬೇಕು. ಆ ದಾರಿಯಲ್ಲಿ ನಾನು ನಡೆಯುತ್ತಿದ್ದೇನೆ. ಪಕ್ಷೇತರವಾಗಿ ಗೆದ್ದ ಶರತ್ ಬಚ್ಚೇಗೌಡ ರನ್ನು ಡಿಕೆಶಿ ಅಭಿನಂದನೆ ಮಾಡಿದ್ರು. ಮಂಡ್ಯದಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಬೇಕು ಅಂದಿದ್ರೆ ನನಗೂ ಅವರು ಅಭಿನಂದನೆ ಸಲ್ಲಿಸಬೇಕಿತ್ತು. ನನ್ನ ಉದ್ದೇಶ ಹಾಗೂ‌ ಮುಂದಿನ ನಡೆಯನ್ನು ಕೇಳಬೇಕಿತ್ತು. 

ಡಿಕೆಶಿಗೆ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಆಸೆ ಇದ್ಯಾ ಎಂಬ ಅನುಮಾನ ನನಗೆ ಇದೆ. ನಾನು ಕಾಂಗ್ರೆಸ್ ಸೇರಬಾರದು ಎಂಬ ರೀತಿಯಲ್ಲಿ ಡಿಕೆ ಶಿವಕುಮಾರ್ ನಡೆದುಕೊಳ್ತಿದ್ದಾರೆ. ನನ್ನ ಯಾರು ಸ್ವಾಗತಿಸುತ್ತಾರೋ ಅಲ್ಲಿಗೆ ನಾನು ಹೋಗುತ್ತೇನೆ. ನನಗೆ ಗೌರವ ಇಲ್ಲದ ಪಕ್ಷಕ್ಕೆ ನಾನು ಹೋಗಲ್ಲ ಎಂದರು.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ನನಗೆ ಸಿದ್ದರಾಮಯ್ಯ ಅವರೇ ಎದುರಾಳಿ ಆಗ್ಬೇಕಿತ್ತು.. ರಾಜಕೀಯ ಅಖಾಡಕ್ಕೆ ಆಹ್ವಾನ..!
ಕರ್ನಾಟಕ

ನನಗೆ ಸಿದ್ದರಾಮಯ್ಯ ಅವರೇ ಎದುರಾಳಿ ಆಗ್ಬೇಕಿತ್ತು.. ರಾಜಕೀಯ ಅಖಾಡಕ್ಕೆ ಆಹ್ವಾನ..!

by ಕೃಷ್ಣ ಮಣಿ
February 2, 2023
ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?
ಅಂಕಣ

ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?

by ಕೃಷ್ಣ ಮಣಿ
February 9, 2023
ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ
Top Story

ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

by ಪ್ರತಿಧ್ವನಿ
February 9, 2023
ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಸೂಲಿಬೆಲೆ
ಅಂಕಣ

ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಸೂಲಿಬೆಲೆ

by ಡಾ | ಜೆ.ಎಸ್ ಪಾಟೀಲ
February 3, 2023
ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್- ಏಪ್ರಿಲ್ 28ಕ್ಕೆ ರಿಲೀಸ್ ಆಗ್ತಿದೆ ಪ್ಯಾನ್ ಇಂಡಿಯಾ ಸಿನಿಮಾ
ದೇಶ

ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್- ಏಪ್ರಿಲ್ 28ಕ್ಕೆ ರಿಲೀಸ್ ಆಗ್ತಿದೆ ಪ್ಯಾನ್ ಇಂಡಿಯಾ ಸಿನಿಮಾ

by ಪ್ರತಿಧ್ವನಿ
February 6, 2023
Next Post
ಮೋದಿ ಭಾಯಿಯೋ, ಬೆಹನೋ ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ

ಮೋದಿ ಭಾಯಿಯೋ, ಬೆಹನೋ ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ

V. Somanna: ಒಬ್ಬ ವ್ಯಕ್ತಿ ಈ ಜಿಲ್ಲೆಗೆ ದೊಡ್ಡ ಶಕ್ತಿ ಅದೇ ಸುಧಾಕರ್..| Chikkaballapura Utsava | Pratidhvani

V. Somanna: ಒಬ್ಬ ವ್ಯಕ್ತಿ ಈ ಜಿಲ್ಲೆಗೆ ದೊಡ್ಡ ಶಕ್ತಿ ಅದೇ ಸುಧಾಕರ್..| Chikkaballapura Utsava | Pratidhvani

APPU | Chikkaballapur Utsav 2023 : ಚಿಕ್ಕಬಳ್ಳಾಪುರದಲ್ಲಿ ಪುನೀತ್ ರಾಜಕುಮಾರ್ ಉತ್ಸವ.. | Pratidhvani

APPU | Chikkaballapur Utsav 2023 : ಚಿಕ್ಕಬಳ್ಳಾಪುರದಲ್ಲಿ ಪುನೀತ್ ರಾಜಕುಮಾರ್ ಉತ್ಸವ.. | Pratidhvani

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist