ಮನೆಯಿಂದ ಹೊರಡುವಾಗ ಹಿಜಾಬ್ ಅಥವಾ ಬುರ್ಖಾ ಧರಿಸಿ ಶಾಲಾ ಕಾಂಪೌಂಡಿನವರೆಗೆ ಬರಲಿ. ಆದರೆ ತರಗತಿಯಲ್ಲಿ ಪಾಠ ಕೇಳುವಾಗ ಇತರರಂತೆ, ಸಮವಸ್ತ್ರದಲ್ಲಿಯೇ ಪಾಠ ಕೇಳಬೇಕು. ಇದೇ ಸಂಪ್ರದಾಯ. ಹಾಗೂ ಸಿದ್ದರಾಮಯ್ಯ ಹಾಗೂ ಇತರ ಸಂಘಟನೆಗಳಿಗೆ ನಾನು ಕೇಳುವುದು ಒಂದೇ ಪ್ರಶ್ನೆ. ಈ ಪ್ರಕರಣವನ್ನು ವ್ಯಕ್ತಿ ಸ್ವಾತಂತ್ರ್ಯ ಧಕ್ಕೆ ಎಂದು ಕೇಳುತ್ತಿರುವ ನೀವು, ಮಸೀದಿಗಳಲ್ಲಿ ಮಹಿಳೆಯರನ್ನು ಏಕೆ ಸೇರಿಸುತ್ತಿಲ್ಲ ಎಂದು ಯಾಕೆ ಪ್ರಶ್ನೆ ಮಾಡುತ್ತಿಲ್ಲ? ಇದು ವ್ಯಕ್ತಿ ಸ್ವಾತಂತ್ರ ಆಗುವುದಿಲ್ಲವೇ? ನಾನು ರಾಜ್ಯದ ಮುಸ್ಲಿಂ ಮಹಿಳೆಯರಿಗೆ ವಿನಂತಿ ಮಾಡುತ್ತೇನೆ. ತ್ರಿವಳಿ ತಲಾಕ್ ರದ್ದು ಮಾಡಿ ಭದ್ರತೆ ನೀಡಿದ್ದು ನಮ್ಮ ಮೋದಿ ಸರ್ಕಾರ. ಇದನ್ನು ಅರ್ಥ ಮಾಡಿಕೊಂಡು ಮುಂದಿನ ದಿನಗಳಲ್ಲಿ, ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಿ ಎಂದು ಸುನಿಲ್ ಕುಮಾರ್ ಮಾತನಾಡಿದ್ದಾರೆ.
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...
Read moreDetails





